ಕರ್ನಾಟಕ ರಾಜಕೀಯದಲ್ಲಿ ರೋಚಕ ತಿರುವು: ಬಿಜೆಪಿ ನಾಯಕರೊಂದಿಗೆ ಸಾರಾ ಮಹೇಶ್!
Recommended Video
ಕರ್ನಾಟಕ ರಾಜಕೀಯಕ್ಕೆ ಹೊಸ ತಿರುವು | ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ | H D Kumaraswamy
ಬೆಂಗಳೂರು, ಜುಲೈ 11: ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿರುವ ಕರ್ನಾಟಕ ರಾಜಕೀಯ ಇದೀಗ ಮತ್ತೊಂದು ಹೊಸ ಟ್ವಿಸ್ಟ್ ಪಡೆದುಕೊಂಡಿದೆ.
ಜೆಡಿಎಸ್ ನಾಯಕ, ಪ್ರವಾಸೋದ್ಯಮ ಸಚಿವ ಸಾ ರಾ ಮಹೇಶ್ ಅವರು ಬಿಜೆಪಿ ನಾಯಕರಾದ ಕೆ ಎಸ್ ಈಶ್ವರಪ್ಪ ಮತ್ತು ಮುರಳೀಧರ ರಾವ್ ಅವರನ್ನು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ್ದು ಭಾರೀ ಕುತೂಹಲ ಕೆರಳಿಸಿದೆ.

ಮೂವರು ನಾಯಕರೂ ನಗರದ ಕೆಕೆ ಗೆಸ್ಟ್ ಹೌಸ್ನಲ್ಲಿ ಸುಮಾರು ಅರ್ಧ ಗಂಟೆಯ ಕಾಲ ಮಾತುಕತೆ ನಡೆಸಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ ಆರ್ ನಗರ ಶಾಸಕ ಸಾರಾ ಮಹೇಶ್, ಇದೊಂದು ಆಕಸ್ಮಿಕ ಭೇಟಿ ಅಷ್ಟೆ. ಕೆಕೆ ಗೆಸ್ಟ್ ಹೌಸ್ ನಮ್ಮ ಇಲಾಖೆಯ ಅಡಿಯಲ್ಲಿ ಬರುತ್ತದೆ. ಆದ್ದರಿಂದ ನಾನು ಇಲ್ಲಿಗೆ ಬಂದಿದ್ದೆ. ಅದೇ ಸಂದರ್ಭದಲ್ಲಿ ಅವರೂ ಬಂದಿದ್ದರು. ಸೌಜನ್ಯಕ್ಕಾಗಿ ಮಾತನಾಡಿದೆವು ಅಷ್ಟೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.












Click it and Unblock the Notifications