ಬಿಬಿಎಂಪಿಯಿಂದ ಹೊಸದಾಗಿ ಮನೆ ಮನೆ ಮತದಾರರ ಸಮೀಕ್ಷೆ
ಬೆಂಗಳೂರು, ಡಿಸೆಂಬರ್ 7: ಮತದಾರರ ದತ್ತಾಂಶ ಕಳ್ಳತನದ ಹಗರಣದಲ್ಲಿ ಅಪಖ್ಯಾತಿಗೆ ಒಳಗಾಗಿರುವ ಬಿಬಿಎಂಪಿ ಇದೀಗ ಎಲ್ಲಾ ಅರ್ಹ ಮತದಾರರನ್ನು ಸೇರ್ಪಡೆಗೊಳಿಸಲು ಹೊಸದಾಗಿ ಮನೆ ಮನೆ ಸಮೀಕ್ಷೆಯನ್ನು ಪ್ರಾರಂಭಿಸಿದೆ.
ಬಿಬಿಎಂಪಿಯ ಈ ಕ್ರಮ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಒಟ್ಟು ಮನೆಗಳ 59.62 ಪ್ರತಿಶತವನ್ನು ಒಳಗೊಂಡಿದೆ. ಆದಾಗ್ಯೂ, ಕೆಲವು ಕಂದಾಯ ಅಧಿಕಾರಿಗಳು, ನಿವಾಸಿಗಳಿಂದ ಉತ್ತಮ ಬೆಂಬಲವನ್ನು ಪಡೆಯುತ್ತಿಲ್ಲ ಎಂದು ದೂರಿದರು. ಅದರಲ್ಲೂ ವಿಶೇಷವಾಗಿ ಬಿಬಿಎಂಪಿಗೆ ಉಚಿತ ಚುನಾವಣಾ ಸಂಬಂಧಿತ ಸೇವೆಗಳನ್ನು ಒದಗಿಸುವ ನೆಪದಲ್ಲಿ ರಾಜಕೀಯ ಮುಖಂಡರಿಗೆ ಎನ್ಜಿಒ ಚಿಲುಮೆ ಕೆಲಸ ಮಾಡುತ್ತಿರುವುದು ಕಂಡುಬಂದಿದೆ.
ಏತನ್ಮಧ್ಯೆ, ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಜನವರಿ 2022ರಿಂದ ಮತದಾರರ ಪಟ್ಟಿಗೆ ಮಾಡಲಾದ ಸೇರ್ಪಡೆ ಮತ್ತು ಅಳಿಸುವಿಕೆಗೆ ಆಕ್ಷೇಪಣೆಗಳನ್ನು ಎತ್ತಲು ಐಎಎಸ್ ಅಧಿಕಾರಿ ಅಜಯ್ ನಾಗಭೂಷಣ್ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಮತ್ತು ಅವುಗಳ ಪದಾಧಿಕಾರಿಗಳ ಸಭೆ ಕರೆದಿದ್ದಾರೆ. ಡಿ. 7ರಂದು ಮಧ್ಯಾಹ್ನ 12 ಗಂಟೆಗೆ ವೈಟ್ಫೀಲ್ಡ್ ಮುಖ್ಯರಸ್ತೆಯ ಆರ್ಎಚ್ಬಿ ಕಾಲೋನಿಯಲ್ಲಿರುವ ಜಂಟಿ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಯಲಿದೆ. ಶ್ರೀನಿವಾಸ್, ಕಂದಾಯ ಅಧಿಕಾರಿ, ಮಹದೇವಪುರ, ವಿವರಗಳಿಗೆ ದೂ.9480684998 ಸಂಪರ್ಕಿಸಬಹುದು.

ಇದೇ ರೀತಿಯ ಸಮೀಕ್ಷೆಯನ್ನು ನವೆಂಬರ್ ಮಧ್ಯದಲ್ಲಿ ಚಿಲುಮೆ ಎನ್ಜಿಒ ನಡೆಸಿದ ನಂತರ ಬಿಬಿಎಂಪಿ ನೂತನ ಮತದಾರರ ಸೇರ್ಪಡೆ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿ ಅಧಿಕಾರಿಗಳನ್ನು ಯಾಮಾರಿಸಿ ಜಾಗೃತಿ ಮೂಡಿಸುವ ನೆಪದಲ್ಲಿ ಸಾರ್ವಜನಿಕರಿಂದ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿದೆ ಎಂಬ ಆರೋಪ ಎನ್ಜಿಒ ಮೇಲಿದೆ. ಆಡಳಿತಾರೂಢ ಬಿಜೆಪಿ ಸರ್ಕಾರದ ಜೊತೆ ಶಾಮೀಲಾಗಿ ಈ ಕೃತ್ಯ ಎಸಗಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಈ ಆರೋಪವನ್ನು ಬಿಜೆಪಿ ನಿರಾಕರಿಸಿದೆ.
ಬಿಬಿಎಂಪಿ ನಡೆಸಲಿರುವ ತಾಜಾ ಸಮೀಕ್ಷೆಯು ಗರಿಷ್ಠ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಎಲ್ಲಾ 28 ಕ್ಷೇತ್ರಗಳಲ್ಲಿ ಸುಮಾರು 60 ಪ್ರತಿಶತ ಮನೆಗಳನ್ನು ಇದುವರೆಗೆ ಸಮೀಕ್ಷೆ ಮಾಡಲಾಗಿದೆ ಎಂದು ಅದು ಹೇಳಿದೆ. ಹಿಂದಿನ ಸಮೀಕ್ಷೆಯನ್ನು ಬಿಬಿಎಂಪಿ ಆದೇಶದಿಂದ ಸುಗಮಗೊಳಿಸಲಾಯಿತು. ಇದು ಎನ್ಜಿಒ ಚಿಲುಮೆಗೆ ಮನೆ ಮನೆಗೆ ಹೋಗಲು ಮತ್ತು ಆನ್ಲೈನ್ನಲ್ಲಿ ಮತದಾರರ ಐಡಿಗಾಗಿ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತು ಜಾಗೃತಿ ಮೂಡಿಸಲು ಅನುಮತಿ ನೀಡಿತ್ತು. ಆದಾಗ್ಯೂ, ಎನ್ಜಿಒ ಸದಸ್ಯರು ಸರ್ಕಾರಿ ಅಧಿಕಾರಿಗಳಂತೆ ಪೋಸುಕೊಟ್ಟು ಬೆಂಗಳೂರಿನ ಸಾವಿರಾರು ಮತದಾರರ ಖಾಸಗಿ ಮಾಹಿತಿಯನ್ನು ಜಾತಿಯಿಂದ ವೈವಾಹಿಕ ಸ್ಥಿತಿಯವರೆಗೆ ಪಡೆದುಕೊಂಡಿದ್ದಾರೆ ಎಂದು ನಂತರ ತಿಳಿದುಬಂದಿದೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications