ನಿಗಮ-ಮಂಡಳಿ ನೇಮಕ ಮಾಡದೆ ವಿದೇಶ ಪ್ರವಾಸಕ್ಕೆ ತೆರಳಿದ ಸಿಎಂ
Recommended Video
ಬೆಂಗಳೂರು, ಡಿಸೆಂಬರ್ 29: ಬಹುನಿರೀಕ್ಷಿತ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಸಹಿ ಹಾಕದೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸಿಂಗಾಪುರ ಖಾಸಗಿ ಪ್ರವಾಸಕ್ಕೆ ತೆರಳಿದ್ದಾರೆ.
ಕಾಂಗ್ರೆಸ್ ಸಚಿವರ ಖಾತೆ ಪುನರ್ ರಚನೆಗೆ ಶಿಫಾರಸ್ಸು ಪಟ್ಟಿಗೆ ತಮ್ಮ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ರವಾನಿಸಿರುವ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ನಿಗಮ-ಮಂಡಳಿ ನೇಮಕಾತಿ ಪಟ್ಟಿಗೆ ಒಪ್ಪಿಗೆ ನೀಡದೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
2018ರಲ್ಲಿ ಧೂಳೆಬ್ಬಿಸಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭಾಷಣಗಳ ಹೈಲೆಟ್ಸ್
ಇದರಿಂದ ನಿಗಮ ಮಂಡಳಿ ನೇನಕಾತಿ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ಬಿದ್ದಂತಾಗಿದೆ. ದೋಸ್ತಿ ಪಕ್ಷಗಳ ನಡುವೆ ಜಂಗೀ ಕುಸ್ತಿಯ ಬಹಿರಂಗ ಪ್ರದರ್ಶನ ಆರಂಭವಾದ ಲಕ್ಷಣಗಳು ದೊರೆತಿವೆ.
ಏಕಪಕ್ಷೀಯವಾಗಿ ಕಾಂಗ್ರೆಸ್ ನಿಗಮ ಮಂಡಳಿಗಳ ಪಟ್ಟಿಯನ್ನು ತಯಾರಿಸಿರುವ ಬಗ್ಗೆ ಜಡಿಎಸ್ ವರಿಷ್ಠ ದೇವೇಗೌಡರು ಹಾಗೂ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ವಿದೇಶ ಪ್ರವಾಸದಿಂದ ಮರಳಿದ ಬಳಿಕವೇ ನಿಗಮ-ಮಂಡಳಿ ನೇಮಕಕ್ಕೆ ಅನುಮೋದನೆ ದೊರೆಯಲಿದೆ ಎನ್ನಲಾಗುತ್ತಿದೆ.
ನಿಗಮ ಮಂಡಳಿಗಳ 30 ಸ್ಥಾನಗಳ ಪೈಕಿ 20 ಕಾಂಗ್ರೆಸ್ಗೆ 10 ಜೆಡಿಎಸ್ಗೆ ಎಂಬ ಒಪ್ಪಂದ ಮಾಡಿಕೊಳ್ಳಲಾಗಿದೆ. ಸಚಿವ ಸ್ಥಾನಗಳು ಲಭ್ಯವಾಗಿರುವ ಪಕ್ಷಕ್ಕೆ ಅದೇ ವ್ಯಾಪ್ತಿಗೆ ಬರುವ ನಿಗಮ ಮಂಡಳಿಗಳು ಹಂಚಿಕೆಯಾಗಬೇಕಿದೆ.ಹೊಸ ವರ್ಷದವರೆಗೆ ಯಾವುದೇ ನಿರ್ಣಯ ಕೈಗೊಳ್ಳಲು ಹಿಂದೇಟು ಹಾಕಿರುವ ಜೆಡಿಎಸ್ ವರಿಷ್ಠರು, ಕಾಂಗ್ರೆಸ್ನ ನಡೆಯಬಗ್ಗೆ ಕಾದು ನೋಡುತ್ತಿದ್ದಾರೆ.
2018ರಲ್ಲಿ ಕೋಡಿಮಠದ ಶ್ರೀಗಳು ನುಡಿದ ಭವಿಷ್ಯದ ಸತ್ಯಾಸತ್ಯತೆಯ ಅವಲೋಕನ
ರಾಜಕೀಯ ಜಂಜಾಟದಿಂದ ಹೊಸ ವರ್ಷದ ಹೊಸ್ತಿಲಿನಲ್ಲಿ ದೂರವಿದ್ದು, ವಿಶ್ರಾಂತಿ ಪಡೆಯುವದರ ಜೊತೆಗೆ ಹೊಸ ವರ್ಷವನ್ನು ಆಚರಿಸಲು ಕುಮಾರಸ್ವಾಮಿ ಕುಟುಂಬ ಸಮೇತರಾಗಿ ವಿದೇಶಕ್ಕೆ ತೆರಳಿದ್ದಾರೆ.