ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರದಲ್ಲಿ 4 ಹೆಚ್ಚುವರಿ ಸೇವೆ ಲಭ್ಯ!
ಬೆಂಗಳೂರು, ಮೇ 18: ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಶನಿವಾರದಿಂದಲೇ ಹೆಚ್ಚಿನ ಸೇವೆ ಲಭ್ಯವಾಗಲಿದೆ. ಸೇವಾ ಸಿಂಧು ಯೋಜನೆಯಡಿ 500 ಸೇವೆಗಳನ್ನು ಒದಗಿಸಲು ಇ-ಆಡಳಿತ ಇಲಾಖೆಯ ಇಡಿಸಿಎಸ್ ವಿಭಾಗ ಸಿದ್ಧತೆ ನಡೆಸಿದ್ದು, ಪ್ರಾಯೋಗಿಕವಾಗಿ ನಾಲ್ಕು ಸೇವೆಗಳು ಶನಿವಾರದಿಂದಲೇ ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿ ಇತರ ಕೇಂದ್ರಗಳ ಮೂಲಕ ಲಭ್ಯವಾಗಲಿದೆ.
ಭೂಮಿ ಖರೀದಿಯ ದಾಖಲೆಗಳು, ನೋಂದಣಿ, ವ್ಯಾಪಾರ ಪರವಾನಗಿ ಹಾಗೂ ಆರೋಗ್ಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸಲು ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಬೆಂಗಳೂರು ಒನ್ ಕೇಂದ್ರದ ಮೂಲಕ ಖಾತಾ ನೀಡಲಾಗುತ್ತಿದ್ದು, ರಾಜ್ಯಾದ್ಯಂತ ವಿವಿಧ ಸೇವೆಗಳನ್ನು ವಿಸ್ತರಿಸಲು ಚಿಂತನೆ ನಡೆಸಲಾಗುತ್ತಿದೆ.
ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಸೇವೆ ಕೇಂದ್ರ ಮತ್ತು ರಾಜ್ಯದಲ್ಲಿರುವ 6 ಸಾವಿರ ಖಾಸಗಿ ಸಾರ್ವಜನಿಕ ಸೇವಾ ಕೇಂದ್ರಗಳ ಮೂಲಕ ಸೇವೆಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಈ ಕ್ರಮಕ್ಕೆ ಮುಂದಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮೇ 19ರಿಂದ ನಾಲ್ಕು ಸೇವೆಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತಿತರೆ ಸೇವಾ ಕೇಂದ್ರಗಳ ಮೂಲಮ ದೊರೆಯಲಿದೆ. ಹಿರಿಯ ನಾಗರಿಕರ ಗುರುತಿನ ಚೀಟಿ, ಗ್ರಂಥಾಲಯ ಗುರುತಿನ ಚೀಟಿ, ಅಂತಾರಾಷ್ಟ್ರೀಯ ಜನನ ಪ್ರಮಾಣ ಪತ್ರ ಮತ್ತು ಮರಣ ಪ್ರಮಾಣಪತ್ರ ಸೇವೆಗಳನ್ನು ಪಡೆಯಬಹುದಾಗಿದೆ.
ಈಗಾಗಲೇ ಈ ಕೇಂದ್ರಗಳಲ್ಲಿ ಸಾಮಾನ್ಯ ಜನನ, ಮರಣ ಪತ್ರಗಳನ್ನು ನೀಡಲಾಗುತ್ತಿದೆ. ಈಗಾಗಲೇ ಇಡಿಸಿಎಸ್ ವಿಭಾಗವು ಖಾತೆಗಳನ್ನು ಬೆಂಗಳೂರು ಒನ್ ಕೇಂದ್ರದ ಮೂಲಕ ಒದಗಿಸುವ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಜಾರಿ ಮಾಡಿದೆ.
ಕಳೆದ ವರ್ಷ ಮೇನಲ್ಲಿ 60 ಕೇಂದ್ರಗಳ ಮೂಲಕ ಆರಂಭಗೊಂಡ ಸೇವಾ ಸಿಂಧು ಯೋಜನೆಯು ಇದೀಗ 6 ಸಾವಿರ ಕೇಂದ್ರಗಳನ್ನು ಹೊಂದಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications