ಕನ್ನಡದಲ್ಲೇ ನಾಮಫಲಕಕ್ಕೆ ಕೊನೆಗೂ ಕಾನೂನು ರೂಪಿಸಲು ನಿರ್ಧಾರ
ಬೆಂಗಳೂರು, ಅಕ್ಟೋಬರ್ 12: ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಕ್ಕೆ ಕಾನೂನು ರೂಪಿಸುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಕನ್ನಡ ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ನಾಮಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಬಿಬಿಎಂಪಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸುತ್ತೋಲೆ ಹೊರಡಿಸಿತ್ತು. ಆದರೆ ವಾಣಿಜ್ಯ ಮಳಿಗೆಗಳ ಮಾಲೀಕರು ಇದಕ್ಕೆ ಒಪ್ಪದೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಕನ್ನಡದಲ್ಲೇ ನಾಮಫಲಕ ಕಡ್ಡಾಯ ಎನ್ನುವ ನಿಯಮ ಯಾವ ಕಾಯ್ದೆಯಲ್ಲಿದೆ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. ಆದರೆ ಇದೀಗ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶಗಳ ಬೈಲಾ 2018ರ ಮೂಲಕ ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಕಾನೂನಿನ ಮಾನ್ಯತೆ ಪಡೆಯಲು ದಾರಿ ಸೃಷ್ಟಿಯಾಗುವ ನಿರೀಕ್ಷೆಯಿದೆ.
ರಾಜ್ಯ ಸರ್ಕಾರ ಅನುಮತಿಯೊಂದಿಗೆ ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ ಕಾಯ್ದೆಯಡಿ ಹೊಸದಾಗಿ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶಗಳ ಬೈಲಾಗಳು ರೂಪಿಸಲಾಗಿದ್ದು ಇದರಲ್ಲಿ ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಅಂಗಡಿ ಮುಗ್ಗಟ್ಟು, ಮಾಲ್ ಗಳು ಸೇರಿದಂತೆ ಎಲ್ಲಾ ರೀತಿಯ ವಾಣಿಜ್ಯ ಮಳಿಗೆಗಳ ನಾಮಫಲದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಬಳಕೆ ಮಾಡಬೇಕು ಉಳಿದ ಭಾಷೆ ಶೇ 40ರಷ್ಟು ಮೀರಬಾರದು ಎಂಬ ನಿಯಮವನ್ನು ರೂಪಿಸಲು ಹೊರಟಿದೆ.

ಬೈಲಾ ಪ್ರಕಟಣೆ, ಅ.24ರವರೆಗೆ ಆಕ್ಷೇಪಣೆ ಸ್ವೀಕಾರ
ಈ ಹೊಸ ಬೈಲಾವನ್ನು ಈಗಾಗಲೇ ಬಿಬಿಎಂಪಿ ವೆಬ್ಸೈಟ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸಲು ಅ.24ರವರೆಗೆ ಅವಕಾಶ ನೀಡಲಾಗಿದೆ. ಬರುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಹೊಸ ಜಾಹೀರಾತು ಬೈಲಾವನ್ನು ಅಂತಿಮಗೊಳಿಸಲಾಗುತ್ತದೆ.

ಸುತ್ತೋಲೆ ಸದ್ಯಕ್ಕೆ ವಾಪಸ್
ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ ಪಾಲಿಕೆ ಹೊರಡಿಸಿರುವ ಸುತ್ತೋಲೆಯನ್ನು ಸದ್ಯಕ್ಕೆ ವಾಪಸ್ ಪಡೆಯುವುದು ಬಿಬಿಎಂಪಿಗೆ ಅನಿವಾರ್ಯವಾಗಿದೆ. ಸುತ್ತೋಲೆಯನ್ನು ಕೆಲ ವಾಣಿಜ್ಯ ಮಳಿಗೆಗಳ ಮಾಲೀಕರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ. ಸದ್ಯಕ್ಕೆ ಈ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ. ಹೊಸ ಜಾಹೀರಾತು ಬೈಲಾಗೆ ಸರ್ಕಾರದಿಂದ ಅನುಮತಿ ದೊರೆತ ಕೂಡಲಢ ಹೊಸ ಸುತ್ತೋಲೆ ಹೊಡರಿಸುವ ಚಿಂತನೆ ಇದೆ.

ಬಿಬಿಎಂಪಿಯಂಪಿ ಅಡ್ಡಕತ್ತರಿಯಲ್ಲಿದೆ
ನಾಮಫಲಕಗಳಲ್ಲಿ ಕನ್ನಡವೇ ಪ್ರಧಾನ ಭಾಷೆಯಾಗಿರಬೇಕು ಎಂದು ಯಾವ ಕಾನೂನಿನ ಅಡಿಯಲ್ಲಿ ಹೊರಡಿಸಲಾಗಿದೆ. ಸುತ್ತೋಲೆಗೆ ಕಾನೂನಿನ ಮಾನ್ಯತೆ ಇದೆಯಾ ಎಂದು ನ್ಯಾಯಪೀಠ ಬಿಬಿಎಂಪಿಗೆ ಪ್ರಶ್ನೆ ಮಾಡಿದೆ. ಆದರೆ ಸುತ್ತೋಲೆ ಕಾನೂನಿನ ಅಡಿಯಲ್ಲಿ ಇಲ್ಲ ಎನ್ನುವುದು ಮನದಟ್ಟಾಗಿದೆ. ಸುತ್ತೋಲೆ ವಾಪಸ್ ಪಡೆದರೆ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರ ವಿರೋಧ ಎದುರಿಸಬೇಕಾಗುತ್ತದೆ, ಇಲ್ಲವಾದರೆ, ನ್ಯಾಯಾಲಯದಲ್ಲಿ ಮುಜುಗರ ಅನುಭವಿಸಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿದೆ.

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುತ್ತೋಲೆ
ಜುಲೈ 27ರಂದು ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಂಡಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ










Click it and Unblock the Notifications