New Year 2023: ಹೊಸ ವರ್ಷದಂದು ಹಲವು ನಿರ್ಬಂಧಗಳನ್ನು ಜಾರಿಗೊಳಿಸಿದ ಬೆಂಗಳೂರು ಪೊಲೀಸರು
ಬೆಂಗಳೂರು, ಡಿ. 29: ಹೊಸ ವರ್ಷಾಚರಣೆಗೆ ಮುಂಚಿತವಾಗಿ, ಬೆಂಗಳೂರು ಪೊಲೀಸರು ಹಲವು ನಿರ್ಬಂಧಗಳನ್ನು ಜಾರಿಗೊಳಿಸಿದ್ದಾರೆ.
ಶಬ್ಧ ಮಾಲಿನ್ಯ, ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಸೇರಿದಂತೆ ಕಮಿಷನರ್ ಪ್ರತಾಪ್ ರೆಡ್ಡಿ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ನಗರದಲ್ಲಿ ಕಾರ್ಯಕ್ರಮ ಸಂಘಟಕರಿಗೆ ಡೆಸಿಬಲ್ ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಶಬ್ಧ ಮಾಲಿನ್ಯ ಮಾಡಬಾರದು ಎಂದು ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ನಗರದಲ್ಲಿ ಡೆಸಿಬಲ್ ನಿಯಮಗಳನ್ನು ಅನುಸರಿಸಬೇಕು. ಸುತ್ತಮುತ್ತಲಿನ ಜನರಿಗೆ ಅನಾನುಕೂಲತೆಯನ್ನು ಉಂಟುಮಾಡಬಾರದು ಎಂದು ಸೂಚಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಟ್ವೀಟ್ ಮಾಡಿ, "ಹೊಸ ವರ್ಷದ ಆಚರಣೆಯೇ...? ಧ್ವನಿವರ್ಧಕಗಳಿಗೆ ಶಬ್ದ ಮಾಲೀನ್ಯ ನಿಯಮಗಳ ಅಡಿಯಲ್ಲಿ ಕಡ್ಡಾಯ ಪರವಾನಗಿಯನ್ನು ಪಡೆದುಕೊಳ್ಳಿ. ಡೆಸಿಬಲ್ ಮಿತಿಗಳು ಮತ್ತು ಸಮಯಗಳನ್ನು ಅನುಸರಿಸಿ" ಎಂದಿದ್ದಾರೆ.
ಬೆಂಗಳೂರು ಪೊಲೀಸರ ಪ್ರಕಾರ, ಕೈಗಾರಿಕಾ ಪ್ರದೇಶಗಳಲ್ಲಿ, 70 ರಿಂದ 75 ಡೆಸಿಬಲ್ಗಳ ಧ್ವನಿಯನ್ನು ಅನುಮತಿಸಲಾಗಿದೆ. ಆದರೆ ವಸತಿ ಪ್ರದೇಶಗಳಲ್ಲಿ, ಧ್ವನಿ ಮಿತಿಯನ್ನು 45 ರಿಂದ 55 ಡೆಸಿಬಲ್ಗಳಿಗೆ ನಿಗದಿಪಡಿಸಲಾಗಿದೆ. ಆದರೂ, ವಾಣಿಜ್ಯ ಪ್ರದೇಶಗಳಲ್ಲಿ, 55 ರಿಂದ 65 ಡೆಸಿಬಲ್ಗಳ ಧ್ವನಿ ಮಿತಿಯನ್ನು ಅನುಮತಿಸಲಾಗಿದೆ.

ಹೊಸ ವರ್ಷದ ರಾತ್ರಿ ಮಾದಕ ವಸ್ತುಗಳ ಸೇವನೆಯಿಂದ ದೂರವಿರಬೇಕು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. "ತಪ್ಪು ಸ್ಥಳಗಳಲ್ಲಿ ಅಥವಾ ತಪ್ಪು ಮಾಡುವ ಜನರ ನಡುವೆ ಇರಬೇಡಿ. ಡ್ರಗ್ಸ್ ಎಂಬುದು ಗಂಭೀರ ಅಪರಾಧವಾಗಿದೆ. ಗ್ರಾಹಕರು ಮತ್ತು ಪೆಡ್ಲರ್ಗಳು ಇದಕ್ಕೆ ಜವಾಬ್ದಾರರು. ಸಂಘಟಕರು ಕೂಡ ದಂಡಕ್ಕೆ ಒಳಗಾಗುತ್ತಾರೆ ಎಂದು ಎಚ್ಚರಿಸಿದ್ದಾರೆ.
ಕಾನೂನು-ಸುವ್ಯವಸ್ಥೆ ಸಮಸ್ಯೆಗಳು ಉಂಟಾಗದಂತೆ ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಯನ್ನು ಸೂಕ್ಷ್ಮವಾಗಿ ಗಮನಿಸುವುದಾಗಿ ಹೇಳಿದ್ದು, ಹೆಚ್ಚುವರಿ ಸಿಸಿಟಿವಿ ಮತ್ತು ಡ್ರೋನ್ ಕ್ಯಾಮೆರಾಗಳೊಂದಿಗೆ ಇಡೀ ನಗರವನ್ನು ಕಣ್ಗಾವಲು ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ










Click it and Unblock the Notifications