ಹೊಸ ಶಿಕ್ಷಣ ನೀತಿ ಉನ್ನತ ಶಿಕ್ಷಣದಲ್ಲಿ ಇತಿಹಾಸ ಬರೆಯಲಿದೆ: ಸಿಎಂ
ಬೆಂಗಳೂರು, ಸೆಪ್ಟೆಂಬರ್ 05: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(NEP) ಸುಲಭವಾಗಿ ಹೊಂದಿಕೊಳ್ಳುವ, ಕಾರ್ಯಸಾಧ್ಯವಾಗುವ ಹಾಗೂ ಜೀವನ ಪಾಠಗಳನ್ನು ಕಲಿಸುವ ಉತ್ತಮ ಶಿಕ್ಷಣ ನೀತಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಶಿಕ್ಷಣ ನೀತಿ ಇತಿಹಾಸ ಬರೆಯಲಿದೆ. ಉನ್ನತ ಶಿಕ್ಷಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.
ಹೊಸ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಪ್ರಪ್ರಥಮವಾಗಿ ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಸಮಗ್ರ ಆಧ್ಯಯನದ ನಂತರ ಆಗಿರುವ ಪರಿಣಾಮಕಾರಿಯಾದ ಶಿಕ್ಷಣ ನೀತಿ ಇದು. ರಾಜ್ಯದ ವಿದ್ಯಾರ್ಥಿಗಳು ಇದನ್ನು ಯಶಸ್ವಿಗೊಳಿಸಿದ್ದಾರೆ ಎಂದು ಅವರು ಹೇಳಿದರು.

ಜ್ಞಾನದಿಂದ ಸಮಾಜ, ದೇಶಕ್ಕೆ ಒಳಿತಾಗಬೇಕು
ಮಕ್ಕಳಿಂದಲೂ ಕಲಿಯಲು ಬಹಳಷ್ಟಿರುತ್ತದೆ. ಮಕ್ಕಳು ಮತ್ತು ಶಿಕ್ಷಕರಿಗೆ ತಮ್ಮದೇ ಆದ ಬುದ್ಧಿಮತ್ತೆ ಇರುತ್ತದೆ. ಅವುಗಳನ್ನು ಗೌರವಿಸಬೇಕು. ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ತಮ್ಮ ಯಶಸ್ಸನ್ನು ಕಾಣಬೇಕು. ಸ್ವಾಮಿ ವಿವೇಕಾನಂದರು ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನೇ ಸಾಧಕ. ಸಾವಿನ ನಂತರವೂ ಜನರ ಮನಸ್ಸಿನಲ್ಲಿ ನಿಲ್ಲುವವನು ನಿಜವಾದ ಸಾಧಕ. ಯಶಸ್ಸು ಬೇರೆ, ಸಾಧನೆ ಬೇರೆ. ನಿಮ್ಮ ಯಶಸ್ಸು, ಜನರಿಗೆ ಪ್ರಯೋಜನವಾದರೆ ಅದು ನಿಜವಾದ ಸಾಧನೆ. ಜ್ಞಾನದಿಂದ ಸಮಾಜ, ದೇಶ ಹಾಗೂ ವಿಶ್ವದ ಒಳಿತಿಗೆ ಬಳಕೆಯಾಗಲಿ ಎಂದು ಹಾರೈಸಿದರು.

ಮಕ್ಕಳಲ್ಲಿ ಕುತೂಹಲ ಉಳಿಸಿ
ನಿರಂತರ ಮತ್ತು ಸಂರಚಿತ ಅಭಿವೃದ್ಧಿ ಸಾಧ್ಯವಾಗಿರುವುದು ಗುರುಗಳಿಂದ. ಶಿಸ್ತನ್ನು ರೂಢಿಸಿರುವವರು ಶಿಕ್ಷಕರು. ಶಿಕ್ಷಣದ ಜೀವಾಳ ಶಿಕ್ಷಕರು. ಕುತೂಹಲವನ್ನು ಉಳಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು. ತಾರ್ತಿಕ, ತಾತ್ವಿಕ ಅರ್ಥವನ್ನು ಹುಡುಕಲು ಪ್ರಶ್ನೆ ಹಾಕುವುದು ಅಗತ್ಯ. ಯಾವಾಗ ಈ ವ್ಯವಸ್ಥೆ ಜಾರಿಗೆ ಬರುತ್ತದೋ ಆಗ ದೊಡ್ಡ ವಿಕಾಸ ಜಗತ್ತಿನಲ್ಲಿ ಕಾಣಲು ಸಾಧ್ಯ ಎಂದರು.

ಶಿಕ್ಷಕರ ಸ್ವಾಸ್ಥ್ಯ ಸಮಾಜದ ಸ್ವಾಸ್ಥ್ಯಕ್ಕೆ ಅತ್ಯಗತ್ಯ
ಶಿಕ್ಷಕರ ಸ್ವಾಸ್ಥ್ಯ ಸಮಾಜದ ಸ್ವಾಸ್ಥ್ಯಕ್ಕೆ ಅತ್ಯಗತ್ಯ. ಸಮಾಜದಲ್ಲಿ ಸ್ವಾಸ್ಥ್ಯವನ್ನು, ನೈತಿಕತೆಯ ಸ್ವಾಸ್ಥ್ಯವನ್ನು ಶಿಕ್ಷಕರು ಮಾತ್ರ ಕಾಪಾಡಲು ಸಾಧ್ಯ. ಪೋಷಕರು ಮಕ್ಕಳನ್ನು ಶಿಕ್ಷಕರ ಕೈಗೆ ಒಪ್ಪಿಸಿರುತ್ತಾರೆ. ಶಿಕ್ಷಕರು ಅವರನ್ನು ಹೇಗೆ ರೂಪಿಸುತ್ತಾರೊ ಹಾಗೇ ಮಕ್ಕಳು ರೂಪುಗೊಳ್ಳುತ್ತಾರೆ. ಮಕ್ಕಳಲ್ಲಿ ಶಕ್ತಿ ಇರುತ್ತದೆ, ಅದನ್ನು ಸರಿಯಾದ ದಿಕ್ಕಿನಲ್ಲಿ ಪ್ರಸರಿಸಬೇಕು. ಮಕ್ಕಳೊಂದಿಗೆ ಸಂಪರ್ಕ ಸಾಧಿಸುವ, ಸ್ಪೂರ್ತಿ ತುಂಬುವ, ಉದಾಹರಣೆಯಾಗುವ ಶಿಕ್ಷಕರ ಬಗ್ಗೆ ಗೌರವವಿದೆ. ಇಂದಿನ ಶಿಕ್ಷಕರಿಗೆ ಸ್ಪರ್ಧೆ ಇರುವುದು ಗೂಗಲ್ ಜೊತೆಗೆ. ತಂತ್ರಜ್ಞಾನ ಜೀವನವನ್ನು ಮುನ್ನಡೆಸುವಂಥ ವಾತಾವರಣವಿದೆ. ಮಕ್ಕಳ ಭವಿಷ್ಯವೇನು ಎಂಬುದೇ ಈಗಿನ ಸವಾಲಾಗಿದೆ ಎಂದು ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.

ಆಲೋಚನೆಗಳಲ್ಲಿ ಸ್ಪಷ್ಟತೆ ಇರಬೇಕು.
ಸ್ವಾಮಿ ವಿವೇಕಾನಂದರ ಆಲೋಚನೆಗಳಲ್ಲಿ ಸಂಶಯಕ್ಕೆ ಆಸ್ಪದವಿರಲಿಲ್ಲ. ಹಾಗೆಯೇ ಶಿಕ್ಷಕರೂ ಇರಬೇಕು. ಆಲೋಚನೆಗಳಲ್ಲಿ ಸ್ಪಷ್ಟತೆ ಇರಬೇಕು. ಆಗ ವಿದ್ಯಾರ್ಥಿಗಳು ನಂಬುತ್ತಾರೆ. ಬದುಕಿಗೆ ಹತ್ತಿರವಿರಬೇಕು. ತಾರ್ತಿಕವಾಗಿ ಆಲೋಚನೆ ಮಾಡುವುದನ್ನು ಕಲಿಸಬೇಕು. ಆಗ ವಿದ್ಯಾರ್ಥಿಗಳು ಶಿಕ್ಷಕರನ್ನೂ ಸದಾ ನೆನಪಿನಲ್ಲಿಡುತ್ತಾರೆ ಎಂದು ಕೆಲವು ಸಲಹೆ ನೀಡಿದರು.
-
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್ಸೈಟ್ -
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ












Click it and Unblock the Notifications