ಬಿಬಿಎಂಪಿಗೆ ಇನ್ನು 243 ವಾರ್ಡ್; ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು ಜುಲೈ 14: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇತ್ತೀಚೆಗೆ ಪುನರ್ ವಿಂಗಡಿಸಿದ್ದ 243 ನೂತನ ವಾರ್ಡ್ ಗಳಿಗೆ ರಾಜ್ಯ ಸರ್ಕಾರ ಇದೀಗ ಅಧಿಕೃತ ಮುದ್ರೆ ಹಾಕಿದೆ. ವಿಂಗಡಣೆ ಕುರಿತು ಸಾರ್ವಜನಿಕರಿಂದ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಗಣಿಸಿ, ಒಂದಷ್ಟು ಮಾರ್ಪಾಡುಗಳನ್ನು ಮಾಡಿ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ.
ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿದ್ದ 198 ವಾರ್ಡ್ಗಳನ್ನು 2011ರ ಜನಗಣತಿ ಆಧಾರದಲ್ಲಿ ಪ್ರತಿ ವಾರ್ಡ್ ಗೆ 35ಸಾವಿರ ಜನರು ಬರುವಂತೆ ವಿಂಗಡಿಸಿ 243ಕ್ಕೆ ಹೆಚ್ಚಿಸಿತ್ತು. ಇದನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡಿ ಕರಡು ಅಧಿಸೂಚನೆ ಹೊರಡಿಸಿತ್ತು. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ನೂತನ ವಾರ್ಡ್ ಕುರಿತು ಸಾರ್ವಜನಿಕ ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸುವಂತೆ ಕೋರಿತ್ತು.
ಅದರಂತೆ ಇದೀಗ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ ನೂತನ 243ವಾರ್ಡ್ ಗಳನ್ನು ಅಧಿಕೃತಗೊಳಿಸಲಾಗಿದೆ. ಇದಕ್ಕೂ ಮುನ್ನ ಸಲ್ಲಿಕೆಯಾಗುವ ಆಕ್ಷೇಪಣೆಗಳಲ್ಲಿನ ಅಂಶಗಳ ಪರಿಶೀಲನೆಗಾಗಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಲಾಗಿತ್ತು.

ಈ ಸಮಿತಿ ಸಲ್ಲಿಕೆಯಾದ ಆಕ್ಷೇಪಣೆ ಕುರಿತಂತೆ ಇದೇ ಜುಲೈ 11 ಮತ್ತು 12 ಸಭೆ ನಡೆಸಲಾಯಿತು. ಅಲ್ಲಿ ಸಾರ್ವಜನಿಕ ಆಕ್ಷೇಪಣೆ, ಸಲಹೆಗಳನ್ನು ಕೂಲಂಕುಷಾಗಿ ಪರಿಶೀಲಿಸಿದ ಅಧಿಕಾರಿಗಳು ಒಂದಷ್ಟು ಶಿಫಾರಸುಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದರು. ಆ ಶಿಫಾರಸುಗಳನ್ನು ಸರ್ಕಾರ ಒಪ್ಪಿದ್ದು, ಅದರಂತೆ ಕರಡು ಅಧಿಸೂಚನೆಗೆ ಕೆಲವು ಮಾರ್ಪಾಡು ಮಾಡಿ ಇದೀಗ ಅಧಿಕೃತಗೊಳಿಸಿ ಅಧಿಸೂಚನೆ ಹೊರಡಿಸಿದೆ ಎಂದು ತಿಳಿದು ಬಂದಿದೆ.
3000ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ ; ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಕುರಿತು 3000ಕ್ಕೂ ಹೆಚ್ಚು ಸಾರ್ವಜನಿಕ ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ವಾರ್ಡ್ ಗಳ ಹೆಸರು ಬದಲಾಯಿಸುವಂತೆಯೇ ಅಧಿಕ ಆಕ್ಷೇಪಣೆಗಳು ಬಂದಿದ್ದವು.
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 1500ಕ್ಕೂ ಅಧಿಕ ಆಕ್ಷೇಪಣೆ ಅರ್ಜಿಗಳು ಸಲ್ಲಿಕೆ ಆದರೆ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ479 ಅರ್ಜಿಗಳು ಹೆಸರು ಬದಲಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದರು. ಜತೆಗೆ ಆಕ್ಷೇಪಣೆ ಅರ್ಜಿಗಳಿಗೆ ಸಂಬಂಧಿಸಿದಂತೆ ಸರ್ಕಾರ ಮಟ್ಟದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದರು.

ಅದರಂತೆ ಇದೀಗ ಆಕ್ಷೇಪಣೆ ಅರ್ಜಿಗಳನ್ನು ಸಮಿತಿ ಸಭೆಯಲ್ಲಿ ಚರ್ಚಿಸಿ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿತ್ತು. ಅದರಂತೆ ಸರ್ಕಾರ ಕೆಲವು ಬದಲಾವಣೆ ಮಾಡಿ ಬಿಬಿಎಂಪಿಯ ನೂತನ 243 ವಾರ್ಡ್ ಗಳಿಗೆ ಅಧಿಕೃತ ಮುದ್ರೆ ಒತ್ತಿದೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications