ಬೆಂಗಳೂರಲ್ಲಿ ಹೊಸ ಕಾರು ಮನೆಗೆ ಬಂದಿದ್ದಷ್ಟೇ, 5 ಗಂಟೆಗಳಲ್ಲಿ ಮಾಯ
ಬೆಂಗಳೂರು, ಸೆಪ್ಟೆಂಬರ್ 11: ಆಗತಾನೆ ಹೊಸ ಕಾರು ಮನೆಗೆ ಬಂದಿತ್ತು, ಮನೆಯವರೆಲ್ಲಾ ಸಂತಸದಲ್ಲಿದ್ದರು ಆದರೆ ಐದು ಗಂಟೆಯೊಳಗೆ ಕಾರು ಕಳ್ಳತನವಾಗಿರುವ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ.
ಇಂದಿರಾನಗರದ ಎಚ್ಎಎಲ್ ಎರಡನೇ ಹಂತದ ಪ್ರಭು ಕೃಷ್ಣಸ್ವಾಮಿ ಎಂಬುವವರುಉ ಹುಂಡೈ ಟಕ್ಸನ್ ಕಾರು ಖರೀದಿಸಿ ರಾತ್ರಿ 10.45ಕ್ಕೆ ಮನೆಗೆ ತಂದು ಪಾರ್ಕ್ ಮಾಡಿದ್ದರು. ಬೆಳಗಿನ ಜಾವ ಗೇಟ್ ಸೌಂಡ್ ಆಗಿದ್ದು ಎಚ್ಚರಗೊಂಡ ಪ್ರಭು ಅವರ ಅತ್ತೆ ಉಷಾ ಕಿಟಕಿಯಲ್ಲಿ ಇಣುಕಿ ನೋಡಿದ್ದಾರೆ. ಕಾರು ತೆಗೆದುಕೊಂಡು ಹೋಗುತ್ತಿರುವುದು ನೋಡಿ ಅಳಿಯ ಹೋಗುತ್ತಿರಬೇಕು ಅಂದುಕೊಂಡಿದ್ದಾರೆ.

ಬೆಳಗ್ಗೆ ಉಷಾ ಮನೆಯ ಹೊರಗೆ ಬಂದು ನೋಡಿದಾಗ ಅಲ್ಲಿ ಕಾರ್ ಇರಲಿಲ್ಲ, ಅಳಿಯನಿಗೆ ಕಾಲ್ ಮಾಡಿದರೆ ಆತ ಮನೆಯಲ್ಲೇ ಇರುವುದು ತಿಳಿದಿದೆ, ಹಿಂದಿನ ಬಾಗಿಲಿನಿಂದ ಬಂದ ಕಳ್ಳರು ಟೇಬಲ್ ಮೇಲಿಟ್ಟಿದ್ದ 15 ಸಾವಿರ ರೂ ಮತ್ತು ಕಾರಿನ ಕೀ ತೆಗೆದುಕೊಂಡಿದ್ದಾರೆ, ಬಳಿಕ ಮಹಡಿಗೆ ಹೋಗಿ ಡೈಮಂಡ್ ರಿಂಗ್, ಏಳು ಸಾವಿರ ಹಣವನ್ನು ದೋಚಿ ಕಾರು ಸಮೇತ ಪರಾರಿಯಾಗಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications