ಬೈಯಪ್ಪನಹಳ್ಳಿ-ವೈಟ್ಫೀಲ್ಡ್ ನಡುವೆ ಮೆಮು ರೈಲು ಸಂಚಾರ
ಬೆಂಗಳೂರು, ಮಾರ್ಚ್ 09: ಬೈಯಪ್ಪನಹಳ್ಳಿ - ವೈಟ್ ಫೀಲ್ಡ್ ನಡುವೆ ವಾರದೊಳಗೆ 2 ಹೊಸ ಮೆಮು ರೈಲು ಸಂಚಾರಕ್ಕೆ ಹಸಿರು ನಿಶಾನೆ ಸಿಗಲಿದೆ. ಮೆಟ್ರೋ ಕಾಮಗಾರಿಯಿಂದಾಗಿ ನಿತ್ಯ ಟ್ರಾಫಿಕ್ ಸಮಸ್ಯೆ ಅನುಭವಿಸುತ್ತಿರುವ ಟೆಕ್ಕಿಗಳಿಗೆ ಈ ಸೇವೆ ಖುಷಿ ತರಲಿದೆ.
ಬೈಯಪ್ಪನಹಳ್ಳಿ-ವೈಟ್ ಫೀಲ್ಡ್ ನಡುವೆ 2 ಮೆಮು ರೈಲು(ವಿದ್ಯುತ್ ಚಾಲಿತ) , ಬೈಯಪ್ಪನಹಳ್ಳಿ-ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ನಡುವೆ 2 ಮೆಮು ರೈಲು ಮತ್ತು ಹೊಸೂರು- ಬಾಣಸವಾಡಿ ನಡುವೆ 4 ಮೆಮು ರೈಲು ಸೇವೆಯನ್ನು ವಾರದಲ್ಲಿ ಪ್ರಾರಂಭಿಸಲಾಗುವುದು ಎಂದು ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಎ.ಕೆ. ಗುಪ್ತಾ ತಿಳಿಸಿದ್ದಾರೆ.
ಪ್ರಸತುತ 110 ಉಪನಗರ ರೈಲುಗಳು ಬೆಂಗಳೂರು ನಗರದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.ಕಳೆದೊಂದು ವರ್ಷದಲ್ಲಿ 18 ಹೊಸ ಸೇವೆಯನ್ನು ಸೇರ್ಪಡೆಗೊಳಿಸಿದ್ದೇವೆ. ಇದೀಗ 8ಹೊಸ ರೈಲುಗಳನ್ನು ಶೀಘ್ರ ನೀಡಲಿದ್ದೇವೆ ಎಂದರು.

ಬೈಯಪ್ಪನಹಳ್ಳಿ-ವೈಟ್ ಫೀಲ್ಡ್ ನಡುವೆ ನಮ್ಮ ಮೆಟ್ರೋ ಕಾಮಗಾರಿ ಆರಂಭವಾಗಿದೆ. 12.90 ಕೋಟಿ ರೂ ವೆಚ್ಚದಲ್ಲಿ ಮಾರ್ಗದಲ್ಲಿ ಬರುವ ನೀರಿನ ಕೊಳವೆಗಳ ತೆರವು ಕಾರ್ಯಾಚರಣೆ, ಸತ್ಯಸಾಯಿ ಆಸ್ಪತ್ರೆ ಬಳಿ ವಿದ್ಯುತ್ ಕಂಬಗಳ ತೆರವು ಕಾಮಗಾರಿ, ಹೂಡಿ ವೃತ್ತ, ವಿಶ್ವೇಶ್ವರಯ್ಯ ಕೈಗಾರಿಕಾ ಪ್ರದೇಶ, ಲೋವರಿ ಶಾಲಾ ಪ್ರದೇಶದಲ್ಲಿ ಮೆಟ್ರೋ ಪಿಲ್ಲರ್ ನಿರ್ಮಾಣ ಆರಂಭವಾಗಿದೆ.
ಮೊದಲೇ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಯಿಂದ ಸಮಸ್ಯೆ ಮತ್ತಷ್ಟು ಉಲ್ಬಣಿಸಲಿದೆ. ಈ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಮತ್ತು ವೈಟ್ ಫೀಲ್ಡ್ ನಡುವಿನ ಮಾರ್ಗದಲ್ಲಿ ಹೆಚ್ಚಿನ ಮೆಮು ರೈಲು ಓಡಾಟಕ್ಕೆ ಆಗ್ರಹ ಕೇಳಿಬಂದಿತ್ತು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications