ಕೈಕೊಂಡ್ರಹಳ್ಳಿ ಕೆರೆ: ಗೋದ್ರೇಜ್ ಕಂಪನಿಗೆ ನೀಡಿದ್ದ ಅನುಮತಿ ರದ್ದು
ಬೆಂಗಳೂರು, ಫೆಬ್ರವರಿ 13: ಕೈಕೊಂಡ್ರಹಳ್ಳಿ ಕೆರೆಯ ಬಫರ್ ಝೋನ್ನಲ್ಲಿ ನಿರ್ಮಾಣವಾಗುತ್ತಿರುವ ಅಪಾರ್ಟ್ಮೆಂಟ್ ಕಾಮಗಾರಿಗೆ ಪರಿಸರ ಇಲಾಖೆ ನೀಡಿದ್ದ ಅನುಮತಿಯನ್ನು ರದ್ದು ಮಾಡಿ ದೆಹಲಿಯ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶ ಹೊರಡಿಸಿದೆ.
ನಿರ್ಮಾಣ ಹಂತದಲ್ಲಿರುವ ಎರಡು ಗೋದ್ರೇಜ್ ಲೇಕ್ ಗಾರ್ಡನ್ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ನೀಡಲಾಗಿರುವ ಪರಿಸರ ಅನುಮತಿಯನ್ನು ರದ್ದುಮಾಡಲಾಗಿದೆ. ಒಟ್ಟು 655 ಫ್ಲಾಟ್ಗಳ ನಿರ್ಮಾಣ ಮಾಡುವ ಉದ್ದೇಶವನ್ನು ಬಿಲ್ಡರ್ಸ್ ಹೊಂದಿದ್ದರು.
ಗೋದ್ರೇಜ್ ಕಂಪನಿ ವಿರುದ್ಧವಾಗಿ ಸ್ಥಳೀಯರಾದ ಎಚ್ಪಿ ರಾಜಣ್ಣ ಅವರು ಹಸಿರು ನ್ಯಾಯಾಧೀಕರಣಕ್ಕೆ ಅರ್ಜಿ ಸಲ್ಲಿಸಿದ್ದರು.ಸರ್ಜಾಪುರ ರಸ್ತೆಯ ಕೈಕೊಂಡ್ರಹಳ್ಳಿ ರಾಜಕಾಲುವೆಯ ಮೇಲೆ ಎರಡು ಅಪಾರ್ಟ್ಮೆಂಟ್ಗಳನ್ನು ನಿರ್ಮಿಸಲಾಗುತ್ತಿದೆ.

ಕೈಕೊಂಡ್ರಹಳ್ಳಿ ಕೆರೆ ಪಕ್ಕದಲ್ಲಿ , ಒಂದು ಸಮಯದಲ್ಲಿ ಸಂಪದ್ಭರಿತವಾಗಿ ತುಂಬಿ ತುಳುಕುತ್ತಿದ್ದ ಕೆರೆ ಜಾಗದಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಲು ಮುಂದಾಗಿದ್ದರು. ಆ ಪ್ರದೇಶ ಈಗಲೂ ಹಸಿರಿನಿಂದ ತುಂಬಿದ್ದು, ಶುದ್ಧ ಗಾಳಿ ದೊರೆಯುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.
2018ರ ಜನವರಿ 10ರಂದು ಎಸ್ಇಐಎಎ( ಸ್ಟೇಟ್ ಎನ್ವಿರಾನ್ಮೆಂಟ್ ಪೊಲ್ಯುಷನ್ ಕಂಟ್ರೋಲ್ ಬೋರ್ಡ್) ನೀಡಿದ್ದ ಅನುಮತಿಯನ್ನು ರಾಜಣ್ಣ ಚಾಲೆಂಜ್ ಮಾಡಿದ್ದರು.
ಬಫರ್ ಝೋನ್ ನಿಯಮವನ್ನು ಉಲ್ಲಂಘಿಸಿ ಅಪಾರ್ಟ್ಮೆಂಟ್ ನಿರ್ಮಿಸಲು ಹೊರಟಿರುವ ಗೋದ್ರೇಜ್ಗೆ ಯಾವುದೇ ಕಾರಣಕ್ಕೂ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವುದಿಲ್ಲ ಎಂದು ಪೀಠ ತಿಳಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications