ಎನ್ಜಿಟಿ ರಚಿಸಿರುವ ತಜ್ಞರ ತಂಡದಿಂದ ಇಂದು ಕೆರೆಗಳ ಪರಿಶೀಲನೆ
ಬೆಂಗಳೂರು, ಏಪ್ರಿಲ್ 14: ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳ ಸಂರಕ್ಷಣೆಗೆ ಸ್ಥಳೀಯ ಪ್ರಾಧಿಕಾರಗಳು ಕೈಗೊಂಡಿರುವ ಕ್ರಮಗಳ ಕುರಿತು ವಾಸ್ತವ ಅಧ್ಯಯನಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ರಚಿಸಿರುವ ಸಮಿತಿ ಶನಿವಾರ ಮತ್ತು ಭಾನುವಾರ ಬೇಟಿ ಕೊಡಲಿವೆ.
ದೆಹಲಿಯಲ್ಲಿ ಹಿರಿಯ ವಕೀಲ ರಾಜ್ ಪಂಜ್ವಾನಿ ನೇತೃತ್ವದಲ್ಲಿ ಓರ್ವ ವಕೀಲ, ಐಐಎಸ್ ಸಿಯ ಓರ್ವ ಪ್ರಾಧ್ಯಾಪಕ, ಬಿಬಿಎಂಪಿ ಆಯುಕ್ತ, ಸಿಪಿಸಿಬಿಯ ಹಿರಿಯ ವಿಜ್ಞಾನಿ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಗಳನ್ನು ಒಳಗೊಂಡಿರುವ ಎನ್ ಜಿಟಿ ತಂಡವು ಕೆರೆಗಳ ಪರಿಶೀಲನೆ ನಡೆಸಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಬೆಳ್ಳಂದೂರು ಕೆರೆಯಂಗಳದಲ್ಲಿ ಬೆಂಕಿ ಬಿದ್ದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಷ್ಟ್ರೀಯ ಹಸಿರುವ ನ್ಯಾಯಾಧೀಕರಣ ಸುಮೋಟೊ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು.

ಕೆರೆ ವಿಚಾರದಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿಗಾಗಿ ಛೀಮಾರಿ ಹಾಕಿತ್ತು. ಇದಲ್ಲದೆ ಕೆರೆಯ ಮೇಲುಸ್ತುವಾರಿಯನ್ನು ಪೀಠವೇ ನೇರವಾಗಿ ನೋಡಿಕೊಳ್ಳುವ ರೀತಿಯಲ್ಲಿ ಅಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಪ್ರತಿ ತಿಂಗಳು ಕ್ರಿಯಾ ಯೋಜನೆ ಸಲ್ಲಿಸುವಂತೆಯೂ ಸೂಚಿಸಿತ್ತು.
ಕಳೆದ 3 ತಿಂಗಳಿನಿಂದ ಕ್ರಿಯಾ ಯೋಜನೆ ಸಲ್ಲಿಸುತ್ತಿರುವ ಸ್ಥಳೀಯ ಪ್ರಾಧಿಕಾರಗಳು ವರದಿಯಲ್ಲಿ ಸುಳ್ಳು ಮಾಹಿತಿಯನ್ನು ನಮೂದಿಸಿದ್ದು, ನ್ಯಾಯಪೀಠ ಗರಂ ಆಗಿದೆ. ಸಲ್ಲಿಕೆಯಾಗಿರುವ ಕ್ರಿಯಾಯೋಜನೆ ಮತ್ತು ವಾಸ್ತವದಲ್ಲಿ ನಡೆದಿರುವ ಕಾಮಗಾರಿಗಳಿಗೂ ವ್ಯತ್ಯಾಸ ಕಂಡುಬಂದಿರುವುದರಿಂದ ನ್ಯಾಯಮೂರ್ತಿ ಜಾವದ್ ರಹೀಮ್ ಅವರಿದ್ದ ನ್ಯಾಯಪೀಠ ತಜ್ಞರ ಸಮಿತಿ ರಚಿಸಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications