ಶಿವಾನಂದ ವೃತ್ತದ ಮೇಲ್ಸೇತುವೆ ಕಾಮಗಾರಿ ಪೂರ್ಣ ಯಾವಾಗ?
ಬೆಂಗಳೂರು,ಫೆಬ್ರವರಿ 12: ಶಿವಾನಂದ ವೃತ್ತದ ಮೇಲ್ಸೇತುವೆ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ.
ಹಾಗೆಯೇ ಮೂರು ತಿಂಗಳಲ್ಲಿ ಸಂಪೂರ್ಣ ಕಾಮಗಾರಿ ಮುಗಿಸುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಬಿಬಿಎಂಪಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಭೂಸ್ವಾಧೀನ ಹಾಗೂ ಜಲಮಂಡಳಿ ನೀರಿನ ಕೊಳವೆ ಸ್ಥಳಾಂತರದಿಂದ ಕಾಮಗಾರಿ ವಿಳಂಬವಾಗಿತ್ತು,ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಮೇಲ್ಸೇತುವೆ ವಿವರ
*ಉದ್ದ-493 ಮೀಟರ್
*ಅಗಲ-16 ಮೀಟರ್
*ಒಟ್ಟು ಪಥ-4
*ಒಟ್ಟು ಪಿಲ್ಲರ್ 16
*ವೆಚ್ಚ 600 ಕೋಟಿ ರೂ.
*ಕಾಮಗಾರಿ ಆರಂಭ 2017 ಜೂನ್ 30.
ಕಾಮಗಾರಿ ಸ್ಥಳದಲ್ಲಿ 30 ಮರಗಳಿದ್ದು,ಇದರಲ್ಲಿ 12 ಮರಗಳನ್ನು ಸ್ಥಳಾಂತರ ಮಾಡಲು ಉದ್ದೇಶಿಸಲಾಗಿದೆ. ಇನ್ನುಳಿದ ಹಳೆಯ ಮರಗಳನ್ನು ಕತ್ತರಿಸುವುದಕ್ಕೆ ಸೂಚನೆ ನೀಡಲಾಗಿದೆ.

ಏನೇನು ಕಾಮಗಾರಿ ಬಾಕಿ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗ ಒಂದು ಪಿಲ್ಲರ್ ಕಾಮಗಾರಿ ಬಾಕಿ ಇದೆ. ಈ ಸಂಬಂಧ ಸಂಚಾರ ಪೊಲೀಸರಿಂದ ಏಳು ದಿನಗಳ ಕಾಲ ಮಾರ್ಗ ಬದಲಾವಣೆಗೆ ಅನುಮತಿ ಪಡೆದು ಕಾಮಗಾರಿ ಪೂರ್ಣಗೊಳಿಸುವುದಕ್ಕೆ ಸೂಚನೆ ನೀಡಲಾಗಿದೆ.

ರೈಲ್ವೆ ಅಂಡರ್ ಪಾಸ್ ಹೆಚ್ಚುವರಿ ಬಾಕ್ಸ್ ಅಳವಡಿಕೆ
ಇನ್ನು ರೈಲ್ವೆ ಅಂಡರ್ಪಾಸ್ ಬಳಿ ಮತ್ತೊಂದು ವಾಹನ ಸಂಚಾರಕ್ಕೆ ಹೆಚ್ಚುವರಿ ಬಾಕ್ಸ್ ಅಳವಡಿಸಲು ರೈಲ್ವೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ಪಾದಚಾರಿ ಮಾರ್ಗ ಹಾಳು
ಮೇಲ್ಸೇತುವೆ ನಿರ್ಮಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಪಾದಚಾರಿ ಮಾರ್ಗ ಹಾಳಾಗಿರುವುದಕ್ಕೆ ಆಡಳಿತಾಧಿಕಾರಿ ಪಾಲಿಕೆಯ ಅಧಿಕಾರಿಗಳ ಮೇಲೆ ಕಿಡಿಕಾರಿದ್ದಾರೆ.ರೈಲ್ವೆ ಹಳಿ ಕೆಳಗೆ ಪಾದಚಾರಿ ಮಾರ್ಗ ಹಾಳಾಗಿದ್ದು, ಸರಿಪಡಿಸುವಂತೆ ಸೂಚಿಸಿದ್ದಾರೆ.

ಭೂಸ್ವಾಧೀನಕ್ಕೆ 25 ಕೋಟಿ ರೂ
ಭೂಸ್ವಾಧೀನ ಪ್ರಕ್ರಿಯೆಗೆ ಸ್ಥಳೀಯ ಟಿಡಿಆರ್ ಒಪ್ಪಿಗೆ ನೀಡದಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿ ದರ ಆಧಾರದ ಮೇಲೆ ಆರ್ಥಿಕ ಪರಿಹಾರ ನೀಡುವುದಕ್ಕೆ ಚರ್ಚೆ ನಡೆದಿದೆ. ಏಳು ಆಸ್ತಿಗಳನ್ನು ಸ್ವಾಧೀನಕ್ಕೆ ಪಡೆಯಬೇಕಿದೆ. 25 ಕೋಟಿ ರೂ. ಪರಿಹಾರ ನೀಡಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications