New Year Celebration: 4 ಪ್ರತ್ಯೇಕ ಅಪಘಾತದಲ್ಲಿ 4 ಯುವಕರು ಸಾವು
ಬೆಂಗಳೂರು, ಜನವರಿ 03: ಹೊಸ ವರ್ಷಾಚರಣೆಗೆಂದು ತೆರಳಿದ್ದವರ ಪೈಕಿ ನಾಲ್ಕು ಮಂದಿ ನಾಲ್ಕು ಪ್ರತ್ಯೇಕ ಅಪಘಾತಗಳಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿ ಬೆಂಗಳೂರು ಹೊರವಲಯದಲ್ಲಿ ಸ್ನೇಹಿತರೊಂದಿಗೆ ತೆರಳಿದ್ದರು. ಈ ವೇಳೆ ಅಪಘಾತದಲ್ಲಿ ಬಿಟೆಕ್ ವಿದ್ಯಾರ್ಥಿ ಸೇರಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಮೊದಲ ಅಪಘಾತದಲ್ಲಿ, ಮೈಸೂರು ರಸ್ತೆಯ ಕುಂಬಳಗೋಡು ಬಳಿ ಮೀಡಿಯನ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 26 ವರ್ಷದ ಯುವಕ ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯಗಳಾಗಿವೆ. ಇವರೆಲ್ಲ ಹೊಸ ವರ್ಷಾಚರಣೆಗೆಂದು ರಾಮನಗರದ ಕಡೆಗೆ ಜಾಲಿರೈಡ್ ಹೊರಟಿದ್ದರು ಎನ್ನಲಾಗಿದೆ.

ಮೃತರನ್ನು ಖಾಸಗಿ ಕಾರ್ಖಾನೆಯ ನೌಕರ ಪ್ರಸಾದ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಮಂಜುನಾಥ್, ಶಶಿಧರ್, ನವೀನ್ ಮತ್ತು ಚೇತನ್ ಕುಮಾರ್ ಪಶ್ಚಿಮ ಬೆಂಗಳೂರು ಸುಂಕದಕಟ್ಟೆ ನಿವಾಸಿಗಳು. ಈ ಅವಘಡವು ಮಧ್ಯಾಹ್ನ 12.30 ರ ಸುಮಾರಿಗೆ ಸಂಭವಿಸಿದೆ. ನವೀನ್ ವಾಹನದ ನಿಯಂತ್ರಣ ತಪ್ಪಿ ಮೀಡಿಯನ್ ಗೆ ಡಿಕ್ಕಿ ಹೊಡೆದಿದೆ. ಕಾರು ಗಾಳಿಯಲ್ಲಿ ಪಲ್ಟಿ ಹೊಡೆದು ರಸ್ತೆಗೆ ಬಿದ್ದಿಎ ಎಂದು ಪೊಲಿಸರು ತಿಳಿಸಿದ್ದಾರೆ.
21 ವರ್ಷದ ಛಾಯಾಗ್ರಾಹಕರೊಬ್ಬರು ಎರಡನೇ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆ ಚನ್ನಪಟ್ಟಣದ ಹಳ್ಳಿಯ ಕಡೆಗೆ ಹೋಗುತ್ತಿದ್ದರು. ಸ್ನೇಹಿತನ ಸ್ಕೂಟರ್ ಅವರ ಮೃತರ ಬೈಕ್ಗೆ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಹಿನ್ನೆಲೆ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಮೃತರು ದಕ್ಷಿಣ ಬೆಂಗಳೂರಿನ ಶ್ರೀನಗರದ ನಿವಾಸಿ ರವಿಕಿರಣ್ ಎಂಬುವರು ಬಲಿಯಾಗಿದ್ದಾರೆ. ಸ್ನೇಹಿತ ತ್ರಿವಿಕ್ರಮ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಕ್ಕೂರು ಪೊಲೀಸರು ತಿಳಿಸಿದ್ದಾರೆ.
ಬಿಟೆಕ್ ವಿದ್ಯಾರ್ಥಿ ಸಾವು, ಮತ್ತೊಬ್ಬನಿಗೆ ಗಾಯ
ಮೂರನೇ ಅಪಘಾತದಲ್ಲಿ ಮಾದನಾಯಕನಹಳ್ಳಿ ಬಳಿಯ ತಮ್ಮೇನಹಳ್ಳಿಯಲ್ಲಿ ಭಾನುವಾರ ಬೆಳಗ್ಗೆ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ 18 ವರ್ಷದ ಗಿರೀಶ್ ಮೃತಪಟ್ಟಿದ್ದಾನೆ. ಸ್ನೇಹಿತರೊಂದಿಗೆ ಹೊಸ ವರ್ಷ ಆಚರಿಸಲು ಪೀಣ್ಯಕ್ಕೆ ತೆರಳಿದ್ದರು. ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೈಕ್ ನಿಯಂತ್ರಣ ತಪ್ಪಿದ್ದರಿಂದ ಈ ಅಚಾತುರ್ಯ ನಡೆದಿದೆ.

ಮಾಗಡಿ ತಾಲೂಕಿನ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿ-75ರ ಸಾಹುಕಾರನಪಾಳ್ಯದಲ್ಲಿ ದ್ವಿಚಕ್ರ ವಾಹನ ರಸ್ತೆಗೆ ಬಿದ್ದ ಪರಿಣಾಮ 19 ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತನ ಸಹಪಾಠಿಗೆ ತೀವ್ರ ಗಾಯಗಳಾಗಿವೆ.
ಕುದೂರು ಪೊಲೀಸರು ಮೃತರನ್ನು ಕುಶಾಂತ್ ರೆಡ್ಡಿ ಎಂದು ಗುರುತಿಸಿದ್ದಾರೆ. ಗಾಯಗೊಂಡ ಸಹಪಾಠಿ ಮಧು ಮೋಹನ್ ಸೇರಿ ಇಬ್ಬರು ಬನ್ನೇರುಘಟ್ಟ ನಿವಾಸಿಗಳು. 2 ನೇ ವರ್ಷದ ಬಿಟೆಕ್ ಓದುತ್ತಿದ್ದರು. ಇವರು ಹೊಸ ವರ್ಷಾಚರಣೆಗೆಂದು ಶ್ರವಣಬೆಳಗೊಳಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭಾನುವಾರ ಬೆಳಗ್ಗೆ ಅಪಘಾತ ಸಂಭಿವಿಸಿದೆ ಎಂದು ಪೊಲೀಸರು ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications