‘ಡಿಕೆ’ ಬ್ರದರ್ಸ್ ಕಟ್ಟಿಹಾಕಲು ದೇವೇಗೌಡರ ಅಳಿಯ ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟ್ರಿ?
ಲೋಕಸಭೆ ಚುನಾವಣೆ 2024 ಹತ್ತಿರ ಬರುತ್ತಿದ್ದಂತೆ ಸೀನ್ ಬೇರೆ ರೀತಿ ಟರ್ನ್ ಆಗುತ್ತಿದ್ದು, ಸಿಕ್ಕಾಪಟ್ಟೆ ಕುತೂಹಲ ಸೃಷ್ಟಿಯಾಗಿದೆ. ಅದ್ರಲ್ಲೂ ಈ ಬಾರಿ ಹಳೇ ಮೈಸೂರು ಭಾಗದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಜೆಡಿಎಸ್ ನಾಯಕರು ಸಜ್ಜಾಗಿದ್ದಾರೆ. ಈ ಸಮಯದಲ್ಲೇ 'ಡಿಕೆ' ಬ್ರದರ್ಸ್ ಕಟ್ಟಿಹಾಕಲು ದೇವೇಗೌಡರ ಅಳಿಯನನ್ನೇ ಲೋಕಸಭೆ ಚುನಾವಣೆ ಅಖಾಡಕ್ಕೆ ಇಳಿಸಲು, ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟ ರಣತಂತ್ರ ರೂಪಿಸಿದೆಯಂತೆ!
ಹೌದು ಈಗಿರುವ ಮಾಹಿತಿ ಪ್ರಕಾರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದಲೇ ಮಾಜಿ ಪ್ರಧಾನಿ ದೇವೇಗೌಡರ ಅಳಿಯ, ಮತ್ತು ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಮಂಜುನಾಥ್ ಅವರು ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಜೆಡಿಎಸ್ ವರಿಷ್ಠ & ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಬಂದ ಬಳಿಕ ಈ ಬಗ್ಗೆ ದೊಡ್ಡದಾಗಿ ಸುದ್ದಿ ಹಬ್ಬಿದೆ. ಅದ್ರಲ್ಲೂ ಬಿಜೆಪಿ ಕೇಂದ್ರ ನಾಯಕರೇ ಈ ಸಲಹೆ ನೀಡಿ, ಕುಮಾರಸ್ವಾಮಿ ಅವರ ಮನವೊಲಿಸಿದ್ದಾರೆ ಅಂತಾ ಹೇಳಲಾಗುತ್ತಿದೆ. ಈ ನಡುವೆ, ಖುದ್ದು ಅಮಿತ್ ಶಾ ಅವರೇ ಈ ರಣತಂತ್ರ ತಿಳಿಸಿದ್ದಾರೆ ಎಂಬ ಮಾತು ಕೂಡ ಓಡಾಡುತ್ತಿದೆ.

'ಡಿಕೆ' ಬ್ರದರ್ಸ್ಗೆ ಭೀಕರ ಸೋಲು?
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 'ಡಿಕೆ' ಬ್ರದರ್ಸ್ ದೊಡ್ಡ ಹಿಡಿತ ಹೊಂದಿದ್ದಾರೆ. ಈ ಪೈಕಿ ಕನಕಪುರ ಸೇರಿ ರಾಮನಗರ ಜಿಲ್ಲೆಯಲ್ಲಿ ದೊಡ್ಡ ಹೆಸರು ಕೂಡ ಇದೆ. ಹೀಗಿದ್ದರೂ, ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ. ಡಿಸಿಎಂ ಡಿಕೆ ಶಿವಕುಮಾರ್ ಅವರ ತಮ್ಮ ಮತ್ತು ಹಾಲಿ ಸಂಸದ ಡಿ.ಕೆ. ಸುರೇಶ್ 4ನೇ ಬಾರಿಗೂ ಕಣಕ್ಕೆ ಇಳಿಯುತ್ತಾರೆ ಎನ್ನಲಾಗಿದೆ. ಇಂತಹ ಸ್ಥಿತಿಯಲ್ಲಿ ಇದೀಗ ದೇವೇಗೌಡರ ಅಳಿಯ & ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರದ ಲೋಕಸಭೆ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಬಿಜೆಪಿ ನೇತೃತ್ವದ ಎನ್ಡಿಎ ಪ್ಲ್ಯಾನ್ ಮಾಡಿದೆ, ಎಂಬ ಸುದ್ದಿ ಹಬ್ಬಿದೆ. ಈ ಮೂಲಕ ಡಿ.ಕೆ. ಸುರೇಶ್ ಅವರನ್ನು ಸೋಲಿಸಲು ರಣತಂತ್ರ ಹೆಣೆಯಲಾಗಿದೆಯಂತೆ.
ಡಿಕೆ ಸುರೇಶ್ ಕ್ಷೇತ್ರ ಬದಲಾವಣೆ?
ಇದು ಒಂದು ಕಡೆಯಾದರೆ ಇನ್ನೊಂದು ಕಡೆ ಕರ್ನಾಟಕ ಹಾಲಿ ಉಪಮುಖ್ಯಮಂತ್ರಿ ಅವರ ತಮ್ಮ, ಅಂದ್ರೆ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಕ್ಷೇತ್ರ ಬದಲಾವಣೆ ಮಾಡ್ತಾರಾ? ಅಂತಾನೂ ಚರ್ಚೆ ಶುರುವಾಗಿದೆ. ಈಗ ಓಡಾಡುತ್ತಿರುವ ಸುದ್ದಿಗಳ ಪ್ರಕಾರ, ಡಿ.ಕೆ. ಸುರೇಶ್ ಅವರು ಬೆಂಗಳೂರು ಗ್ರಾಮಾಂತರ ಬಿಟ್ಟು ಬೆಂಗಳೂರು ಉತ್ತರಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆ ಸಖತ್ ಕುತೂಹಲ ಕೆರಳಿಸಿದೆ.
ಒಟ್ನಲ್ಲಿ ಹೀಗೆ 2024ರ ಲೋಕಸಭೆ ಚುನಾವಣೆ ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿದೆ. ಹೀಗಾಗಿ ಸೋಲು & ಗೆಲುವಿನ ಲೆಕ್ಕಾಚಾರ ಕೂಡ ಬಲು ಜೋರಾಗಿದೆ. ಅದ್ರಲ್ಲೂ ಈಗ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ದೇಶಾದ್ಯಂತ ಭಾರಿ ಕುತೂಹಲ ಕೆರಳಿಸುತ್ತಿದೆ. ಈ ಹಿನ್ನೆಲೆ ಯಾರು ಗೆಲ್ಲುತ್ತಾರೆ? ಯಾರು ಇಲ್ಲಿ ಸೋಲುತ್ತಾರೆ? ಯಾರಿಗೆ ಅಧಿಕಾರ ಸಿಗುತ್ತೆ? ಅನ್ನೋದನ್ನ ಕಾದು ನೋಡಬೇಕಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications