ಹೊಸ ವರ್ಷ 2026: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ಭಾಗದ ಅಧಿಕಾರಿ, ಸಿಬ್ಬಂದಿಗೆ ರಜೆ ಇಲ್ಲ
ಬೆಂಗಳೂರು: ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದೆ. ಬೆಂಗಳೂರು ಪೊಲೀಸರು ಕಳೆದ ವರ್ಷ ಆಗಿದ್ದ ಕೆಲವೊಂದು ನ್ಯೂನ್ಯತೆ ಅಥವಾ ಸಮಸ್ಯೆ ಆಗಿದ್ದ ಪ್ರದೇಶಗಳಲ್ಲಿ ಈ ವರ್ಷ ಇನ್ನಷ್ಟು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದಾರೆ. ಈ ಬಾರಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಕೈ ಜೋಡಿಸಿದ್ದಾರೆ. ಇದರಿಂದ ಪ್ರಮುಖ ಭಾಗಗಳಲ್ಲಿ ಜಿಬಿಎಗೆ ಸಿಬ್ಬಂದಿಗೆ ಹೊಸ ವರ್ಷದಂದು ರಜೆ ಇರುವುದಿಲ್ಲ. ಅದರ ವಿವರ ಇಲ್ಲಿದೆ.
ಬೆಂಗಳೂರಿನ ಎಂ.ಜಿ ರಸ್ತೆ, ಇಂದಿರಾ ನಗರ ಹಾಗೂ ಕೋರಮಂಗಲ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇಂದು ರಾತ್ರಿ (ಡಿಸೆಂಬರ್ 31) ಭರ್ಜರಿ ಸಂಭ್ರಮಾಚರಣೆ ನಡೆಯಲಿದೆ. ಹೀಗಾಗಿ, ಬೆಂಗಳೂರು ಪೊಲೀಸರೊಂದಿಗೆ ಈ ಬಾರಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವೂ ಎಂದಿನಂತೆ ಕೈಜೋಡಿಸಿದೆ. ಈ ಬಾರಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಹಾಗೂ ಆ್ಯಂಬುಲೆನ್ಸ್ ಸೇವೆ ಸೇರಿದಂತೆ ಹಲವು ಸೇವೆಗಳನ್ನು ಕಲ್ಪಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದಲೂ ಸಹಕಾರ
ಬೆಂಗಳೂರಿನ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಇಂದಿರಾನಗರ ಸೇರಿದಂತೆ ಅತೀ ಮುಖ್ಯ ಪುದೇಶದ ರಸ್ತೆಗಳಲ್ಲಿ 2026ನೇ ಸಾಲಿನ ಹೊಸ ವರ್ಷದ ಆಚರಣೆಯ ಅಂಗವಾಗಿ ಮುನ್ನೇಚ್ಚರಿಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ತಿಳಿಸಿದೆ. ಶಾಂತಿನಗರ, ಸಿ. ವಿ. ರಾಮನ್ನಗರ ವಿಭಾಗದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ ಸೇರಿದಂತೆ ಅತೀ ಮುಖ್ಯ ಪ್ರದೇಶದ ರಸ್ತೆಗಳಲ್ಲಿ 2026ನೇ ಸಾಲಿನ ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಪಬ್, ಕ್ಲಬ್, ಮನೋರಂಜನಾ ಸ್ಥಳಗಳಲ್ಲಿ ಅತೀ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸಾಧ್ಯತೆ ಇರುವುದರಿಂದ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ, ಪೊಲೀಸ್ ಇಲಾಖೆಯವರು ಸೂಚಿಸಿರುವ ಸ್ಥಳಗಳಲ್ಲಿ ಅವಶ್ಯಕ ಬ್ಯಾರೀಕೆಡ್ ಮತ್ತು ಹೆಚ್ಚಿನ ಸಂಖ್ಯೆಗಳಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಜಿಬಿಎ ಸಿಬ್ಬಂದಿಗೆ ರಜೆ ಇಲ್ಲ
ಇನ್ನು ಈ ಸಂದರ್ಭದಲ್ಲಿ ಯಾವುದೇ ಲೋಪ - ದೋಷ ಆಗದಂತೆ, ಸುರಕ್ಷತೆ ದೃಷ್ಟಿಯಿಂದ ಪೊಲೀಸ್ ಅಧಿಕಾರಿಗಳು ಕೋರುವ ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸುವಂತೆ ಸೂಚಿಸಲಾಗಿದೆ. ಡಿಸೆಂಬರ್ 31ರ ರಾತ್ರಿ ಸಹಾಯಕ ಕಾರ್ಯಪಾಲಕ , ಸಹಾಯಕ ಹಾಗೂ ಕಿರಿಯ ಎಂಜಿನಿಯರರು ಖುದ್ದು ಹಾಜರಿರಲು ಹಾಗೂ ಈ ದಿನ ನಿಮ್ಮ ಅಧೀನದ ಸಿಬ್ಬಂದಿ ರಜೆ ನೀಡದಿರಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಚಾಲಕರು ಮತ್ತು ಆ್ಯಂಬುಲೆನ್ಸ್ ಸೇವೆ
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಪತ್ರದ ಮೇರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಆ್ಯಂಬುಲೆನ್ಸ್ ಸೇವೆ ನೀಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ 31-12-2025ರ ಸಂಜೆಯಿಂದ 01-01-2026ರ ಮುಂಜಾನೆಯ ವರೆಗೆ ನೂತನ ವರ್ಷಾರಂಭ ಆಚರಣೆ ಪ್ರಯುಕ್ತ ಹೆಚ್ಚಿನ ಸಾರ್ವಜನಿಕರು ಆಗಮಿಸುವ ಸಂಭವವಿರುವುದರಿಂದ ತುರ್ತು ವೈದ್ಯಕೀಯ ಚಿಕಿತ್ಸೆಯ ಮುಂಜಾಗ್ರತಾ ಕ್ರಮವಾಗಿ ಚಾಲಕರು ಮತ್ತು ಆ್ಯಂಬುಲೆನ್ಸ್ ಗಳನ್ನು ನಿಯೋಜಿಸಿ ಆದೇಶಿಸಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications