NEET Exam on May 7th: ಬೆಂಗಳೂರಿನ ಪ್ರಧಾನಿ ಮೋದಿ ರೋಡ್ ಶೋ ಮುಂದೂಡಿ: ಎಚ್ಡಿಕೆ
ಬೆಂಗಳೂರು, ಮೇ 05: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪರೀಕ್ಷೆ ಕೋರ್ಸ್ ಪ್ರವೇಶಕ್ಕೆ ದೇಶಾದ್ಯಂತ ನಡೆಸುವ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಇದೇ ಮೇ 7 ರಂದು ಭಾನುವಾರ ನಡೆಯಲಿದೆ. ಆದರೆ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಲ್ಲಿ ಸಂಚಾರ ಆತಂಕ ಎದುರಾಗಿದ್ದು, ಅದನ್ನು ದೂರ ಮಾಡಲು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನೀಟ್ ಪರೀಕ್ಷೆ ದಿನವೇ ಚುನಾವಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ನಡೆಯಲಿದೆ. ಅಂದು ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆ ಆಗದಂತೆ ರೋಡ್ ವೇಳಾಪಟ್ಟಿ ಬದಲಿಸಿಕೊಳ್ಳಬೇಕೆಂದು ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಜೆಪಿ ನಗರದ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋನಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ರೋಡ್ ಶೋಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದು ಹೇಳಿದರು.
ನಾಡಿನ ಜನರ ಸಮಸ್ಯೆಗಳಿಗಿಂತ ಬಿಜೆಪಿ ಪಕ್ಷದವರೆಗೆ ರಾಜ್ಯದ ಅಧಿಕಾರ ಹಿಡಿಯುವುದಷ್ಟೇ ಮುಖ್ಯವಾಗಿದೆ. ಅಧಿಕಾರಕ್ಕೋಸ್ಕರ ಅವರು ಏನು ಬೇಕಾದರೂ ಮಾಡುತ್ತಾರೆ. ಜನಸಾಮಾನ್ಯರ ಬದುಕಿನ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
ಸಾರ್ವಜನಿಕ ವಲಯದಲ್ಲಿ ಬಿಜೆಪಿ ರೋಡ್ ಶೋ ನಿರ್ಧಾರ ಇದು ಸರಿಯಾಗಿದ್ದಾ ಇಲ್ಲವೇ ತಪ್ಪಾ? ಎಂದು ಚರ್ಚೆ ನಡೆದರೂ ಅದನ್ನು ಬಿಜೆಪಿಯವರು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ದೇಶದ ಪ್ರಧಾನಮಂತ್ರಿಗಳು ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟ ಆಡುವುದು ಸರಿಯಲ್ಲ. ನೀಟ್ ಪರೀಕ್ಷೆಗೆ ತೊಂದರೆ ಕೊಡಬಾರದು. ಮಕ್ಕಳ ಭವಿಷ್ಯದ ಬಗ್ಗೆ ಅವರಿಗೆ ಏನಾದರೂ ಕಿಂಚಿತ್ತು ಕಾಳಜಿ ಇದ್ದರೆ ಮೇ 7ರಂದು ಭಾನುವಾರ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ರೋಡ್ ಶೋ ಅನ್ನು ಮುಂದೂಡುವುದು ಒಳ್ಳೆಯದು ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ರಸ್ತೆಗಳು ಬಂದ್: ಸ್ಪಷ್ಟತೆ ಇಲ್ಲದೇ ಗೊಂದಲ
ನೀಟ್ ಪರೀಕ್ಷೆಗಾಗಿ 20 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಆ ಪೈಕಿ ಬೆಂಗಳೂರಿನಲ್ಲಿ ಸಾವಿರಾರು ಮಂದಿ ಪರೀಕ್ಷೇ ಎದುರಿಸುತ್ತಿದ್ದಾರೆ. ಸಂಚಾರ ಪೊಲೀಸರ ಪ್ರಕಾರ, ಅಂದು ಬೆಳಗ್ಗೆ 08 ಗಂಟೆಯಿಂದ ಮಧ್ಯಾಹ್ನ 03 ಗಂಟೆವರೆಗೆ ರಸ್ತೆಗಳು ಬಂದ್ ಆಗಿರಲಿವೆ ಎಂಬ ಸೂಚನೆ ನೀಡಿದ್ದಾರೆ.
ಇದರಿಂದ ಪ್ರಯಾಣಿಕರಿಗೆ ವಾಹನ ಸವಾರರಿಗೆ ಮಾತ್ರವಲ್ಲದೇ ಸಾವಿರಾರು ವಿದ್ಯಾರ್ಥಿಗಳಿಗೆ ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪುವುದು ಕಷ್ಟವಾಗಲಿದೆ. ಈ ಸಂಬಂಧ ಸ್ಪಷ್ಟ ಮಾಹಿತಿ ಇಲ್ಲದೆ ಜನರು, ವಿದ್ಯಾರ್ಥಿಗಳು ಪೋಷಕರು ಗೊಂದಲದಲ್ಲಿ ಸಿಲುಕಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications