ಫೆ.17ರಂದು ಎನ್ಜಿಟಿ ತಂಡದಿಂದ ಬೆಳ್ಳಂದೂರು, ವರ್ತೂರು ಕೆರೆ ಪರಿಶೀಲನೆ
ಬೆಂಗಳೂರು, ಜನವರಿ 31: ಬೆಳ್ಳಂದೂರು ಹಾಗೂ ವರ್ತೂರು ಕೆರೆಯಲ್ಲಿ ಪದೇ ಪದೇ ನೊರೆ ಹಾಗೂ ಬೆಂಕಿ ಕಾಣಿಸಿಕೊಳ್ಳುತ್ತಿರುವ ಪರಿಣಾಮ ಹಸಿರು ನ್ಯಾಯಾಧೀಕರಣದ ಅಧಿಕಾರಿಗಳು ಫೆ.17ರಂದು ಕೆರೆ ಪರಿಶೀಲನೆ ಮಾಡಲಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನೇಮಿಸಿರುವ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ತಂಡ ಪರಿಶೀಲನೆ ನಡೆಸಲಿದ್ದಾರೆ. ಎರಡನು ನೀರಿನ ಮೂಲಗಳಾದ ಬೆಳ್ಳಂದೂರು, ವರ್ತೂರು ಕೆರೆಯ ಪರಿಶೀಲನೆಗೆ ಡಿಸೆಂಬರ್ 5 ರಂದು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.
ಫೆಬ್ರವರಿ 17ಕ್ಕೆ ಕೆರೆಗಳ ಪರಿಶೀಲನೆ ಮುಗಿದ ಬಳಿಕ ಫೆಬ್ರವರಿ 20ರಂದು ಸಭೆ ನಡೆಸಲಿದ್ದಾರೆ. ಈಗಾಗಲೇ ಬೆಳ್ಳಂದೂರು ಕೆರೆ ಅಭಿವೃದ್ಧಿ ಖಾಸಗಿ ಸಂಸ್ಥೆಗಳು ಮುಂದೆ ಬಂದಿದ್ದು 665 ಕೋಟಿ ರೂ ಅಭಿವೃದ್ಧಿಗೆ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.

ಬೆಳ್ಳಂದೂರು ಕೆರೆಯನ್ನು 2021ರ ಹೊತ್ತಿಗೆ ಪುನರುಜ್ಜೀವನಗೊಳಿಸಲಾಗುವುದು ಅದಕ್ಕೆ 665 ಕೋಟಿ ರೂ ವೆಚ್ಚವಾಗುತ್ತದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
ಕಳೆದ ಎರಡು ವರ್ಷದಿಂದೀಚೆಗೆ ಪದೇ ಪದೇ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ನೊರೆ ವಿಪರೀತವಾಗಿದೆ ಇದಕ್ಕೆ ಪರಿಹಾರ ಕಂಡು ಹಿಡಿಯಬೇಕಿದ್ದರ ಮೊದಲು ನೊರೆಯನ್ನು ಕಡಿಮೆ ಮಾಡಬೇಕಾಗಿದೆ. ನೊರೆ ಕಡಿಮೆ ಮಾಡಬೇಕಾದರೆ ಸುತ್ತಮುತ್ತಲಿನ ಕಾರ್ಖಾನೆಗಳಿಂದ ಬರುವ ಮಲಿನ ನೀರನ್ನು ತಡೆಯಬೇಕಿದೆ. ಇದಕ್ಕೆ ಕೆರೆಯ ಹೂಳು ತೆಗೆದು ಅದರ ಪುನರುಜ್ಜೀವನ ಮಾಡಲೇ ಬೇಕಾಗಿದೆ.
ಕೆರೆಯನ್ನು ಸ್ವಚ್ಛಗೊಳಿಸಲು ಬಿಡಿಎ 2020ರ ಗುರಿ ಇಟ್ಟುಕೊಂಡಿದೆ. ಒಳಚರಂಡಿ ಪೈಪ್ ಗಳ ನಿರ್ಮಾಣವಾದ ಬಳಿಕ ಕಾರ್ಯ ಮುಗಿಯಲಿದೆ. ಈ ಮೊದಲು ಬಿಡಿಎ ಅಧಿಕಾರಿಗಳು ಬೆಳ್ಳಂದೂರು ಕೆರೆಯನ್ನು ಸ್ವಚ್ಛಗೊಳಿಸಲು 800-1000 ಕೋಟಿ ವೆಚ್ಚ ತಗುಲಬಹುದು ಎಂದು ಹೇಳಿದ್ದರು ಆದರೆ ಏಜೆನ್ಸಿ ಹೇಳುವ ಪ್ರಕಾರ 665 ಕೋಟಿ ರೂ ವೆಚ್ಚವಾಗಲಿದೆ. 42.3 ಕೋಟಿ ವೆಚ್ಚದಲ್ಲಿ ಬೇಲಿ ಹಾಕುವುದು, ಸ್ಪ್ರಿಂಕ್ಲರ್ ಅವಡಿಸಲಾಗುತ್ತದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications