Wipro: "ವಿಪ್ರೊ"ಗೆ ನೂತನ ಸಿಇಒ ನೇಮಕ-ಯಾರು ಹಾಗೂ ಅವರ ಹಿನ್ನೆಲೆ ಏನು?
ಬೆಂಗಳೂರು, ಏಪ್ರಿಲ್, 07: ವಿಪ್ರೊ ಕಂಪನಿ ಬರೀ ಬೆಂಗಳೂರು ಅಲ್ಲದೆ, ಇಡೀ ದೇಶದಲ್ಲೇ ಪ್ರಖ್ಯಾತಿಗೆ ಪಾತ್ರವಾಗಿದೆ. ಇದೀಗ ಈ ಕಂಪನಿಗೆ ನೂತನ ಸಿಇಒ ಅನ್ನು ಆಯ್ಕೆ ಮಾಡಲಾಗಿದೆ.
ಮೂಲತಃ ಬೆಂಗಳೂರು ಮೂಲದ ದೇಶದ ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪನಿ ವಿಪ್ರೋದ ನೂತನ ಮುಖ್ಯ ಕಾರ್ಯಾನಿರ್ವಹಣಾಧಿಕಾರಿಯಾಗಿ ಶ್ರೀನಿವಾಸ್ ಅಲಿಯಾಸ್ ಶ್ರೀನಿ ಪಲ್ಲಿಯಾ ಅವರನ್ನು ನೇಮಕ ಮಾಡಲಾಗಿದೆ.

ಆಡಳಿತ ಮಂಡಳಿಯ ಸಭೆಯು ಶ್ರೀನಿವಾಸ್ ನೇಮಕಕ್ಕೆ ಒಪ್ಪಿಗೆ ನೀಡಿದ್ದು, ಇಂದಿನಿಂದಲೇ (ಏಪ್ರಿಲ್ 7) ಅವರು, ವಿಪ್ರೋ ನೂತನ ಸಿಇಒ ಹಾಗೂ ಎಂ.ಡಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇನ್ನು 1992ರಲ್ಲಿ ವಿಪ್ರೊ ಕಂಪನಿಯನ್ನು ಸೇರಿಕೊಂಡಿರುವ ಶ್ರೀನಿವಾಸ ಪಲ್ಲಿಯಾ ಅವರು ಸುಮಾರು ಮೂರು ದಶಕಗಳಿಗೂ ಹೆಚ್ಚು ಕಾಲ ಕಂಪನಿ ಬೆಳವಣಿಗೆಗೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿದ್ದು, ವಿಪ್ರೊ ಒಡೆತನದ ಅಮೆರಿಕಾಸ್ 1 ಎಂಬ ಕಂಪನಿಗೂ ಮೊದಲು ಸಿಇಒ ಆಗಿ ಕಾರ್ಯನಿಹಿಸಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀನಿವಾಸ ಅವರು ರಾಜ್ಯದ ರಾಜಧಾನಿ ಬೆಂಗಳೂರಿನ ಮೂಲದ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಲ್ಲಿ ಇಂಜಿನಿಯರಿಂಗ್ ಪದವಿ ಮತ್ತು ಎಂಬಿಎ ಮಾಡಿದ್ದಾರೆ. ಅಲ್ಲದೆ, ಹಾರ್ವರ್ಡ್ ಬಿಜಿನಸ್ ಸ್ಕೂಲ್ನಲ್ಲಿಯೂ ಅಧ್ಯಯನ ಮಾಡಿದ್ದು, ಇದೀಗ ಅಮೆರಿಕದ ನ್ಯೂಜೆರ್ಸಿಯಲ್ಲಿ ನೆಲೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಶ್ರೀನಿವಾಸ ಅವರು ಮುಂದಿನ ಐದು ವರ್ಷಗಳ ಕಾಲ ವಿಪ್ರೊ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಕಳೆದ ಏಪ್ರಿಲ್ 5ರಂದು ಥಿಯರಿ ಡೆಲಾರ್ಪೋರ್ಟ್ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications