ಪರಪ್ಪನ ಕೈದಿಗಳಿಗೆ ಥಳಿತ: ಮಾನವ ಹಕ್ಕು ಆಯೋಗದಿಂದ ರಾಜ್ಯಕ್ಕೆ ನೋಟಿಸ್
ಪರಪ್ಪನ ಅಗ್ರಹಾರದ ಜೈಲಿನಲ್ಲಿ ಕೈದಿಗಳಿಗೆ ಹಿಂಸೆ. ಕೇಂದ್ರ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್. ರಾಜ್ಯ ಪೊಲೀಸ್ ಮಹಾ ನಿರ್ದೇಶಕ, ಬಂಧೀಖಾನೆಯ ಇನ್ಸ್ ಪೆಕ್ಟರ್ ಜನರಲ್ ಗೆ ನೋಟಿಸ್ ಜಾರಿ.
ಬೆಂಗಳೂರು, ಜುಲೈ 18: ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರೀಯ ಕಾರಾಗೃಹದಲ್ಲಿನ ಪೊಲೀಸರಿಂದ ಕೈದಿಗಳ ಮೇಲೆ ಇತ್ತೀಚೆಗೆ ಹಿಂಸೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಹಕ್ಕುಗಳ ಆಯೋಗವು (ಎನ್ಎಚ್ಆರ್ ಸಿ) ರಾಜ್ಯದ ಪೊಲೀಸ್ ಮಹಾ ನಿರ್ದೇಶಕ ಹಾಗೂ ಕಾರಾಗೃಹ ಇಲಾಖೆಯ ಇನ್ಸ್ ಪೆಕ್ಟರ್ ಜನರಲ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ನೀಡಿದ ದೂರಿನ ಆಧಾರದ ಮೇರೆಗೆ ಎನ್ಎಚ್ಆರ್ ಸಿ ಈ ನೋಟಿಸ್ ಜಾರಿಗೊಳಿಸಿದೆ.

ಕೇಂದ್ರೀಯ ಕಾರಾಗೃಹದಲ್ಲಿನ ಅಕ್ರಮಗಳನ್ನು ಬಯಲಿಗೆಳೆದ ಪೊಲೀಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಬಲಿಸಿ ಜುಲೈ 15ರಂದು ಅಲ್ಲಿನ ಕೈದಿಗಳು ಪ್ರತಿಭಟನೆ ನಡೆಸಿದ್ದರು.
ಈ ಪ್ರತಿಭಟನೆಯನ್ನು ಹತ್ತಿಕ್ಕಲು ಉಗ್ರ ಕ್ರಮ ಕೈಗೊಂಡ ಪೊಲೀಸರು ಪ್ರತಿಭಟನೆಗೆ ಇಳಿದಿದ್ದ 32 ಕೈದಿಗಳಿಗೆ ಲಾಠಿ ಪೆಟ್ಟು ಕೊಟ್ಟು (ಥರ್ಡ್ ಡಿಗ್ರಿ ಟ್ರೀಟ್ ಮೆಂಟ್) ನೀಡಿ, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ರಾತ್ರೋರಾತ್ರಿ ಮೈಸೂರು, ಬೆಳಗಾವಿ, ಬಳ್ಳಾರಿ ಹಾಗೂ ದಾವಣಗೆರೆ ಜೈಲುಗಳಿಗೆ ರವಾನಿಸಿದ್ದರು.
ಜುಲೈ 15ರ ರಾತ್ರಿ ಪೊಲೀಸರಿಂದ ಥಳಿತಕ್ಕೊಳಗಾಗಿದ್ದ ಕೈದಿಗಳ ಪಾಡು ಹೇಗಿತ್ತೆಂದರೆ, ಬೇರೆ ಜೈಲುಗಳಿಗೆ ರಾತ್ರೋ ರಾತ್ರಿ ರವಾನೆಗೊಂಡ ಕೈದಿಗಳಿಗೆ ಅಲ್ಲಿ ಪೊಲೀಸ್ ವ್ಯಾನಿನಿಂದ ಇಳಿಯಲೂ ಶಕ್ತಿಯಿರಲಿಲ್ಲ. ನಿಧಾನವಾಗಿ ಇಳಿದೇ ಕುಂಟುತ್ತಾ, ಏದುಸಿರು ಬಿಡುತ್ತಾ ಆ ಜೈಲುಗಳಿಗೆ ಹೋಗುತ್ತಿದ್ದ ಅವರ ಪರಿಸ್ಥಿತಿ ಎಂಥವರಿಗೂ ಕರುಣೆ ಉಕ್ಕಿಸುವಂತಿತ್ತು.
ಈ ವಿಚಾರವನ್ನು ದೂರಿನ ಮುಖೇನ ಎನ್ಎಚ್ಆರ್ ಸಿಗೆ ಗಮನಕ್ಕೆ ತಂದಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಜೈಲು ಅಕ್ರಮಗಳ ವಿರುದ್ಧ ಪ್ರತಿಭಟಿಸಿದ್ದಕ್ಕೆ ಕೈದಿಗಳಿಗೆ ಮನಬಂದಂತೆ ಥಳಿಸಿದ್ದಲ್ಲದೆ, ಸಂಬಂಧಿಕರಿಗೆ ಆ ಕೈದಿಗಳ ಭೇಟಿಯಾಗದಂತೆ ಅವರನ್ನು ನಾನಾ ಜೈಲುಗಳಿಗೆ ರವಾನಿಸಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ, ಎನ್ಎಚ್ಆರ್ ಸಿ ನೋಟಿಸ್ ಜಾರಿಗೊಳಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications