ಬೆಂಗಳೂರಿನ ಪ್ರಮುಖ ಕೆರೆಯ ಸಮಗ್ರ ಅಭಿವೃದ್ಧಿಗೆ ಮುಂದಾದ ಜಿಬಿಎ
ಬೆಂಗಳೂರಿನ ಪ್ರಮುಖ ಕೆರೆಗಳಲ್ಲಿ ಒಂದಾಗಿರುವ ಹಲಸೂರು ಕೆರೆ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣೆಗೆ ಅಗತ್ಯ ಕ್ರಮ ವಹಿಸಿ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಹಲಸೂರು ಕೆರೆಗೆ ನವೆಂಬರ್ 20ರ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕೆರೆಯ ಸುತ್ತಲೂ ಸ್ವಚ್ಛತೆ ಕಾಪಾಡಬೇಕು. ಮಲಿನ ನೀರು ಕೆರೆಗೆ ಬರದಂತೆ ತಡೆಯಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ತ್ಯಾಜ್ಯ ನೀರು ಕೆರೆಗೆ ಬರದಂತೆ ತಡೆಯಲು ಬೆಂಗಳೂರು ಜಲಮಂಡಳಿ ಮತ್ತಿತರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ, ಸಭೆ ಏರ್ಪಡಿಸಲು ಸೂಚಿಸಿದ್ದಾರೆ.

ಹಲಸೂರು ಕೆರೆ ಜೀರ್ಣೋದ್ಧಾರ ಕಾಮಗಾರಿ ಕೈಗೊಳ್ಳಬೇಕು. ವಾಯುವಿಹಾರಿಗಳಿಗೆ (Walkers) ನಡೆಯುವ ಮಾರ್ಗವನ್ನು ಸಮರ್ಪಕವಾಗಿ ನಿರ್ಮಿಸಿ ನಿರ್ವಹಣೆ ಮಾಡುವ ಮೂಲಕ ನಾಗರಿಕರಿಗೆ ಸುಗಮ ನಡಿಗೆ ಮಾರ್ಗ ಒದಗಿಸಲು ಸೂಚನೆ ನೀಡಿದರು. ಅಲ್ಲದೇ ಕೆರೆ ಸಂರಕ್ಷಣೆಗೆ ಹೆಚ್ಚು ಆದ್ಯತೆ ನೀಡುವುದರ ಜೊತೆಗೆ, ಕೆರೆಗೆ ಹೊಂದಿಕೊಂಡಿರುವ ಖಾಲಿ ಜಾಗಗಳಲ್ಲಿ ಉದ್ಯಾನವನ ನಿರ್ಮಿಸಿ, ಸಸಿಗಳನ್ನು ನೆಟ್ಟು ಆಕರ್ಷಣೀಯ ಸ್ಥಳವನ್ನಾಗಿ ಮಾಡಲು ಹಾಗೂ ಅದನ್ನು ಪೋಷಣೆ ಮಾಡಲು ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ಮರಗಳನ್ನು ಸರಿಯಾಗಿ ನಿರ್ವಹಣೆ ಮಾಡುವುದು, ಒಣಗಿದ ಮರ, ರೆಂಬೆ-ಕೊಂಬೆಗಳನ್ನು ಕೂಡಲೆ ತೆರವುಗೊಳಿಸುವಂತೆ ತಿಳಿಸಲಾಗಿದೆ. ಅಲ್ಲದೇ ಹಲಸೂರು ಕೆರೆಗೆ ಹೊಂದಿಕೊಂಡಿರುವ ರಾಜಕಾಲುವೆಯಲ್ಲಿ ಹೂಳೆತ್ತಿ ನಿರಂತರವಾಗಿ ಸ್ವಚ್ಛತೆ ಕಾಪಾಡುವುದರ ಜೊತೆಗೆ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳಲು ನಿರ್ದೇಶನ ನೀಡಲಾಗಿದೆ.
ಮುಂದುವರಿದು ಪ್ರಸ್ತುತ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ದೊರಕುವಂತೆ ಮಾಡುವುದು ಹಾಗೂ ಪ್ರಗತಿಯಲ್ಲಿರುವ ಕಾಮಗಾರಿ ಮುಕ್ತಾಯಗೊಂಡ ನಂತರದ ಹಂತದಲ್ಲಿ ಉಳಿದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆಯೂ ತಿಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಮುಖ್ಯ ಎಂಜಿನಿಯರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಎಂಜಿನಿಯರರಾದ ಪುನೀತ್, ಶಿವಾಜಿನಗರ ಕಾರ್ಯಪಾಲಕ ಎಂಜಿನಿಯರರು, ಸಹಾಯಕ ಕಾರ್ಯಪಾಲಕ ಎಂಜಿನಿಯರರು, ವಲಯ ಅರಣ್ಯಧಿಕಾರಿ, ರಾಜಕಾಲುವೆ ವಿಭಾಗದ ಎಂಜಿನಿಯರರು ಸೇರಿದಂತೆ ಹಲವರು ಹಾಜರಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications