ಮಂತ್ರಿ ಟೆಕ್ ಜೋನ್ ಗೆ 5 ಲಕ್ಷ ದಂಡ : ರಾಜೀವ್ ಚಂದ್ರಶೇಖರ್ ಮೆಚ್ಚುಗೆ
ಬೆಂಗಳೂರು, ಮಾರ್ಚ್ 14 : ಅಗರ ಬೆಳ್ಳಂದೂರು ಕೆರೆ ಒತ್ತುವರಿ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ಮಂತ್ರಿ ಟೆಕ್ ಜೋನ್ ಗೆ ಐದು ಲಕ್ಷ ರುಪಾಯಿ ದಂಡ ವಿಧಿಸಿದ್ದು, ಮುಂದಿನ ವಿಚಾರಣೆ ಮಾರ್ಚ್ ಇಪ್ಪತ್ತನೇ ತಾರೀಕಿಗೆ ಮುಂದೂಡಲಾಗಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಫಾರ್ವರ್ಡ್ ಫೌಂಡೇಷನ್ ನ ಪರವಾಗಿ ಸಜ್ಜನ್ ಪೂವಯ್ಯ ಹಾಜರಾಗಿದ್ದರು. ಪರಿಶೀಲನಾ ವರದಿಯನ್ನು ಹಾಜರುಪಡಿಸಿ, ವಿಸ್ತೃತವಾಗಿ ಪೂವಯ್ಯ ವಾದ ಮಂಡಿಸಿದ್ದರು. ರಾಷ್ತ್ರೀಯ ಹಸಿರು ನ್ಯಾಯಮಂಡಳಿ ತೀರ್ಪಿನ ಅನ್ವಯ ಆದೇಶ ಪಾಲಿಸದ ಬಗ್ಗೆ ಪ್ರಶ್ನೆ ಮಾಡಿ, ಮುಂದಿನ ವಿಚಾರಣೆಗೆ ಹಾಜರಾಗುವ ಮುನ್ನ ಐದು ಲಕ್ಷ ರುಪಾಯಿ ದಂಡ ಕಟ್ಟುವಂತೆ ಮಂತ್ರಿ ಟೆಕ್ ಜೋನ್ ನ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸೂಚನೆ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಮಂತ್ರಿ ಟೆಕ್ ಜೋನ್ ನವರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ನಿಯಮಗಳನ್ನು ಅನುಸರಿಸದ ವಿಚಾರದ ಬಗ್ಗೆ ಧ್ವನಿ ಎತ್ತಿದ ಫಾರ್ವರ್ಡ್ ಫೌಂಡೇಷನ್ ಹಾಗೂ ನಮ್ಮ ಬೆಂಗಳೂರು ಫೌಂಡೇಷನ್ ನನ್ನು ಅಭಿನಂದಿಸುತ್ತೇನೆ.

ನಗರ ಹಾಗೂ ರಾಜ್ಯದಲ್ಲಿ ಕಾನೂನು ಜಾರಿ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳದ ಸರಕಾರ ಇರುವಾಗ ಈ ರೀತಿಯ ನಡೆ ಬಹಳ ಮುಖ್ಯ. "ನೀವು ನಿಯಮಗಳನ್ನು ಉಲ್ಲಂಘಿಸಿ, ಬೆಂಗಳೂರು ನಗರವನ್ನೇ ಶೋಷಿಸಲು ಹೊರಟರೆ ಎಚ್ಚರ" ಎಂಬ ಸ್ಪಷ್ಟ ಸಂದೇಶವನ್ನು ಕಳಿಸಲಾಗಿದೆ. ಜತೆಗೆ ಬಿಲ್ಡರ್ ಗಳಿಗೆ ಹಾಗೂ ಕಾಂಟ್ರ್ಯಾಕ್ಟರ್ ಗಳನ್ನು ಉತ್ತರದಾಯಿಗಳಾಗಿ ಮಾಡ್ತೀವಿ. ಅದಕ್ಕೆ ನನ್ನ ಬೆಂಬಲವೂ ಇರುತ್ತದೆ ಎಂಬ ಸಂದೇಶ ಇದು ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications