Wipro: "ವಿಪ್ರೊ"ಗೆ ನೂತನ ಸಿಇಒ ನೇಮಕ-ಯಾರು ಹಾಗೂ ಅವರ ಹಿನ್ನೆಲೆ ಏನು?
ಬೆಂಗಳೂರು, ಏಪ್ರಿಲ್, 07: ವಿಪ್ರೊ ಕಂಪನಿ ಬರೀ ಬೆಂಗಳೂರು ಅಲ್ಲದೆ, ಇಡೀ ದೇಶದಲ್ಲೇ ಪ್ರಖ್ಯಾತಿಗೆ ಪಾತ್ರವಾಗಿದೆ. ಇದೀಗ ಈ ಕಂಪನಿಗೆ ನೂತನ ಸಿಇಒ ಅನ್ನು ಆಯ್ಕೆ ಮಾಡಲಾಗಿದೆ.
ಮೂಲತಃ ಬೆಂಗಳೂರು ಮೂಲದ ದೇಶದ ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪನಿ ವಿಪ್ರೋದ ನೂತನ ಮುಖ್ಯ ಕಾರ್ಯಾನಿರ್ವಹಣಾಧಿಕಾರಿಯಾಗಿ ಶ್ರೀನಿವಾಸ್ ಅಲಿಯಾಸ್ ಶ್ರೀನಿ ಪಲ್ಲಿಯಾ ಅವರನ್ನು ನೇಮಕ ಮಾಡಲಾಗಿದೆ.

ಆಡಳಿತ ಮಂಡಳಿಯ ಸಭೆಯು ಶ್ರೀನಿವಾಸ್ ನೇಮಕಕ್ಕೆ ಒಪ್ಪಿಗೆ ನೀಡಿದ್ದು, ಇಂದಿನಿಂದಲೇ (ಏಪ್ರಿಲ್ 7) ಅವರು, ವಿಪ್ರೋ ನೂತನ ಸಿಇಒ ಹಾಗೂ ಎಂ.ಡಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇನ್ನು 1992ರಲ್ಲಿ ವಿಪ್ರೊ ಕಂಪನಿಯನ್ನು ಸೇರಿಕೊಂಡಿರುವ ಶ್ರೀನಿವಾಸ ಪಲ್ಲಿಯಾ ಅವರು ಸುಮಾರು ಮೂರು ದಶಕಗಳಿಗೂ ಹೆಚ್ಚು ಕಾಲ ಕಂಪನಿ ಬೆಳವಣಿಗೆಗೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿದ್ದು, ವಿಪ್ರೊ ಒಡೆತನದ ಅಮೆರಿಕಾಸ್ 1 ಎಂಬ ಕಂಪನಿಗೂ ಮೊದಲು ಸಿಇಒ ಆಗಿ ಕಾರ್ಯನಿಹಿಸಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀನಿವಾಸ ಅವರು ರಾಜ್ಯದ ರಾಜಧಾನಿ ಬೆಂಗಳೂರಿನ ಮೂಲದ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಲ್ಲಿ ಇಂಜಿನಿಯರಿಂಗ್ ಪದವಿ ಮತ್ತು ಎಂಬಿಎ ಮಾಡಿದ್ದಾರೆ. ಅಲ್ಲದೆ, ಹಾರ್ವರ್ಡ್ ಬಿಜಿನಸ್ ಸ್ಕೂಲ್ನಲ್ಲಿಯೂ ಅಧ್ಯಯನ ಮಾಡಿದ್ದು, ಇದೀಗ ಅಮೆರಿಕದ ನ್ಯೂಜೆರ್ಸಿಯಲ್ಲಿ ನೆಲೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಶ್ರೀನಿವಾಸ ಅವರು ಮುಂದಿನ ಐದು ವರ್ಷಗಳ ಕಾಲ ವಿಪ್ರೊ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಕಳೆದ ಏಪ್ರಿಲ್ 5ರಂದು ಥಿಯರಿ ಡೆಲಾರ್ಪೋರ್ಟ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications