Get Updates
Get notified of breaking news, exclusive insights, and must-see stories!

Vande Bharat Express: ಬೆಂಗಳೂರು - ಮಂಗಳೂರು ನಗರದ ನಡುವೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು: ವಿ. ಸೋಮಣ್ಣ

ಬೆಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಚಾರದಲ್ಲಿ ಬೆಂಗಳೂರಿಗೆ ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಬೆಂಗಳೂರು ಹಾಗೂ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ವಿಸ್ತರಣೆ ಮಾಡಬೇಕು ಎನ್ನುವ ಮನವಿ ಇದೆ. ಇದೀಗ ಬೆಂಗಳೂರಿಗೆ ಹಾಗೂ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಕೊಡುವ ಬಗ್ಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಗುಡ್‌ನ್ಯೂಸ್ ಕೊಟ್ಟಿದೆ.

ಬೆಂಗಳೂರಿನಿಂದ ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಸಂಪರ್ಕ ಹೆಚ್ಚಿಸಬೇಕು ಎನ್ನುವ ಬೇಡಿಕೆ ಜನರಿಂದ ಇದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ಗಳನ್ನು ನೀಡುತ್ತಿದೆ. ಇದೀಗ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಅಪ್ಡೇಟ್ಸ್‌ ಕೊಡಲಾಗಿದೆ.

New Vande Bharat Express train between Bengaluru and Mangalore city V Somanna Good News

ಬೆಂಗಳೂರು - ಮಂಗಳೂರು ವಂದೇ ಭಾರತ್ ಗುಡ್‌ನ್ಯೂಸ್

ಬೆಂಗಳೂರು ಹಾಗೂ ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಂಬಂಧಿಸಿದಂತೆ ಸಚಿವ ವಿ. ಸೋಮಣ್ಣ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಉದ್ಯಮಿ ಮೋಹನ್‌ದಾಸ್ ಪೈ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಮಾಡಿರುವ ಟ್ವೀಟ್‌ಗೆ ವಿ ಸೋಮಣ್ಣ ಅವರು ರಿಪ್ಲೈ ಕೊಟ್ಟಿದ್ದಾರೆ. ಉದ್ಯಮಿ ಮೋಹನ್‌ದಾಸ್ ಪೈ ಅವರು ಹೇಳಿದ್ದೇನು, ವಿ. ಸೋಮಣ್ಣ ಪ್ರತಿಕ್ರಿಯೆ ಏನು ಎನ್ನುವುದನ್ನು ನೋಡೋಣ.

ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ವಿ. ಸೋಮಣ್ಣ ಅವರು, ರೈಲ್ವೆ ಮೂಲಸೌಕರ್ಯವನ್ನು ವೃದ್ಧಿಗೊಳಿಸುವ ಮತ್ತು ಪ್ರಯಾಣಿಕರ ಅನುಕೂಲತೆಯನ್ನು ಹೆಚ್ಚಿಸುವ ಭಾಗವಾಗಿ, ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಘಾಟ್ ವಿಭಾಗದ ರೈಲ್ವೆ ಮಾರ್ಗವನ್ನು ಯಶಸ್ವಿಯಾಗಿ ವಿದ್ಯುದೀಕರಣಗೊಳಿಸಲಾಗಿದೆ.

ಅತ್ಯಂತ ಸವಾಲಿನ ಭೂಪ್ರದೇಶದಲ್ಲಿ ಸಾಧಿಸಿದ ಈ ಮೈಲಿಗಲ್ಲು ಆಧುನಿಕ ಮತ್ತು ಶುದ್ಧ-ಶಕ್ತಿ ಮೂಲಸೌಕರ್ಯ ನಿರ್ಮಾಣದೆಡೆಗಿನ ಭಾರತೀಯ ರೈಲ್ವೆಯ ದೃಢ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಇದೀಗ, ಈ ರೈಲ್ವೆ ಮಾರ್ಗವು ವಿದ್ಯುತ್‌ ಚಾಲನೆಗೆ ಸಂಪೂರ್ಣವಾಗಿ ಸಿದ್ದಗೊಂಡಿದ್ದು, ಪರಿಣಾಮಕಾರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸುತ್ತದೆ ಮತ್ತು ಈ ಭಾಗದಲ್ಲಿ ಮತ್ತಷ್ಟು ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉದ್ಯಮಿ ಮೋಹನ್‌ದಾಸ್ ಪೈ ಅವರು, ಧನ್ಯವಾದಗಳು ಈಗ ಬೆಂಗಳೂರಿನಿಂದ ಮಂಗಳೂರಿಗೆ 3ರಿಂದ 4 ಗಂಟೆಗಳಲ್ಲಿ ಹೋಗುವುದಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪರಿಚಯಿಸಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರು, ಧನ್ಯವಾದಗಳು. ಇದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರ ವಿಕಸಿತ ಭಾರತದ ಕನಸಿನ ಯಶಸ್ಸು ಹಾಗೂ ರೈಲ್ವೇ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಕಾರ್ಯಕ್ಷಮತೆಗೆ ಸಾಕ್ಷಿ. ಹಾಗೆಯೇ, ಮಂಗಳೂರು ಭಾಗದ ಜನರ ಬಹುಬೇಡಿಕೆಯಾಗಿರುವ ವಂದೇ ಭಾರತ್ ರೈಲು ಸಂಚಾರಿಸುವ ಕಾಲವೂ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಇನ್ನು ಕೆಲವೇ ದಿನಗಳಲ್ಲಿ ಬೆಂಗಳೂರು - ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕನಸು ನನಸಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯ ಸಚಿವರಿಂದ ಕೇಂದ್ರಕ್ಕೆ ಪತ್ರ

ಕರಾವಳಿ ಮತ್ತು ಬೆಂಗಳೂರು ನಡುವಿನ ಸಂಪರ್ಕಕ್ಕೆ ಹೊಸ ವೇಗ ನೀಡಲು ವಂದೇ ಭಾರತ್ ರೈಲು ಸೇವೆ ಒದಗಿಸುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವೀನ್ ವೈಷ್ಣವ್‌ ಅವರಿಗೆ ಮಂಗಳೂರು ಜನತೆಯ ಪರವಾಗಿ ಮನವಿ ಮಾಡಿ ಪತ್ರ ಬರೆದಿದ್ದೇನೆ ಎಂದು ಈಚೆಗೆ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದರು.

ಮಂಗಳೂರು ಮತ್ತು ಬೆಂಗಳೂರು ಕರ್ನಾಟಕದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳು. ಮಂಗಳೂರನ್ನು ಬೆಂಗಳೂರಿಗೆ ಪರ್ಯಾಯವಾದ ಅತ್ಯಾಧುನಿಕ ಉದ್ಯೋಗ ಮತ್ತು ಕೈಗಾರಿಕಾ ತಾಣವನ್ನಾಗಿ ರೂಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಆದರೆ, ಈ ಎರಡು ನಗರಗಳ ನಡುವಿನ ವೇಗದ ಸಾರಿಗೆ ಸಂಪರ್ಕದ ಕೊರತೆಯು ಈ ಬೆಳವಣಿಗೆಗೆ ದೊಡ್ಡ ಅಡ್ಡಿಯಾಗಿದೆ ಎಂದಯ ಅವರು ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+