New Year 2025: ಕೆಲವೇ ಕ್ಷಣಗಳಲ್ಲಿ ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ಶುರು: ಪೊಲೀಸ್ ಮಾರ್ಗಸೂಚಿಗಳು
ಹುಬ್ಬಳ್ಳಿ, ಡಿಸೆಂಬರ್ 31: ವಾಣಿಜ್ಯ ನಗರಿ ಹುಬ್ಬಳ್ಳಿಯ ಜನ ನೂತನ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲು ಸಜ್ಜಾಗಿದ್ದಾರೆ. ಸಂಭ್ರಮಾಚರಣೆಗೆ ಜನರು ಪೂರ್ವಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನೊಂದು ಕಡೆ ಶಾಂತಿಯುತ ಆಚರಣೆಗೆ ಪೊಲೀಸ್ ಇಲಾಖೆ ಮನರಂಜನೆ ಕಾರ್ಯಕ್ರಮಗಳನ್ನು ನಡೆಸುವ ಹೋಟೆಲ್ಗಳ ಮೇಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹದ್ದಿನ ಕಣ್ಣಿಟ್ಟಿದೆ. ಯಾವುದೇ ಅಹಿಕರ ಘಟನೆ ನಡೆದಂತೆ ಕಟ್ಟೆಚ್ಚರ ವಹಿಸಿದೆ.
ನಗರದ ಪ್ರತಿಷ್ಠಿತ ಹೋಟೆಲ್ಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರ ಮಗಳನ್ನು ಹಮ್ಮಿಕೊಂಡು ಗ್ರಾಹಕರನ್ನು ಸೆಳೆಯಲಿವೆ. ಕೆಲವೆಡೆ ಡಿಜೆ, ಮ್ಯೂಸಿಕ್ ಪಾರ್ಟಿಗಳನ್ನು ಆಯೋಜಿಸಲಾಗಿದೆ. ಇಲ್ಲೆಲ್ಲೆ ಅಗತ್ಯ ಸೂಚನೆ ನೀಡಲಾಗಿದೆ. ಅಹಿಕರ ಘಟನೆ ನಡೆಯದಂತೆ, ಎಲ್ಲೆಡೆ ಸಿಸಿಟಿವಿ ಅಳವಡಿಸುವಂತೆ ಪೊಲೀಸ್ ಇಲಾಖೆ ನಿರ್ದೇಶಿಸಿದೆ.

ಹುಬ್ಬಳ್ಳಿಯಲ್ಲಿ ಹೋಟೆಲ್ಗಳು ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿವೆ. ಡಿಜೆ ಸೇರಿದಂತೆ ಅನೇಕ ಮನರಂಜನೆ ಕಾರ್ಯಕ್ರಮ ನಡೆಸಲು, ಭಾಗಿಯಾಗಲು ಯಾವುದೇ ಆಕ್ಷೇಪವಿಲ್ಲ. ವರ್ಷಾಚರಣೆ ನೆಪದಲ್ಲಿ ಕಾನೂನು ಉಲ್ಲಂಘಿಸಿದರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
ಹೊಸ ವಷಾಚರಣೆ ಪ್ರಯುಕ್ತ ಕಾರ್ಯಕ್ರಮ ಆಯೋಜಿಸುವ ಹೋಟೆಲ್ಗಳು ಆಂತರಿಕ ಭದ್ರತೆ ಕಾಪಾಡಿಕೊಳ್ಳಬೇಕು. ಅದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಂಡಿರಬೇಕು. ಜನ ಸೇರುವ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು. ಗಲಾಟೆಗಳು ನಡೆದರೆ ಹೋಟೆಲ್ ಮಾಲೀಕರನ್ನೇ ಜವಾಬ್ದಾರರನ್ನಾಗಿ ಮಾಡುತ್ತೇವೆ.
ಇಂದು (ಡಿ.31) ರಾತ್ರಿ 10ರವರೆಗೆ ಮಾತ್ರ ಡಿಜೆ ಬಳಕೆ ಅವಕಾಶ. ಗೊಸ ವರ್ಷದ ಗುಂಗಿನಲ್ಲಿ ಕೋಮು ಭಾವನೆಗೆ ಪ್ರಚೋದನೆ ನೀಡುವುದು, ಸೋಷಿಯಲ್ ಮೀಡಿಯಾಗಳಲ್ಲಿ ಆಕ್ಷೇಪಾರ್ಹ ಬರಹ, ಫೋಟೋ ಪೋಸ್ಟ್ ಮಾಡುವವರ ಮೇಲೂ ನಿಗಾ ಇಡಲಾಗಿದೆ
ಜನರು ಸೇರುವ ಪ್ರಮುಖ ಸ್ಥಳಗಳಲ್ಲಿ, ವೃತ್ತಗಳಲ್ಲಿ, ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಗತ್ಯ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದರು.
ಮತ್ತಿನಲ್ಲಿ ವಾಹನ ಚಲಿಸಿದರೆ ಕ್ರಮ
ಹೊಸ ವರ್ಷಾಚರಣೆ ವೇಳೆ ಪಾನಮತ್ತರಾಗಿ ಬೀದಿಗಿಳಿದರೆ ಕ್ರಮ ಎದುರಿಸಬೇಕಾಗುತ್ತದೆ. ಅದರಲ್ಲೂ ಕುಡಿದು ವಾಹನ ಚಲಾಯಿಸುವವರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ವಿವಿಧೆಡೆಯಿಂದ ಪಾರ್ಟಿ ಮುಗಿಸಿ ಮನೆಗೆ ತೆರಳುವವರ ಬಳಿಕ ಆಟೋ ಚಾಲಕರು ದುಪ್ಪಟ್ಟು ಹಣ ವಸೂಲಿ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications