ಬುದ್ಧಿಮಾಂದ್ಯ ಮಕ್ಕಳಿಗೆ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ನೂತನ ಕೇಂದ್ರ
ಕೇಂದ್ರವನ್ನು ಅಖಿಲ ಭಾರತ ನೇತ್ರವಿಜ್ಞಾನ ಸಂಸ್ಥೆಯ ಅಧ್ಯಕ್ಷರಾದ ಡಾ. ಸಂತಾನ್ ಗೋಪಾಲ್ ಹಾಗೂ ಚಿತ್ರ ನಟಿ ನಭಾ ನಟೇಶ್ ಅವರು ಜಂಟಿಯಾಗಿ ಉದ್ಘಾಟಿಸಿದರು.
ಬೆಂಗಳೂರು, ಏಪ್ರಿಲ್ 4: ನಗರದಲ್ಲಿರುವ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಬುದ್ಧಿಮಾಂದ್ಯ ಮಕ್ಕಳ ಚಿಕಿತ್ಸೆಗಾಗಿ ವಿಶೇಷ ಕೇಂದ್ರವನ್ನು ಏಪ್ರಿಲ್ 3ರಂದು ಉದ್ಘಾಟಿಸಲಾಯಿತು.
ಸ್ವಯಂ ಸೇವಾ ಸಂಘಟನೆಯಾದ ಸೂರ್ಯ ವತಿಯಿಂದ ಆರಂಭಗೊಂಡಿರುವ ಈ ಕೇಂದ್ರಕ್ಕೆ 'ಮೈಲ್ ಸ್ಟೋನ್ - ಆ್ಯನ್ ಅರ್ಲಿ ಇನ್ವೆಂಷನ್ ಆ್ಯಂಡ್ ಟ್ರಾನ್ಸ್ ಫಾರ್ಮೇಷನ್ ಸೆಂಟರ್' ಎಂದು ಹೆಸರಿಡಲಾಗಿದೆ.

ನೂತನ ಸೌಲಭ್ಯಗಳೊಂದಿಗೆ ಬುದ್ಧಿಮಾಂದ್ಯ ಮಕ್ಕಳಿಗೆ ನೆರವಾಗುವ ಗುರಿಯೊಂದಿಗೆ ಆರಂಭಗೊಂಡಿರುವ ಈ ಕೇಂದ್ರವನ್ನು ಅಖಿಲ ಭಾರತ ನೇತ್ರವಿಜ್ಞಾನ ಸಂಸ್ಥೆಯ ಅಧ್ಯಕ್ಷರಾದ ಡಾ. ಸಂತಾನ್ ಗೋಪಾಲ್ ಹಾಗೂ ಚಿತ್ರ ನಟಿ ನಭಾ ನಟೇಶ್ ಅವರು ಜಂಟಿಯಾಗಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಂಕರ ಐ ಫೌಂಡೇಷನ್ ನ ಮುಖ್ಯಸ್ಥರಾದ ಡಾ. ಕೌಶಿಕ್ ಮುರಳಿ, ''ಸೂರ್ಯ ಸ್ವಯಂ ಸೇವಾ ಸಂಘದಿಂದ ಈ ಹೊಸ ಕೇಂದ್ರ ಸ್ಥಾಪನೆ ಸಾಧ್ಯವಾಗಿದೆ. ಹಾಗಾಗಿ, ಆ ಸಂಸ್ಥೆಗೆ ನಾವು ಆಭಾರಿಯಾಗಿದ್ದೇವೆ. ಸುಮಾರು ಏಳೂವರೆ ಲಕ್ಷದಲ್ಲಿ ಸ್ಥಾಪಿಸಲಾಗಿರುವ ಈ ಸಂಸ್ಥೆಯಲ್ಲಿ ಬುದ್ಧಿ ಮಾಂದ್ಯ ಮಕ್ಕಳಿಗಾಗಿ ಕಂಪ್ಯೂಟರ್ ಆಧಾರಿತ ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇತ್ತೀಚೆಗೆ ಬುದ್ಧಿ ಮಾಂದ್ಯ ಮಕ್ಕಳ ಚಿಕಿತ್ಸಾ ಸಂಶೋಧನಾ ಕ್ಷೇತ್ರದಲ್ಲಿ ಆಗಿರುವ ನೂತನ ಆವಿಷ್ಕಾರಗಳ ಆಧಾರಿತ ಚಿಕಿತ್ಸಾ ಸೌಲಭ್ಯಗಳು ಇಲ್ಲಿ ಲಭ್ಯವಾಗಲಿವೆ'' ಎಂದು ವಿವರಿಸಿದರು.

ಉದ್ಘಾಟನೆಯ ನಂತರ, ಬುದ್ಧಿಮಾಂದ್ಯ ಮಕ್ಕಳಿಂದ ಹಾಗೂ ಅವರ ಪೋಷಕರು ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಮುಚ್ಚಿಟ್ಟರೆ ಜೈಲುಪಾಲು: ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಖಡಕ್ ಎಚ್ಚರಿಕೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ












Click it and Unblock the Notifications