ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ನಡೆದ ಹತ್ಯೆಗೆ ಸಕಲೇಶಪುರದ ನಂಟು?

|
Google Oneindia Kannada News

ಬೆಂಗಳೂರು, ನವೆಂಬರ್ 20 : ನಾಯಂಡಹಳ್ಳಿ ವಾರ್ಡ್ ಮಾಜಿ ಕಾರ್ಪೊರೇಟರ್ ರಾಜೇಶ್ವರಿ ಅವರ ಪತಿ ಉಮೇಶ್ ಬೆಳಗೋಡ್ ಅವರನ್ನು ಗುರುವಾರ ರಾತ್ರಿ ಹತ್ಯೆ ಮಾಡಲಾಗಿದೆ. ಉಮೇಶ್ ಅವರನ್ನು ಸಕಲೇಶಪುರ ಮೂಲದವರು ಕೊಲೆ ಮಾಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ಶಂಕಿಸಲಾಗಿದೆ.

ಬಿಎಚ್‍ಇಎಲ್ ಉದ್ಯೋಗಿಯಾಗಿದ್ದ ಉಮೇಶ್ ಅವರು ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಉಂಟಾದ ವೈಷಮ್ಯ ಕೊಲೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದು, ತನಿಖೆ ಮುಂದುವರೆದಿದೆ. [ಬೆಂಗಳೂರು ಎಟಿಎಂ ದಾಳಿಗೆ 2 ವರ್ಷ]

murder

ಗುರುವಾರ ರಾತ್ರಿ ಹತ್ಯೆ ನಡೆದಿತ್ತು : ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಾಟಾ ಶೋ ರೂಂ ಬಳಿ ಗುರುವಾರ ಉಮೇಶ್ ಬೆಳಗೋಡ್ ಅವರ ಹತ್ಯೆ ನಡೆದಿತ್ತು. ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಮೂರು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. [ಛೋಟಾ ಶಕಿಲ್ ಸಹಚರನ ಬಂಧನ]

ನವೆಂಬರ್ 19ರ ಗುರುವಾರ ಉಮೇಶ್ ಅವರ ಪತ್ನಿ ರಾಜೇಶ್ವರಿ ಅವರ ಹುಟ್ಟುಹಬ್ಬ. ರಾತ್ರಿ ಮನೆಗೆ ತೆರಳುತ್ತಿದ್ದಾಗ ಉಮೇಶ್ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಚ್ಚು ಬೀಸಿದ್ದರು. ತಕ್ಷಣ ಕಾರಿನಿಂದ ಇಳಿದು ಪರಾರಿಯಾಗಲು ಯತ್ನಿಸಿದ ಅವರನ್ನು ಅಟ್ಟಾಡಿಸಿಕೊಂಡು ಹೋದ ಹಂತಕರು ನಡುರಸ್ತೆಯಲ್ಲಿ ಕೊಚ್ಚಿ ಪರಾರಿಯಾಗಿದ್ದರು.

English summary
Nayandahalli ward former BJP corporator Rajeshwari husband Umesh Belagodu (48) was hacked to death by unidentified men in Rajarajeshwarinagar police limits of Bengaluru on Thursday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X