ಕೋವಿಂದ್ ಅವರಿಗೆ 3 ಬಿಜೆಪಿಯೇತರರಿಂದಲೂ ಬೆಂಬಲ
ಬೆಂಗಳೂರು, ಜುಲೈ 05: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿರುವ ರಾಮನಾಥ ಕೋವಿಂದ್ ಅವರು ಮತ ಯಾಚನೆಗಾಗಿ ಬೆಂಗಳೂರಿಗೆ ಆಗಮಿಸಿರುವ ಸುದ್ದಿ ಓದಿರುತ್ತೀರಿ. ಬಿಜೆಪಿ ಅಭ್ಯರ್ಥಿ ಕೋವಿಂದ್ ಅವರಿಗೆ ಮೂವರು ಬಿಜೆಪಿಯೇತರರಿಂದ ಬೆಂಬಲ ಸಿಕ್ಕಿದೆ.
ಖಾಸಗಿ ಹೋಟೆಲ್ನಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಕೋವಿಂದ್ ಭಾಗವಹಿಸಿ, ಔಪಚಾರಿಕವಾಗಿ ಮತಯಾಚಿಸಿದರು. ಈ ಸಭೆಯಲ್ಲಿ ಬಿಜೆಪಿಯ ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕೋವಿಂದ್, 'ಕರ್ನಾಟಕದ ಜನರು ಶಾಂತಿಪ್ರಿಯರು. ಕರ್ನಾಟಕದ ಬಗ್ಗೆ ನನಗೆ ಎಲ್ಲ ಮಾಹಿತಿ ಇದೆ. ನಾನು ಈ ಹಿಂದೆ ಇಲ್ಲಿನ ಕೆಲವೊಂದು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೆ. ಆಗ ಈ ರಾಜ್ಯದ ಪರಿಸರದ ಬಗ್ಗೆ ತಿಳಿದುಕೊಂಡಿದ್ದೇನೆ' ಎಂದರು.

ಬಿಜೆಪಿಯೇತರ ಶಾಸಕರಿಂದಲೂ ಕೋವಿಂದ್ ಅವರಿಗೆ ಬೆಂಬಲ ಸಿಕ್ಕಿದೆ. ಬಿಎಸ್ ಆರ್ ಕಾಂಗ್ರೆಸ್ ನಿಂದ ಒಬ್ಬರು ಹಾಗೂ ಇಬ್ಬರು ಪಕ್ಷೇತರರಿಂದ ಕೋವಿಂದ್ ಅವರಿಗೆ ಬಲ ಹೆಚ್ಚಿದೆ. ಬಿಎಸ್ ಆರ್ ಕಾಂಗ್ರೆಸ್ ನ ಶ್ರೀರಾಮುಲು, ಪಕ್ಷೇತರರರಾದ ರಾಜೀವ್ ಚಂದ್ರಶೇಖರ್ ಹಾಗೂ ನಾಗೇಶ್ ಎಂಬುವರು ಬೆಂಬಲ ನೀಡಲಿದ್ದಾರೆ.
ರಾಷ್ಟ್ರಪತಿ ಚುನಾವಣೆ ಎಂದರೆ ದಲಿತ ವಿರುದ್ಧ ದಲಿತ ಸ್ಪರ್ಧೆಯಲ್ಲ. ಮೀರಾ ಕುಮಾರ್ ಅವರು ರಾಷ್ಟ್ರಪತಿ ಚುನಾವಣೆಗೆ ಕಳೆದ ಬಾರಿಯೇ ಸ್ಪರ್ಧಿಸಬಹುದಾಗಿತ್ತು.
ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿಯಾಗದಂತೆ ತಡೆಯಲು ಯುಪಿಎ ಯೋಜನೆ ಹಾಕಿಕೊಂಡಿತ್ತು. ಮೀರಾ ಕುಮಾರ್ ಅವರನ್ನು ಕಡೆಗಣಿಸಿದ್ದ ಯುಪಿಎ, ಈಗ ದಲಿತ ಮುಖಂಡ ಕೋವಿಂದ್ ವಿರುದ್ಧ ಸ್ಪರ್ಧೆಗೆ ಮೀರಾ ಅವರನ್ನು ಕರೆ ತಂದಿದೆ' ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು. ಜುಲೈ 17ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications