ವೈದ್ಯಕೀಯ ಪ್ರವೇಶದ 'ಕ್ಯಾಪಿಟೇಶನ್' ಪಿಡುಗಿಗೆ ರಾಮಬಾಣ NEET
ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಲಾಭ. ಕ್ಯಾಪಿಟೇಷನ್ ಶುಲ್ಕಕ್ಕೆ ರಾಮಬಾಣ.
ವೈದ್ಯಕೀಯ ಪ್ರವೇಶಾತಿಯಲ್ಲಿನ ಸಂಕೀರ್ಣ ವ್ಯವಸ್ಥೆ ಹಾಗೂ ದುಬಾರಿ ಶುಲ್ಕದಂಥ ಅವ್ಯವಸ್ಥೆಗಳನ್ನು ತೊಡೆದು ಹಾಕಿ ಅರ್ಹ ವಿದ್ಯಾರ್ಥಿಗಳು ವೈದ್ಯರಾಗುವ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಆಲೋಚಿಸಿದ ಕೇಂದ್ರ ಸರ್ಕಾರ 'ನ್ಯಾಷನಲ್ ಎಲಿಜಿಬಿಲಿಟಿ -ಕಮ್- ಎಂಟ್ರೆಂನ್ಸ್ ಟೆಸ್ಟ್' (ನೀಟ್) ಜಾರಿಗೆ ತಂದಿದೆ. ಈ ಪರೀಕ್ಷೆಯ ಲಾಭಗಳ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಶಾಸಕ ಡಾ. ಸಿ.ಎನ್. ಅಶ್ವಥ ನಾರಾಯಣ್ ಇಲ್ಲಿ ವಿವರಿಸಿದ್ದಾರೆ.
ವೈದ್ಯಕೀಯ ಕಾಲೇಜುಗಳಲ್ಲಿ ನೀಟ್ ಪರೀಕ್ಷೆಯು ಭಾರತೀಯ ವೈದ್ಯಕೀಯ ವ್ಯಾಸಂಗದಲ್ಲಿ ಒಂದು ಮಹತ್ತರ ಮನ್ವಂತರಕ್ಕೆ ಕಾರಣವಾಗಲಿದೆ ಎಂಬುದು ಸುಳ್ಳಲ್ಲ. 'ಒಂದು ದೇಶ, ಒಂದು ಪರೀಕ್ಷೆ' ಎಂಬ ತತ್ವದಡಿ ಜಾರಿಗೊಂಡಿರುವ ಈ ಪರೀಕ್ಷೆಯಲ್ಲಿರುವ ಲಾಭಗಳ ಬಗ್ಗೆ ಇಲ್ಲಿ ಕೂಲಂಕಷವಾಗಿ ಹೇಳುವುದಾದರೆ, ಬಹುಮುಖ್ಯವಾಗಿ, ಈ ಪರೀಕ್ಷೆಯಿಂದ ವಿದ್ಯಾರ್ಥಿಗಳ ಒತ್ತಡ ಕಡಿಮೆಯಾಗಲಿದೆ.

ಹಲವಾರು ರಾಜ್ಯಗಳಲ್ಲಿ ಹಲವಾರು ಖಾಸಗಿ ಕಾಲೇಜುಗಳು ನಡೆಸುವ ವೈದ್ಯಕೀಯ ಪ್ರವೇಶ ಪರೀಕ್ಷೆಗಾಗಿ ಆಯಾ ರಾಜ್ಯಗಳ ವಿದ್ಯಾರ್ಥಿಗಳು ಹಗಲಿರುಳೂ ಶ್ರಮಿಸಬೇಕಿತ್ತು. ಇದು ವಿದ್ಯಾರ್ಥಿಗಳ ಮೇಲೆ ಸಾಕಷ್ಟು ಒತ್ತಡ ಉಂಟು ಮಾಡುತ್ತಿತ್ತು.
ಈಗ ನೀಟ್ ಪರೀಕ್ಷೆಯ ಮೂಲಕ ದೇಶಾದ್ಯಂತ ಒಂದೇ ಪಠ್ಯ ಇರುವುದರಿಂದ ಹಾಗೂ ಒಂದೇ ಪರೀಕ್ಷೆ ನಡೆಯುವುದರಿಂದ ವಿದ್ಯಾರ್ಥಿಗಳು ಹೆಚ್ಚು ಒತ್ತಡವಿಲ್ಲದೆ, ಈ ನೀಟ್ ಪರೀಕ್ಷೆ ಕಡೆಗೆ ಮಾತ್ರ ತಮ್ಮೆಲ್ಲಾ ಗಮನ ಕೇಂದ್ರೀಕರಿಸಿ, ತಮ್ಮೆಲ್ಲಾ ಶಕ್ತಿ , ಸಾಮರ್ಥ್ಯವನ್ನು ಧಾರೆಯೆರೆದು ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುತ್ತದೆ.
ಮೊದಲಾದರೆ, ವಿವಿಧ ರಾಜ್ಯಗಳ ಮೆಡಿಕಲ್ ಕಾಲೇಜುಗಳ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಸಲ್ಲಿಸುವುದು, ಪ್ರತ್ಯೇಕವಾಗಿ ಶುಲ್ಕ ಕಟ್ಟುವುದು ಸೇರಿದಂತೆ ವಿವಿಧ ರಾಜ್ಯಗಳ ಮೆಡಿಕಲ್ ಪರೀಕ್ಷೆಗಳ ದಿನಾಂಕಗಳು ಒಂದೇ ಅವಧಿಯಲ್ಲಿ ನಡೆಯುವುದು. ಇಂಥ ಎಲ್ಲಾ ಗೊಂದಲಗಳಿಗೆ ನೀಟ್ ಪರೀಕ್ಷೆಗಳು ಇತಿಶ್ರೀ ಹಾಡಿವೆ. ಹೀಗೆ, ಒಂದೇ ಪರೀಕ್ಷೆಯ ಕಡೆಗೆ ವಿದ್ಯಾರ್ಥಿಗಳು ತೊಡಗುವುದರಿಂದ ಪ್ರವೇಶ ಪರೀಕ್ಷೆಯಲ್ಲಿಉತ್ತಮ ಅಂಕಪಡೆಯಲು ಅವರಿಗೆ ಸಾಧ್ಯವಾಗುತ್ತಿದೆ.

ಪಾರದರ್ಶಕತೆ
ನೀಟ್ ಪರೀಕ್ಷೆಯ ಮತ್ತೊಂದು ಅನುಕೂಲವೆಂದರೆ ಇದರಲ್ಲಿ ಏಕಪ್ರಕಾರದ ಶ್ರೇಯಾಂಕ (ರ್ಯಾಂಕಿಂಗ್) ವ್ಯವಸ್ಥೆ. ಇದು ಪಾರದರ್ಶಕವಾಗಿದ್ದು, ಇಲ್ಲಿ ಪಡೆಯುವ ರ್ಯಾಂಕ್ ಮೂಲಕ ಯಾವುದೇ ರಾಜ್ಯದ ವಿದ್ಯಾರ್ಥಿಯು ಮತ್ಯಾವುದೇ ರಾಜ್ಯದಲ್ಲಿನ ಮೆಡಿಕಲ್ ಕಾಲೇಜಿಗೆ ತನ್ನ ರ್ಯಾಕಿಂಗ್ ಆಧಾರದ ಮೇಲೆ ಪ್ರವೇಶ ಪಡೆಯಲು ಸಾಧ್ಯವಾಗಿದೆ. ಇಂಥ ವ್ಯವಸ್ಥೆ ಮತ್ತಷ್ಟು ಸರಾಗವಾಗಿ ನಡೆಯಬೇಕೆಂದರೆ, ವೈದ್ಯಕೀಯ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸಲಹಾ ಮಂಡಳಿ (ಎಂಸಿಸಿ), ಎಲ್ಲಾ ವೈದ್ಯಕೀಯ ಕಾಲೇಜುಗಳು ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ನೀಡಬೇಕು.
ಅಲ್ಲದೆ, ಈ ಪರೀಕ್ಷೆಯನ್ನು 10 ಪ್ರಾಂತೀಯ ಭಾಷೆಗಳಲ್ಲಿ ಬರೆಯಲು ಅವಕಾಶವಿರುವುದರಿಂದ ಪ್ರಾದೇಶಿಕ ವಿದ್ಯಾರ್ಥಿಗಳಿಗೆ ಇದು ಹೆಚ್ಚು ಅನುಕೂಲವಾಗುತ್ತದೆ.

ನೀಟ್ ಪರೀಕ್ಷೆಯ ಮತ್ತೊಂದು ಲಾಭವೆಂದರೆ, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಇದ್ದ ಕ್ಯಾಪಿಟೇಶನ್ ಎಂಬ ಪೆಡಂಭೂತವನ್ನು ಮಟ್ಟ ಹಾಕಲು ಸಾಧ್ಯವಾಗುವುದು. ನೀಟ್ ಪರೀಕ್ಷೆಯಲ್ಲಿ ಮೆರಿಟ್ ಆಧಾರದಲ್ಲಿ ಮಾತ್ರವೇ ವಿದ್ಯಾರ್ಥಿಗಳು ಪ್ರವೇಶ ಪಡೆಯಬೇಕಿರುವುದರಿಂದ ಕಳಪೆ ವಿದ್ಯಾರ್ಥಿಗಳು, ಧನಬಲ ವಿದ್ಯಾರ್ಥಿಗಳು ಸೀಟು ಗಿಟ್ಟಿಸಿಕೊಂಡು ವೈದ್ಯರಾಗುವ ಅಪಾಯವನ್ನು ತಪ್ಪಿಸಬಹುದಾಗಿದೆ. ಅಲ್ಲದೆ, ಕೇವಲ ಅರ್ಹ ವಿದ್ಯಾರ್ಥಿಗಳು ಮಾತ್ರವೇ ಭಾರತದ ಭವಿಷ್ಯದ ವೈದ್ಯರಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ.
ಆದರೆ, ಈ ನೀಟ್ ಪರೀಕ್ಷೆಯ ಬಗ್ಗೆ ಈಗಲೂ ಖಾಸಗಿ ಕಾಲೇಜುಗಳು ವಿರೋಧ ತೋರುತ್ತಲೇ ಇವೆ. ಏಕೆಂದರೆ, ನೀಟ್ ಪರೀಕ್ಷೆಯು ಅವರ ಅಕ್ರಮ ಆದಾಯವನ್ನು ಕಸಿದುಕೊಂಡಿದೆ.

ಅಕ್ರಮಗಳಿಗೆ ಕಡಿವಾಣ
ನೇರ ಪ್ರವೇಶಾತಿ ಹೆಸರಿನಲ್ಲಿ ಕೋಟಿ ಕೋಟಿ ರು. ದೋಚುತ್ತಿದ್ದ ಅವರ ಧನಬಾಕ ಸಂಸ್ಕೃತಿಗೆ ಈಗ ಅಡ್ಡಿಯಾಗಿದೆ. ಕೆಲವು ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ನಂಬುವುದಾದರೆ, ದೇಶದಲ್ಲಿ ಪ್ರತಿ ವರ್ಷ ಖಾಸಗಿ ಕಾಲೇಜುಗಳ ವೈದ್ಯಕೀಯ ಸೀಟು ದಂಧೆಯಡಿ ಸುಮಾರು 12,000 ಕೋಟಿ ರು. ವಹಿವಾಟು ನಡೆಯುತ್ತದೆ ಎಂದರೆ ಇದರ ಕರಾಳತೆ ಎಷ್ಟಿರಬಹುದೆಂದು ಯಾರಾದರೂ ಊಹಿಸಬಹುದು.
ನಿಜ ಹೇಳಬೇಕೆಂದರೆ, ಖಾಸಗಿ ಕಾಲೇಜುಗಳಲ್ಲಿ ನಡೆಯುತ್ತಿರುವ ವೈದ್ಯಕೀಯ ಪ್ರವೇಶ ಪರೀಕ್ಷೆಗಳು ಕೇವಲ ಕಣ್ಣೊರೆಸುವ ತಂತ್ರ ಎಂದು ಹೇಳಿದರೆ ಅತಿಶಯೋಕ್ತಿಯಾಗಲಾರದು. ಈ ಕಾಲೇಜುಗಳಲ್ಲಿನ ಸೀಟುಗಳಿಗೆ ವಿದ್ಯಾರ್ಥಿಯು ಪರೀಕ್ಷೆಯಲ್ಲಿ ತೋರಿದ ದಕ್ಷತೆಗಿಂತ, ಆತ ಎಷ್ಟು ಹಣ ನೀಡುತ್ತಾನೆಂಬುದರ ಮೇಲೆ ಅವಲಂಬಿತ. ಹಾಗಾಗಿ, ಈ ವಿದ್ಯಾ ಸಂಸ್ಥೆಗಳು ಕೇಳಿದಷ್ಟು ಹಣವನ್ನು ವಿದ್ಯಾರ್ಥಿಗಳ ಪೋಷಕರು ಕಕ್ಕಿದರಷ್ಟೇ ಸೀಟು ಲಭ್ಯ ಎಂದಾಗಿದೆ.
ಇದೀಗ, ನೀಟ್ ಪರೀಕ್ಷೆಯು, ಲಕ್ಷಾಂತರ ಅರ್ಹ ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಅನ್ಯಾಯವು ತಪ್ಪಿದೆ. ಲಕ್ಷಾಂತರ ವಿದ್ಯಾರ್ಥಿಗಳ ಪೋಷಕರು ನಿಶ್ಚಿಂತೆಯಿಂದ ತಮ್ಮ ಮಕ್ಕಳ ಭವಿಷ್ಯವನ್ನು ರೂಪಿಸಲು ಸಹಾಯವಾಗಿದೆ. ಇದರಿಂದ, ಭಾರತದ ವೈದ್ಯಕೀಯ ವ್ಯಾಸಂಗ ಕ್ಷೇತ್ರದಲ್ಲಿ ಹೊಸ ಸುಧಾರಣೆಯನ್ನು ತರಲು ಸಾಧ್ಯವಾಗಿದೆ.
- ಡಾ. ಸಿ.ಎನ್. ಅಶ್ವಥ ನಾರಾಯಣ್,
ಬಿಜೆಪಿ ಶಾಸಕರು,
ಮಲ್ಲೇಶ್ವರಂ, ಬೆಂಗಳೂರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications