ಡೆಂಗ್ಯೂ ಮಾದರಿಯ ಮತ್ತೊಂದು ಸೋಂಕು ಪತ್ತೆ, ಜನತೆಗೆ ಆತಂಕ
ಬೆಂಗಳೂರು, ಸೆಪ್ಟೆಂಬರ್ 20: ನಗರದಲ್ಲಿ ಡೆಂಗ್ಯೂ ಮಾದರಿಯ ಮತ್ತೊಂದು ಸೋಂಕು ಪತ್ತೆಯಾಗಿದೆ.
ಈ ಪೈಕಿ ಥ್ರಂಬೋಸೈಟೋಪೆನಿಯಾ- ಪ್ಲೇಟ್ ಲೆಟ್ ಸಂಖ್ಯೆ ಕುಸಿತ ಕಾಣುವ ಸ್ಥಿತಿಯೊಂದಿಗೆ ವೈರಾಣು ಜ್ವರ ಇರುವುದು ಹೆಚ್ಚು ವರದಿಯಾಗುತ್ತಿರುವ ಪ್ರಕರಣಗಳಾಗಿವೆ.
ಕಟ್ಟಡ ನಿರ್ಮಾಣಕ್ಕೆ ಹತ್ತಿರವಿರುವ ಪ್ರದೇಶಗಳು ಕೈಗಾರಿಕಾ ಪ್ರದೇಶಗಳ ಬಳಿ ಇರುವವರು ಈ ರೀತಿಯ ವೈರಲ್ ಜ್ವರಕ್ಕೆ ಹೆಚ್ಚು ದುರ್ಬಲರಾಗಿರುತ್ತಾರೆ ಹಾಗೂ ಹರಡುವ ಸಾಮರ್ಥ್ಯ ಹೊಂದಿರುತ್ತವೆ.

ಈ ರೀತಿಯ ಜ್ವರವನ್ನು ಹಲವು ಮಂದಿ ಡೆಂಗ್ಯೂ ಎಂದು ತಪ್ಪಾಗಿ ಭಾವಿಸುವುದುಂಟು ಆದರೆ ಡೆಂಗ್ಯೂಗೆ ಟೆಸ್ಟ್ ಮಾಡಿಸಿದರೆ ನೆಗೆಟಿವ್ ವರದಿ ಬರುತ್ತದೆ.
ಕೊಲಂಬಿಯಾ ಏಷ್ಯಾ, ಹೆಬ್ಬಾಳ (ಮಣಿಪಾಲ್ ಹಾಸ್ಪೆಟಲ್ಸ್) ನ ಸಲಹೆಗಾರರಾಗಿರುವ ಡಾ.ಇರ್ಫಾನ್ ಜಾವೀದ್ ಖಾಜಿ, ತಾವು ಪ್ರತಿ 5 ರೋಗಿಗಳ ಪೈಕಿ ಒಬ್ಬರಲ್ಲಿ ಈ ರೀತಿಯ ಕಡಿಮೆ ಪ್ಲೇಟ್ ಲೆಟ್ ಇರುವ ವೈರಲ್ ಫೀವರ್ ಇರುವ ಪ್ರಕರಣಗಳನ್ನು ನೋಡುತ್ತಿರುವುದಾಗಿ ಹೇಳಿದ್ದಾರೆ.
ಸಾಮಾನ್ಯವಾದ ರೋಗಲಕ್ಷಣಗಳೆಂದರೆ ಮೈಯಾಲ್ಜಿಯಾ, ಜ್ವರ, ತಲೆನೋವು, ಕೆಲವೊಮ್ಮೆ ಮೇಲ್ಭಾಗದ ಶ್ವಾಸೇಂದ್ರಿಯ ಸೋಂಕು ಮತ್ತು GI ರೋಗಲಕ್ಷಣಗಳೊಂದಿಗೆ ಸಂಬಂಧಿಸಿದೆ.
ವೈರಸ್ಗಳೊಂದಿಗೆ ಕಲುಷಿತ ನೀರು ಥ್ರಂಬೋಸೈಟೋಪೆನಿಯಾದೊಂದಿಗೆ ವೈರಲ್ ಜ್ವರಕ್ಕೆ ಕಾರಣವಾಗಬಹುದು, ಮಕ್ಕಳಿಂದ 70 ವರ್ಷದವರವರೆಗೂ ಈ ಜ್ವರ ಕಾಣಿಸಿಕೊಳ್ಳಬಹುದು ಎನ್ನುತ್ತಾರೆ ಡಾ.ಖಾಜಿ
ಜನತೆ ಈ ರೀತಿಯ ಜ್ವರ ಬಂದಲ್ಲಿ ಅದನ್ನು ಕೋವಿಡ್-19 ಎಂದು ಗೊಂದಲಕ್ಕೀಡಲು ಪ್ರಾರಂಭಿಸಿದ್ದಾರೆ ಎನ್ನುತ್ತಾರೆ ಏಸ್ತರ್ ಆರ್ ವಿ ಆಸ್ಪತ್ರೆಯ ಆಂತರಿಕ ವೈದ್ಯ ವಿಭಾಗದ ಡಾ. ಎಸ್ ಎನ್ ಅರವಿಂದ ಹೇಳಿದ್ದಾರೆ.
ಋತು ಬದಲಾವಣೆಯಾಗಿರುವುದು, ವೀಕೆಂಡ್ ಗಳಲ್ಲಿ ಜನತೆ ಸಣ್ಣಪುಟ್ಟ ಪಾರ್ಟಿಗಳಿಗೆ ತೆರಳುವುದು ಈ ವೈರಾಣು ಜ್ವರ ಹರಡುವುದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಅರವಿಂದ ತಿಳಿಸಿದ್ದಾರೆ.
ಸಾಮಾನ್ಯವಾಗಿ ವೈರಲ್ ಜ್ವರಕ್ಕೆ ನೀಡುವ ಚಿಕಿತ್ಸೆಯನ್ನೇ ಈ ವೈರಾಣು ಜ್ವರ ಎದುರಿಸುತ್ತಿರುವವರಿಗೂ ನೀಡಲಾಗುತ್ತದೆ. ಈ ವೈರಾಣು ಜ್ವರದಿಂದ ಶ್ವಾಸಕೋಶ, ಕಿಡ್ನಿ, ಲಿವರ್ ಗೆ ಹಾನಿಯಾಗಿದ್ದರೆ ಮಾತ್ರ ಚಿಕಿತ್ಸೆಯ ವಿಧಾನ ಬದಲಾವಣೆಯಾಗುತ್ತದೆ.
ಹೀಗಾಗುವುದರಿಂದ ಹಲವು ರೋಗಿಗಳು ಗೊಂದಲಕ್ಕೀಡಾಗಿ ಆತಂಕಕ್ಕೊಳಗಾಗುತ್ತಾರೆ ಎನ್ನುತ್ತಾರೆ ವೈದ್ಯರು. ಏಸ್ತರ್ ಸಿಎಂಐ ಆಸ್ಪತ್ರೆಯ ಆಂತರಿಕ ವೈದ್ಯ ವಿಭಾಗದ ಸಲಹೆಗಾರರಾಗಿರುವ ಡಾ. ಬೃಂದ ಈ ಮಾದರಿಯ ಹೊಸ ವೈರಾಣು ಜ್ವರದ ಬಗ್ಗೆ ಮಾತನಾಡಿದ್ದು, "ಕಡಿಮೆ ಪ್ಲೇಟ್ ಲೆಟ್ ಸಂಖ್ಯೆ ಎಂದಾಕ್ಷಣ ಅದು ಡೆಂಗ್ಯು ಆಗಿರಬೇಕೆಂದೇನೂ ಇಲ್ಲ. ಇತರ ವೈರಲ್ ಸೋಂಕಿನಿಂದಲೂ ಪ್ಲೇಟ್ ಲೆಟ್ ಗಳು ಕುಸಿತ ಕಾಣಬಹುದು, ನಿರ್ವಹಣೆಯೂ ಡೆಂಗ್ಯು ಮಾದರಿಯದ್ದೇ ಆಗಿರುತ್ತದೆ ಎಂದು 'ಇಂಡಿಯನ್ ಎಕ್ಸ್ಪ್ರೆಸ್' ಗೆಳಿಸಿದ್ದಾರೆ.
Recommended Video
ಹಿಮೋಗ್ರಾಮ್ (ರಕ್ತ ಎಣಿಕೆ ಪರೀಕ್ಷೆ) ಡೆಂಗ್ಯು ಎನ್ಎಸ್1 ಆಂಟಿಜೆನ್ ಟೆಸ್ಟ್ ಗಳನ್ನು ಮಾಡಿಸಬೇಕಾಗುತ್ತದೆ. ಈ ರೀತಿ ಮಾಡಿಸಿದ ಪರೀಕ್ಷೆಯಲ್ಲಿ ಪಾಸಿಟೀವ್ ವರದಿ ಬಂದರೆ ಅದು ಡೆಂಗ್ಯು ಎನ್ನುವುದು ದೃಢವಾಗುತ್ತದೆ ಎನ್ನುತ್ತಾರೆ ಬೃಂದ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications