Mysuru-Magadi Road: ಮೈಸೂರು ರೋಡ್ ಟು ಮಾಗಡಿ ರೋಡ್, ಏನಿದು ಯೋಜನೆ? ಯಾರಿಗೆಲ್ಲ ಲಾಭ?
ಬೆಂಗಳೂರಿನ ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ 11 ಕಿಮೀ ಉದ್ದದ ಮೇಜರ್ ಆರ್ಟೀರಿಯಲ್ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಇದು ಬೆಂಗಳೂರಿನ ಮೊದಲ 10 ಲೇನ್ ರಸ್ತೆಯಾಗಲಿದ್ದು, 300 ಅಡಿ ಅಗಲ ಇರಲಿದೆ. ಬಿಡಿಎ ಕೆಂಪೇಗೌಡ ಲೇಔಟ್ ಮೂಲಕ ಈ ರಸ್ತೆ ಹಾದು ಹೋಗಲಿದೆ. ಸದ್ಯ ಇಲ್ಲಿ ಒತ್ತುವರಿ ತೆರವು ಮಾಡುವ ಕೆಲಸ ಕೂಡ ನಡೆಯುತ್ತಿದ್ದು, ಇನ್ನು ಸುಮಾರು ಮೂರು ತಿಂಗಳ ಕೆಲಸ ಬಾಕಿ ಉಳಿದಿದೆ.
ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆಯನ್ನು ಸಂಪರ್ಕಿಸುವ ಚಲ್ಲಘಟ್ಟ ಬಳಿ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಕೂಡ ಈಗಾಗಲೆ ಅನುಮೋದನೆ ನೀಡಿದೆ. 2019ರಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಈ ಮನವಿ ಮಾಡಿತ್ತು. ಆದರೆ, ಕೋವಿಡ್ ಹಾಗೂ ಭೂಸ್ವಾಧೀನ ಸಮಸ್ಯೆಯಿಂದ ಯೋಜನೆ ನಿಧಾನವಾಯಿತು. ಇದರ ಅಂದಾಜು ಸುಮಾರು 39 ಕೋಟಿ ಎನ್ನಲಾಗಿದೆ. ಇದು ಎರಡು ರಸ್ತೆಗಳ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಿ, ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ.

ಖಾಸಗಿ ಕಂಪನಿಯೊಂದು ಈ ರೈಲ್ವೆ ಕೆಳಸೇತುವೆ (ಆರ್ಯುಬಿ) ನಿರ್ಮಾಣದ ಟೆಂಡರ್ ಪಡೆದುಕೊಂಡಿದೆ. ಈ ಯೋಜನೆಯು ಮೇಜರ್ ಆರ್ಟಿರಿಯಲ್ ರಸ್ತೆಯಲ್ಲಿ (ಎಂಎಆರ್) ಇದು ಕೂಡ ಇದೆ. ಬಿಎಂಆರ್ಸಿಎಲ್ನಿಂದ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಮಾರ್ಗದೊಂದಿಗೆ ಈ ಆರ್ಯುಬಿ ಲಿಂಕ್ ಆಗಲಿದೆ. ಇದು ನಾಲ್ಕು ಲೇನ್ಗಳಲ್ಲಿ ವ್ಯಾಪಿಸಲಿದ್ದು, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವುದಾಗಿ ಬಿಡಿಎ ಅಧಿಕಾರಿಗಳು ಹೇಳಿದ್ದಾರೆ.
ಈ ರಸ್ತೆಯು ಬೆಂಗಳೂರು ಪಶ್ಚಿಮ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಲಿದೆ. ಬಿಡದಿ ಅಥವಾ ನೆಲಮಂಗಲದಲ್ಲಿ ಉದ್ದೇಶಿತ ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲು ಸಹ ಇದು ಸಹಾಯ ಮಾಡಲಿದೆ. ಮುಖ್ಯವಾಗಿ ಪಿಆರ್ಆರ್ ಅನ್ನು ಕೂಡ ಸಂಪರ್ಕಿಸಲಿದೆ. ಬೆಂಗಳೂರಿನ ವಾಹನ ದಟ್ಟಣೆ ತಪ್ಪಿಸುವಲ್ಲಿ ಈ ರಸ್ತೆ ಪ್ರಮುಖ ಪಾತ್ರ ವಹಿಸಲಿದೆ.

ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ 10.75 ಕಿ.ಮೀ ಉದ್ದದ ಎಂಎಆರ್ ಯೋಜನೆಯು ಪ್ರಸ್ತುತ ಪ್ರಗತಿಯಲ್ಲಿದೆ. ಈ ವಿಸ್ತಾರವಾದ ರಸ್ತೆಯು 100 ಮೀಟರ್ ಅಗಲ ಮತ್ತು 8 ಲೇನ್ಗಳನ್ನು ಹೊಂದಿದೆ. ಅಲ್ಲದೆ ನಾಡಪ್ರಭು ಕೆಂಪೇಗೌಡ ಬಡಾವಣೆಯ ಎಲ್ಲ 9 ಬ್ಲಾಕ್ಗಳನ್ನೂ ಸಂಪರ್ಕಿಸಲಿದೆ.
ಮಾಗಡಿ ರಸ್ತೆ ಮತ್ತು ಮೈಸೂರು ರಸ್ತೆಗೆ ಸಂಪರ್ಕ ಕೂಡ ಸುಲಭವಾಗಲಿದೆ. ಇದರಲ್ಲಿ ಮೂರು ಅಂಡರ್ಪಾಸ್ಗಳು, 35 ಸಣ್ಣ ಸೇತುವೆಗಳು ಮತ್ತು ರೈಲ್ವೆ ಕೆಳಸೇತುವೆ ಕೂಡ ಒಳಗೊಂಡಿದೆ. ಈ ಯೋಜನೆಯು ಈ ಎರಡು ರಸ್ತೆಗಳನ್ನು ಜೋಡಿಸುವ ಮೂಲಕ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ.

2019ರಕ್ಕೇ ಕೆಂಪೇಗೌಡ ಲೇಔಟ್ನಲ್ಲಿರುವ ಎಂಎಆರ್ ಅನ್ನು ಮೈಸೂರು ರಸ್ತೆಗೆ ಸಂಪರ್ಕಿಸುವ ರೈಲ್ವೆ ಕೆಳಸೇತುವೆ ನಿರ್ಮಿಸಲು ರೈಲ್ವೆ ಇಲಾಖೆಗೆ ಬಿಡಿಎ ಅನುಮತಿ ಕೋರಿತ್ತು. ಆದರೆ, ಕಾರಣಾಂತರಗಳಿಂದ ಇದು ವಿಳಂಬವಾಯಿತು. ಈಗ ರೈಲ್ವೇ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ರೈಲ್ವೇ ಟ್ರ್ಯಾಕ್ ಅಡಚಣೆಯನ್ನು ಬೈಪಾಸ್ ಮಾಡುವ ಮೂಲಕ ಈ ರಸ್ತೆಯು ಮೈಸೂರು ರಸ್ತೆಯನ್ನು ಸಂಪರ್ಕಿಸಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications