Property: ಬೆಂಗಳೂರು ಈ ನಗರದ ನಡುವೆ ಹೊಸ ಯೋಜನೆ: ಭೂಮಿ ಬೆಲೆ ಭರ್ಜರಿ ಹೆಚ್ಚಳದ ನಿರೀಕ್ಷೆ!
New Namma Metro Project: ಬೆಂಗಳೂರು ಹಾಗೂ ತುಮಕೂರಿನ ರಿಯಲ್ ಎಸ್ಟೇಟ್ಗೆ ಸಂಬಂಧಿಸಿದಂತೆ ಮತ್ತೊಂದು ಭರ್ಜರಿ ಗುಡ್ನ್ಯೂಸ್ ಬಂದಿದೆ. ಹೌದು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಬೆಳೆಯುತ್ತಿದ್ದು ಬೆಂಗಳೂರಿನ ರಿಯಲ್ ಎಸ್ಟೇಟ್ನೊಂದಿಗೆ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಿಗೂ ರಿಯಲ್ ಎಸ್ಟೇಟ್ ಬಂಪರ್ ಬಂದಿದ್ದು ಭೂಮಿಯ ಬೆಲೆ ಹೆಚ್ಚಳವಾಗುತ್ತಿದೆ. ಬೆಂಗಳೂರು - ತುಮಕೂರು ಮೆಟ್ರೋ ವಿಸ್ತರಣೆಯಿಂದಾಗಿ ಬೆಂಗಳೂರು ಹಾಗೂ ತುಮಕೂರಿನ ವಿವಿಧ ಭಾಗದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿಗೆ ಗೋಲ್ಡ್ ರೇಟ್ ಬರ್ತಿದೆ. ಹಾಗಾದರೆ ಬೆಂಗಳೂರು - ತುಮಕೂರಿನ ಯಾವೆಲ್ಲಾ ಭಾಗದಲ್ಲಿ ಭೂಮಿಗೆ ಭರ್ಜರಿ ಬೆಲೆ ಬರುತ್ತಿದೆ ಹಾಗೂ ಇದಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರು ಅಭಿವೃದ್ಧಿ ಆದಂತೆಲ್ಲ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲೂ ಭೂಮಿಗೆ ಚಿನ್ನದ ದರ ಬರುತ್ತಿದ್ದು. ಭೂಮಿ ಹಾಗೂ ಆಸ್ತಿ ಮಾರಾಟ ಜೋರಾಗಿದೆ. ನಗರದಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದು ತುಂಬಾ ಸಮಯವಾಗಿದೆ.

ಇದೀಗ ಇದು ಹೊಸ ಪ್ರದೇಶಗಳಿಗೆ ವಿಸ್ತರಿಸುವುದಕ್ಕೆ ಪ್ರಾರಂಭವಾಗಿಳೂರು - ತುಮಕೂರು ಮೆಟ್ರೋ ನಿಲ್ದಾಣ ಅಭಿವೃದ್ಧಿಗೆ ಕೆಲವು ರಾಜಕಾರಣಿಗಳು ವಿರೋಧ ವ್ಯಕ್ತಪಡಿಸಿರುವುದರ ಹೊರತಾಗಿಯೂ ಮೆಟ್ರೋ ವಿಸ್ತರಣೆಯ ಸಿದ್ಧತೆ ಸದ್ದಿಲ್ಲದೆ ನಡೆದಿದೆ. ಇನ್ನು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲೇ ನಿರ್ಮಾಣ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂದಿತ್ತು.
ತುಮಕೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಾಯಕರು ಒಂದಾಗಿದ್ದರು. ಅಲ್ಲದೇ ಕೇಂದ್ರ ಸಚಿವರಾದ ವಿ. ಸೋಮಣ್ಣ ಹಾಗೂ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರು ರಾಜ್ಯ & ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ, ಇದು ಸಾಧ್ಯವಾಗಲಿಲ್ಲ. ಇದರ ಬೆನ್ನಲ್ಲೇ ತುಮಕೂರಿಗೆ ಮತ್ತೊಂದು ಬಂಪರ್ ಹಾಗೂ ದೊಡ್ಡ ಯೋಜನೆ ಬಂದಿದ್ದು. ಎರಡೂ ನಗರಗಳ ಆಸ್ತಿದಾರರು ಹಾಗೂ ಜಾಗ ಖರೀದಿ ಮಾಡಬೇಕು ಎಂದು ಕೊಂಡಿರುವವರು ಖುಷಿಯಾಗಿದ್ದಾರೆ.
ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ಗೆ ಒಳ್ಳೆಯ ಆದಾಯವಿದೆ. ಅದರೊಂದಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಬೆಂಗಳೂರಿನ ವಿಸ್ತೀರ್ಣ ಹೆಚ್ಚಾಗುತ್ತಿದ್ದು. ಬ್ರ್ಯಾಂಡ್ ಬೆಂಗಳೂರು ಮೌಲ್ಯವೂ ಹೆಚ್ಚಾಗಲಿದೆ. ಹೀಗಾಗಿ, ಹೊಸ ಯೋಜನೆಗಳು ರಿಯಲ್ ಎಸ್ಟೇಟ್ಗೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡಲಿದೆ ಎಂದು ಹೇಳಲಾಗಿದೆ.
ಬೆಂಗಳೂರು - ತುಮಕೂರು ಮೆಟ್ರೋ ಯಾವ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳ ?
ಇನ್ನು ಬೆಂಗಳೂರು ಹಾಗೂ ತುಮಕೂರಿನ ನಡುವೆ ಹಲವು ಪ್ರಮುಖ ಪ್ರದೇಶಗಳಲ್ಲಿ ಮೆಟ್ರೋ ಹಾದು ಹೋಗಲಿದ್ದು. ಈ ಭಾಗಗಳಲ್ಲಿ ಭೂಮಿ ಬೆಲೆ ಹೆಚ್ಚಳದ ನಿರೀಕ್ಷೆ ಮಾಡಲಾಗಿದೆ.
* ಮಾದಾವರ ಮೆಟ್ರೋ ನಿಲ್ದಾಣದಿಂದ ಮಾಕಳಿ, ದಾಸನಪುರ, ನೆಲಮಂಗಲ, ವೀವರ್ ಕಾಲೋನಿ, ವಿಶ್ವೇಶ್ವರಪುರ, ನೆಲಮಂಗಲ ಟೋಲ್ಗೇಟ್, ಬೂದಿಹಾಳ್, ಟಿ.ಬೇಗೂರು, ತಿಪ್ಪಗೊಂಡನಹಳ್ಳಿ, ಕುಲವನಹಳ್ಳಿ, ಮಹಿಮಾಪುರ, ಬಿಲ್ಲನಕೋಟೆ ಹಾಗೂ ಸೋಂಪುರ ಕೈಗಾರಿಕಾ ಪ್ರದೇಶ ಪ್ರಮುಖವಾಗಿವೆ.
ಇದರೊಂದಿಗೆ ದಾಬಸ್ಪೇಟೆ, ನಲ್ಲಯನಪಾಳ್ಯ ಚಿಕ್ಕಹಳ್ಳಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಪಂಡಿತನಹಳ್ಳಿ ಕ್ಯಾತ್ಸಂದ್ರ ಬೈಪಾಸ್, ಕ್ಯಾತ್ಸಂದ್ರ, ಎಸ್ಐಟಿ, ತುಮಕೂರು ಬಸ್ ನಿಲ್ದಾಣ, ಟೂಡಾ ಲೇಔಟ್ ಮತ್ತು ನಾಗಣ್ಣನ ಪಾಳ್ಯದ ವರೆಗೆ ಮೆಟ್ರೋ ವಿಸ್ತರಣೆ ಆಗಲಿದೆ. ಅಲ್ಲದೇ ಶಿರಾ ಗೇಟ್ ವರೆಗೆ ಮೆಟ್ರೋ ಬರಲಿದೆ ಎಂದು ಹೇಳಲಾಗಿದೆ. ಹೀಗಾಗಿ, ಈ ಪ್ರದೇಶಗಳ 500 ಮೀ. ವ್ಯಾಪ್ತಿಯಲ್ಲಿ ಆಸ್ತಿಗೆ ಭರ್ಜರಿ ಬೆಲೆ ಬಂದಿದೆ.
ಈ ಮೂಲಕ ಶಿರಾ ಭಾಗದಲ್ಲಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಕನಸು ಈಡೇರಲಿಲ್ಲ ಎಂದು ಕೊರಗುತ್ತಿದ್ದ ಜನರಿಗೆ ಇದೀಗ ಮೆಟ್ರೋ ವಿಸ್ತರಣೆ ಸಂತೋಷ ತಂದಿದೆ ಎಂದೇ ಹೇಳಲಾಗುತ್ತಿದೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications