ಸ್ವಾತಂತ್ರ್ಯ ಉದ್ಯಾನದಲ್ಲಿ NDRF ಕಾರ್ಯಾಚರಣೆಯ ಕಲ್ಪಿತ ಪ್ರದರ್ಶನ
ಬೆಂಗಳೂರು, ಡಿಸೆಂಬರ್ 22: ಸ್ವಾತಂತ್ರ್ಯ ಉದ್ಯಾನದಲ್ಲಿ ಎನ್ಡಿಆರ್ಎಫ್ ನಡೆಸುವ ಅಪಾಯಕಾರಿ ಸನ್ನಿವೇಶಗಳ ಅಣಕು ಪ್ರದರ್ಶನ ನಡೆಯಿತು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಬೆಳಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು, 11 ಗಂಟೆ ಸುಮಾರಿಗೆ ಸ್ವಚ್ಛತಾ ಕಾರ್ಮಿಕರಿಗೆ ಅನುಮಾನಾಸ್ಪದ ಪೊಟ್ಟಣವೊಂದು ಸಿಕ್ಕಿ ಅವರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.
ಈ ಕುರಿತು ಪರಿಶೀಲನೆಗೆ ಬಂದಿದ್ದ ಇಬ್ಬರಲ್ಲಿ ಒಬ್ಬರು ಪೊಟ್ಟಣದಿಂದ ಹೊರಸೂಸುತ್ತಿದ್ದ ವಿಷಾನಿಲದಿಂದ ಮೂರ್ಛೆ ತಪ್ಪಿದ್ದರು. ಸುದ್ದಿ ತಿಳಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಆಗಮಿಸಿ ರೇಡಿಯೋ ಆಕ್ಟೀವ್ ಪೊಟ್ಟಣ ತೆರವುಗೊಳಿಸಿ ಸಂಭವಿಸಬಹುದಾಗಿದ್ದ ಅಪಾಯವನ್ನು ತಪ್ಪಿಸಿದರು.
ಬೆಂಗಳೂರು ಜಿಲ್ಲಾಡಳಿತ ಆಯೋಜಿಸಿದ್ದ ಅಣಕು ಕಾರ್ಯಾಚರಣೆಯ ಮೂಲಕ ಎನ್ಡಿಆರ್ಎಫ್ 10ನೇ ಬೆಟಾಲಿಯನ್ ಇನ್ಸ್ಪೆಕ್ಟರ್ ಬಬ್ಲೂ ವಿಶ್ವಾಸ್ ನೇತೃತ್ವದ ತಂಡ ಇಡೀ ಸನ್ನಿವೇಶವನ್ನು ಮನೋಜ್ಞವಾಗಿ ತೋರಿಸಿಕೊಟ್ಟಿತು.

ಇದಿಷ್ಟೂ ಸ್ವಾತಂತ್ರ್ಯ ಉದ್ಯಾನದಲ್ಲಿ ನಿಜವಾಗಿ ನಡೆದ ಘಟನೆಯಲ್ಲ, ಬದಲಿಗೆ, ಇಂತಹ ಸನ್ನಿವೇಶ ಎದುರಾದರೆ ಸಾರ್ವಜನಿಕರು, ಕಾರ್ಮಿಕರು ವಹಿಸಬೇಕಾದ ಹೊಣೆಗಾರಿಕೆ ಹಾಗೂ ಎನ್ಡಿಆರ್ಎಫ್ ನಡೆಸುವ ಕಾರ್ಯಾಚರಣೆಯ ಕಲ್ಪಿತ ಪ್ರದರ್ಶನವಾಗಿತ್ತು.
ದಾಳಿ ಸಂದರ್ಭದಲ್ಲಿ ಹೇಗೆ ವರ್ತಿಸಬೇಕು?:
ಬೇರೆ ಬೇರೆ ದೇಶಗಳ ವ್ಯವಸ್ಥೆಯನ್ನು ಅಸ್ಥಿರಗೊಳಿಸಲು ಬಾಂಬ್ ದಾಳಿ, ಗುಂಡಿನ ದಾಳಿ ನಡೆಸುವುದು ಸಾಮಾನ್ಯ. ಆದರೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಪಾಯಕಾರಿ ರಾಸಾಯನಿಕ, ಜೈವಿಕ, ರೇಡಿಯೋಲಾಜಿಕಲ್ ಹಾಗೂ ಅಣ್ವಸ್ತ್ರ ಮೂಲಕ ಮೌನವಾಗಿ ಸಾವಿರಾರು ಜನರ ಮೇಲೆ ದಾಳಿ ಮಾಡುವ ಸಾಧ್ಯತೆಯೂ ಇರುತ್ತದೆ. ಇಂತಹ ಸಂದರ್ಭದಲ್ಲಿ ಹೇಗೆ ವರ್ತಿಸಬೇಕು ಎನ್ನುವುದರ ಕುರಿತು ಕಲ್ಪಿತ ಕಾರ್ಯಾಚರಣೆ ನಡೆಸಲಾಯಿತು.
ದೆಹಲಿಯಲ್ಲಿ ಚಿಂದಿ ಆಯುವ ವ್ಯಕ್ತಿಯೊಬ್ಬನಿಗೆ ಇಂತಹ ಹೊಳೆಯುವ ಪೊಟ್ಟಣ ಸಿಕ್ಕಿ ಆತ ಅದನ್ನು ಜೇಬಿನಲ್ಲಿಟ್ಟುಕೊಂಡು ಅನೇಕ ದಿನ ಕಳೆದಿದ್ದ. ಆ ಸ್ಥಳದಲ್ಲಿ ವಿಕಿರಣದಿಂದ ಹಾನಿಯಾಗಿ, ವೈದ್ಯರ ತೋರಿಸಿದಾಗ ವಿಷಯ ತಿಳಿದುಬಂದಿತ್ತು.ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದ ವಸ್ತುಗಳು ದೊರಕಿದಾಗ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು.
Recommended Video
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications