ದಂತ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಸುಧಾಕರ್
ಬೆಂಗಳೂರು, ಫೆಬ್ರವರಿ 9: ದಂತ ಆರೋಗ್ಯಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ದಂತ ವೈದ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊರದೇಶಗಳಲ್ಲಿ ಜನರು ವರ್ಷಕ್ಕೆ ಕನಿಷ್ಠ ಎರಡು ಬಾರಿ ದಂತ ಆರೋಗ್ಯದ ತಪಾಸಣೆ ಮಾಡಿಸಿಕೊಳ್ಳುತ್ತಾರೆ. ಆದರೆ ನಮ್ಮಲ್ಲಿ ಗ್ರಾಮೀಣ ಪ್ರದೇಶದ ಜನರು ಹಲ್ಲು ನೋವು ತಡೆಯಲಾರದ ಮಟ್ಟಿಗೆ ಬೆಳೆದ ಬಳಿಕವಷ್ಟೇ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯುತ್ತಾರೆ. ಹೊರದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ದಂತ ಆರೋಗ್ಯದ ಬಗ್ಗೆ ಜಾಗೃತಿ ಕಡಿಮೆ ಇದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ಹಳ್ಳಿಗಳ ಜನರು ಇಂದಿಗೂ ಇಟ್ಟಿಗೆ ಪುಡಿಯನ್ನು ಬಳಸಿ ಹಲ್ಲು ಉಜ್ಜುತ್ತಾರೆ. ಅನೇಕರಿಗೆ ಪೇಸ್ಟ್ ಬಳಸಬೇಕು ಎಂದು ಗೊತ್ತಿರುವುದಿಲ್ಲ. ಹೊರದೇಶಗಳಲ್ಲಿ ದಂತ ಚಿಕಿತ್ಸೆ, ತಪಾಸಣೆಗೆ ಬಹಳ ದೊಡ್ಡ ದರವಿದೆ. ಆದರೆ ನಮ್ಮ ದೇಶದಲ್ಲಿ ಕಡಿಮೆ ದರವಿದೆ. ಈ ವ್ಯವಸ್ಥೆಯನ್ನು ಬಳಸಿಕೊಂಡು ಜನರು ದಂತ ಆರೋಗ್ಯವನ್ನು ಸದಾ ಉತ್ತಮವಾಗಿರಿಸಿಕೊಳ್ಳಬೇಕು ಎಂದರು.

ಭಾರತೀಯ ವೈದ್ಯ ಪದ್ಧತಿ ಬಹಳ ಪುರಾತನವಾಗಿದೆ. ಚರಕ, ಸುಶ್ರುತ ಮೊದಲಾದ ವೈದ್ಯರು ಬೆಳೆಸಿದ ವೈದ್ಯ ಪದ್ಧತಿ ಇಂದಿನ ಕಾಲಕ್ಕೂ ಪ್ರಸ್ತುತವಾಗಿದೆ. ದಂತ ವೈದ್ಯಕೀಯ ಕ್ಷೇತ್ರದ ಹಿರಿಯರಾದ ಡಾ.ಎಸ್.ರಾಮಚಂದ್ರ ಅವರಿಗೆ ಈ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಿರುವುದು ಸಂತಸ ತಂದಿದೆ ಎಂದರು.
Recommended Video
-
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications