E Khata: ಇ -ಖಾತಾ: ಬೆಂಗಳೂರಿನಲ್ಲಿ ಹೊಸ ಸಮಸ್ಯೆ, ಜಿಬಿಎ ಲೆಕ್ಕಾಚಾರ ತಲೆಕೆಳಗೆ
E Khata: ಬೆಂಗಳೂರಿನಲ್ಲಿ ಇ - ಖಾತಾ ಸೇವೆಯಲ್ಲಿ ಗೊಂದಲ ಮುಂದುವರಿದಿದೆ. ಬೆಂಗಳೂರಿನಾದ್ಯಂತ ಆಸ್ತಿಗಳ ಸಂರಕ್ಷಣೆ ಹಾಗೂ ಖರೀದಿ ಮತ್ತು ಮರಾಟದ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಇ ಖಾತಾ ಪರಿಚಯಿಸಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಆಸ್ತಿಗಳ ಮಾರಾಟದ ಸಂದರ್ಭದಲ್ಲಿ ಮೋಸವಾಗಬಾರದು ಮತ್ತು ಪ್ರಾಪರ್ಟಿ ಟ್ಯಾಕ್ಸ್ ಪಾವತಿ ಮಾಡುವುದರಲ್ಲಿ ಯಾವುದೇ ಆಸ್ತಿಗಳು (ಆಸ್ತಿದಾರರು) ಸಹ ಹೊರಗೆ ಉಳಿಯಬಾರದು ಎನ್ನುವುದು ಸೇರಿದಂತೆ ಹಲವು ಕಾರಣಗಳನ್ನು ಇ ಖಾತಾ ಒಳಗೊಂಡಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಇ ಖಾತಾ ಪರಿಚಯಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಇ ಖಾತಾವನ್ನು ಪರಿಚಯಿಸಿ ಒಂದೂವರೆ ವರ್ಷಕ್ಕೂ ಹೆಚ್ಚು ಅವಧಿಯಾಗಿದ್ದರೂ ಇಲ್ಲಿಯ ವರೆಗೆ ಬೆಂಗಳೂರಿನ ಎಲ್ಲಾ ಆಸ್ತಿದಾರರಿಗೂ ಇ ಖಾತಾ ನೀಡಲು ಸಾಧ್ಯವಾಗಿಲ್ಲ. ಅಲ್ಲದೇ ಇ ಖಾತಾದಲ್ಲಿ ಇದೀಗ ಹೊಸ ಗೊಂದಲ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಅಂದಾಜು 24 ಲಕ್ಷ ಆಸ್ತಿಗಳಿದ್ದು ಶೇ 50% ರಷ್ಟು ಆಸ್ತಿಗಳಿಗೂ ಇಲ್ಲಿಯ ವರೆಗೆ ಇ ಖಾತಾ ನೀಡಲು ಸಾಧ್ಯವಾಗಿಲ್ಲ.

ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಪಾಸ್ಪೋರ್ಟ್ ಸೇವಾ ಕೇಂದ್ರದ ಮಾದರಿಯಲ್ಲಿ ಇ-ಖಾತಾ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲು ಯೋಜನೆ ರೂಪಿಸುವುದಾಗಿ ಹೇಳಿತ್ತು. ಆದರೆ, ಇ - ಖಾತಾ ಸೇವಾ ಕೇಂದ್ರ ಸೂಕ್ತ ಸ್ಥಳವನ್ನು ಗುರುತಿಸಲು ಸಾಧ್ಯವಾಗದ ಕಾರಣ ಆರಂಭದಿಂದಲೂ ಅಡೆತಡೆಗಳನ್ನು ಎದುರಿಸುತ್ತಿದೆ.
GBA ಇನ್ನೂ ಇ-ಖಾತಾ ಕೇಂದ್ರಗಳಿಗೆ ಸ್ಥಳಗಳನ್ನು ನಿಗದಿ ಮಾಡಲು ಸಾಧ್ಯವಾಗುತ್ತಿಲ್ಲ. ಇ - ಖಾತಾ ಸೇವಾ ಕೇಂದ್ರಕ್ಕೆ ಸ್ಥಳಾವಕಾಶದ ಕೊರತೆಯು ಯೋಜನೆಯ ಅನುಷ್ಠಾನದಲ್ಲಿ ಮತ್ತಷ್ಟು ವಿಳಂಬಕ್ಕೆ ಕಾರಣವಾಗುತ್ತಿದೆ. ನಗರದಾದ್ಯಂತ ಸೇವೆಯ ಸಮಸ್ಯೆಗಳು ಹೆಚ್ಚುತ್ತಿರುವುದರಿಂದ ಇ-ಖಾತಾ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲು ಸೇವಾ ಕೇಂದ್ರ ಸ್ಥಾಪನೆಯ ಉದ್ದೇಶ ಹೊಂದಿರುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದರು.
ಆದರೆ ಅನೇಕ ಅರ್ಜಿದಾರರು ಇ-ಖಾತಾ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಇನ್ನೂ ಕೆಲವರು ತಮ್ಮ ಇ ಖಾತಾ ಅರ್ಜಿಗಳನ್ನು ಪರಿಶೀಲಿಸಲಾಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಹಲವು ಆಸ್ತಿದಾರರು ಪ್ರಾದೇಶಿಕ ಕಚೇರಿ (RO)ಗೆ ಖುದ್ದಾಗಿ ಭೇಟಿ ನೀಡುತ್ತಿದ್ದಾರೆ.
ಇ ಖಾತಾ ಸೇವಾ ಕೇಂದ್ರಕ್ಕೆ ಜಾಗ ಸಿಗುತ್ತಿಲ್ಲ!
ಬೆಂಗಳೂರಿನಲ್ಲಿ ಇ - ಖಾತಾ ಸೇವಾ ಕೇಂದ್ರ ಪ್ರಾರಂಭಿಸುವುದಕ್ಕೆ ಸ್ಥಳಾವಕಾಶದ ಕೊರತೆ ಎದುರಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಾಸ್ಪೋರ್ಟ್ ಸೇವಾ ಕೇಂದ್ರಗಳ ಮಾದರಿಯಲ್ಲಿ ಇ-ಖಾತಾ ಸೇವಾ ಕೇಂದ್ರಗಳನ್ನು ತೆರೆಯುವ ಉದ್ದೇಶ ಇದೆ. ಆದರೆ ಜಾಗದ ಅಭಾವ ಇದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ.
ಇ ಸೇವಾ ಕೇಂದ್ರಕ್ಕೆ ಜಾಗ ಹುಡುಕಲಾಗುತ್ತಿದೆ. ಬೆಂಗಳೂರಿನ ಐದು ಹೊಸ ಪಾಲಿಕೆಗಳ ವ್ಯಾಪ್ತಿಯಲ್ಲಿ ಐದು ಇ-ಖಾತಾ ಸೇವಾ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಹೊಸ ಕೇಂದ್ರಗಳಿಗೆ ಸ್ಥಳಾವಕಾಶ ಕಲ್ಪಿಸಲು ಬಾಡಿಗೆ ಅಥವಾ ಗುತ್ತಿಗೆಗೆ ಆಧಾರದ ಮೇಲೆ ಜಾಗ ಹುಡುಕುವ ಚಿಂತನೆಯೂ ಇದೆ ಎಂದು ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ.
ತಪ್ಪದ ಇ ಖಾತಾ ಸಂಕಷ್ಟ: ಇನ್ನು ಇ ಖಾತಾ ವಿಚಾರದಲ್ಲಿ ಸಾರ್ವಜನಿಕರಿಗೆ ಗೊಂದಲ ಮುಂದುವರಿದಿದೆ. ಕರ್ನಾಟಕ ಸರ್ಕಾರವು ಫೇಸ್ಲೆಸ್ ಇ ಖಾತಾ ಪರಿಚಯ ಮಾಡಿತ್ತು. ಆದರೆ ಒಂದೇ ವಾರದಲ್ಲಿ ಇದನ್ನು ಹಿಂಪಡೆಯಲಾಗಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications