ಬೆಂಗಳೂರು-ಹಿಂದೂಪುರ ಮೆಮು ರೈಲು; ವೇಳಾಪಟ್ಟಿ, ನಿಲ್ದಾಣ
ಬೆಂಗಳೂರು, ನವೆಂಬರ್ 05 : ನೈಋತ್ಯ ರೈಲ್ವೆ ಬೆಂಗಳೂರು-ಹಿಂದೂಪುರ ನಡುವೆ ಮೆಮು ರೈಲು ಸಂಚಾರವನ್ನು ಆರಂಭಿಸಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಈ ರೈಲು ಹಿಂದೂಪುರಕ್ಕೆ ಸಂಚರಿಸಲಿದೆ.
ನವೆಂಬರ್ 1ರಿಂದ ನೈಋತ್ಯ ರೈಲ್ವೆ ಈ ರೈಲು ಸಂಚಾರವನ್ನು ಆರಂಭಿಸಿದೆ. ಭಾನುವಾರ ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿಯೂ ರೈಲು ಬೆಂಗಳೂರು-ಹಿಂದೂಪುರ ನಡುವೆ ಸಂಚಾರ ನಡೆಸಲಿದೆ.
ರೈಲು ಸಂಖ್ಯೆ 06565 ಮತ್ತು 06566 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಹಿಂದೂಪುರ ನಡುವೆ ಸಂಚರಿಸಲಿದೆ. ಪ್ರಯಾಣಿಕರು ರೈಲು ಸೇವೆಯ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ವೇಳಾಪಟ್ಟಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಬೆಳಗ್ಗೆ 9.30ಕ್ಕೆ ಹೊರಡಲಿರುವ ರೈಲು ಮಧ್ಯಾಹ್ನ 12ಗಂಟೆಗೆ ಹಿಂದೂಪುರಕ್ಕೆ ತಲುಪಲಿದೆ. ಮಧ್ಯಾಹ್ನ 1 ಗಂಟೆಗೆ ಹಿಂದೂಪುರದಿಂದ ಹೊರಡುವ ರೈಲು ಸಂಜೆ 4.10ಕ್ಕೆ ಕೆಎಸ್ಆರ್ ರೈಲು ನಿಲ್ದಾಣ ತಲುಪಲಿದೆ.
ನಿಲ್ದಾಣಗಳು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಡುವ ರೈಲು, ಕಂಟೋನ್ಮೆಂಟ್, ಬೆಂಗಳೂರು ಪೂರ್ವ, ಬೈಯಪ್ಪನಹಳ್ಳಿ, ಚನ್ನಸಂದ್ರ, ಯಲಹಂಕ, ರಾಜನಕುಂಟೆ, ದೊಡ್ಡಬಳ್ಳಾಪುರ, ವಡ್ಡರಹಳ್ಳಿ, ಮಾಕಳಿದುರ್ಗ, ತೊಂಡೆಬಾವಿ, ಸೋಮೇಶ್ವರ, ಗೌರಿಬಿದನೂರು, ವಿದುರಾಶ್ವತ್ಥ, ದೇವರಪಲ್ಲೆ ಮಾರ್ಗವಾಗಿ ಹಿಂದೂಪುರಕ್ಕೆ ತಲುಪಲಿದೆ.