ಬೆಳ್ಳಂದೂರು ಕೆರೆ: ಸರ್ಕಾರದ ಮಾಹಿತಿ ಪರಿಶೀಲನೆಗೆ ಎನ್ಜಿಟಿ ಸಮಿತಿ
ಬೆಂಗಳೂರು, ಏಪ್ರಿಲ್ 12: ಬೆಳ್ಳಂದೂರು ಕೆರೆ ವಿಚಾರದಲ್ಲಿ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಛೀಮಾರಿ ಹಾಕಿದೆ.
ಕೆರೆ ಸಂರಕ್ಷಣೆ ಕುರಿತಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಪರಿಶೀಲನೆಗೆ ತಜ್ಞರ ಸಮಿತಿ ರಚಿಸಿದೆ. ಏ.14 ಮತ್ತು 15ರಂದು ಸಮಿತಿ ಸದಸ್ಯರು ಕೆರೆಗಳ ಪರಿಶೀಲನೆ ನಡೆಸಲಿದ್ದಾರೆ. ಬೆಳ್ಳಂದೂರು ಕೆರೆ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾವೇದ್ ರಹೀಮ್ ಅವರಿದ್ದ ನ್ಯಾಯಪೀಠ, ರಾಜ್ಯ ಸರ್ಕಾರ ಸಲ್ಲಿಸಿರುವ ಕ್ರಿಯಾ ಯೋಜನೆಯಲ್ಲಿನ ಅಂಶಗಳು ಸುಳ್ಳಿನಿಂದ ಕೂಡಿವೆ.
ಸರ್ಕಾರ ಸಲ್ಲಿಸಿರುವ ವರದಿಗೂ ವಾಸ್ತವದಲ್ಲಿ ನಡೆದಿರುವ ಕಾರ್ಯಗಳಿಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಕ್ರಿಯಾ ಯೋಜನೆಯಲ್ಲಿನ ಅಂಶಗಳು ಸತ್ಯಕ್ಕೆ ದೂರವಾಗಿದ್ದು, ಸ್ಥಳೀಯ ಪ್ರಾಧಿಕಾರಗಳಿಂದ ಇದನ್ನು ನಿರೀಕ್ಷಿಸರಲಿಲ್ಲ ಎಂದು ಹೇಳಿದೆ. ಹಸಿರು ನ್ಯಾಯಾಧೀಕರಣ ನೇಮಿಸಿರುವ ತಂಡವು ಏ.14 ಮತ್ತು 15ರಂದು ಬೆಳ್ಳಂದೂರು, ಅಗರ, ವರ್ತೂರು ಕೆರೆಗಳ ಪರಿಶೀಲನೆ ನಡೆಸಲಿದೆ.
ಎನ್ಜಿಟಿಗೆ ಮಾಹಿತಿ ನೀಡಿರುವಂತೆ ಸರ್ಕಾರ ಕೆರೆಗಳ ಸಂರಕ್ಷಣೆಗೆ ಕೈಗೊಂಡಿರುವ ಕ್ರಮ, ವಾಸ್ತವದಲ್ಲಿ ನಡೆದಿರುವ ಕಾಮಗಾರಿಗಳು, 75 ಮೀಟರ್ವರೆಗೆ ಬಫರ್ ಜೋನ್, ಎಸ್ಜಿಟಿಗಳ ನಿರ್ವಹಣೆ ವೀಕ್ಷಿಸಿ ವರದಿಯನ್ನು ನ್ಯಾಯಾಧೀಕರಣಕ್ಕೆ ನೀಡಲಿದೆ.
ಎನ್ಜಿಟಿ ನಿರ್ದೇಶನದ ಬಹುತೇಕ ಅಂಶಗಳನ್ನು ಸರ್ಕಾರ ವರದಿ ನೀಡಿದೆ. ಆದರೆ ಕೆರೆ ಪ್ರದೇಶಗಳಲ್ಲಿ ಎಳ್ಳಷ್ಟೂ ಬದಲಾವಣೆಗಳು ಕಂಡುಬರದಿರುವುದರಿಂದ ರಾಜ್ಯ ಸರ್ಕಾರವು ಎನ್ಜಿಟಿ ಕೆಂಗಣ್ಣಿಗೆ ಗುರಿಯಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications