ISIS ಜೊತೆ ಲಿಂಕ್, ಬೆಂಗಳೂರಿನ ವೈದ್ಯನನ್ನು ಬಂಧಿಸಿದ NIA
ಬೆಂಗಳೂರು, ಆ. 18: ಬೆಂಗಳೂರಿನ ಎಂಎಸ್ ರಾಮಯ್ಯ ಅಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಅಧಿಕಾರಿಗಳು ಬಂಧಿಸಿದ್ದಾರೆ. ನಾಳೆಯಿಂದ ಕೊವಿಡ್ ಕೇರ್ ಸೆಂಟರ್ ನಲ್ಲಿ ಕಾರ್ಯ ನಿರ್ವಹಿಸಬೇಕಿದ್ದ ಅಬ್ದುಲ್ ರೆಹಮಾನ್ ಗೆ ಕೋಳ ತೊಡಗಿಸಲಾಗಿದೆ.
Recommended Video
ಅಬ್ದುರ್ ರೆಹಮಾನ್ ನಮ್ಮ ಕಾಲೇಜಿನಲ್ಲೇ ವ್ಯಾಸಂಗ ಮಾಡಿದ್ದು ಪಿಜಿ ವಿದ್ಯಾರ್ಥಿಯಾಗಿದ್ದು, ಆಸ್ಪತ್ರೆಯ ಕಾಯಂ ವೈದ್ಯ ಅಲ್ಲ ಎಂದು ಎಂಎಸ್ ರಾಮಯ್ಯ ಕಾಲೇಜ್ ಹಾಗೂ ಆಸ್ಪತ್ರೆ ಸ್ಪಷ್ಟನೆ ನೀಡಿದೆ.
ಬಸವನಗುಡಿಯ ಅಪಾರ್ಟ್ಮೆಂಟ್ ನಲ್ಲಿ ವಾಸಿಸುತ್ತಿದ್ದ 28 ವರ್ಷ ವಯಸ್ಸಿನ ಕಣ್ಣು ವೈದ್ಯ (ophthalmologist) ಅಬ್ದುಲ್ ರೆಹಮಾನ್ 2014ರಿಂದ ಇರಾಕಿನ ಉಗ್ರ ಸಂಘಟನೆ ಐಎಸ್ಐಎಸ್ ಜೊತೆ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ. ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾವಿನ್ಸ್ (ಐಎಸ್ ಕೆಪಿ) ಸಂಘಟನೆಯ ಸದಸ್ಯ ಎಂದು ತಿಳಿದು ಬಂದಿದೆ.

2020ರ ಮಾರ್ಚ್ ತಿಂಗಳಿನಲ್ಲಿ ದೆಹಲಿ ಪೊಲೀಸರ ವಿಶೇಷ ದಳ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಾಗ ಜಾಮೀಯಾ ನಗರದ ಓಕ್ಲಾ ವಿಹಾರ್ ನಲ್ಲಿ ನೆಲೆಸಿದ್ದ
ಕಾಶ್ಮೀರಿ ದಂಪತಿ ಜಹಾನ್ ಜೈಬ್ ವನಿ ಹಾಗೂ ಆತನ ಪತ್ನಿ ಹೀನಾ ಬಷೀರ್ ಬೇಗ್ ಬಂಧಿಸಲಾಗುತ್ತದೆ. ಇವರಿಬ್ಬರು ಐಎಸ್ ಕೆಪಿ ಸಂಘಟನೆಯ ಸದಸ್ಯರಾಗಿದ್ದರು. ನಿಷೇಧಿತ ಉಗ್ರ ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು ತಿಹಾರ್ ಜೈಲಿನಲ್ಲಿರುವ ಉಗ್ರ ಮುಖಂಡ ಅಬ್ದುಲ್ ಬಸಿತ್ ಜೊತೆ ಸಂಪರ್ಕದಲ್ಲಿದ್ದರು.
ವಿಚಾರಣೆ ವೇಳೆ ಪುಣೆಯ ಇಬ್ಬರು ನಿವಾಸಿಗಳ ಬಗ್ಗೆ ತಿಳಿಸಿದ್ದರು. ತಕ್ಷಣವೇ ಎನ್ಐಎ ತಂಡವು ಸಾದಿಯಾ ಅನ್ವರ್ ಶೇಖ್ ಹಾಗೂ ನಬೀಲ್ ಸಿದ್ದಿಕ್ ಖಾತ್ರಿ ಎಂಬುವರನ್ನು ಬಂಧಿಸಿದ್ದಾರೆ. ಇವರೆಲ್ಲರು ಭಾರತದಲ್ಲಿ ನಾಗರಿಕ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಹೆಸರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಐಎಸ್ಐಎಸ್/ ಐಎಸ್ ಕೆಪಿಯಿಂದ ತರಬೇತಿ ಪಡೆದವರಾಗಿದ್ದಾರೆ.

ಅಬ್ದುರ್ ಜೊತೆ ವನಿ ಸಂಪರ್ಕ
ಜಹಾನ್ ಜೈಬ್ ವನಿ ಜೊತೆ ನಿರಂತರವಾಗಿ ಸಂಪರ್ಕ ಹೊಂದಿದ್ದೆ. 2014ರಲ್ಲಿ ಸಿರಿಯಾಕ್ಕೂ ಭೇಟಿ ಮಾಡಿದ್ದೆ. ಭಾರತದಲ್ಲಿ ಹಲವು ಸಂಚು ರೂಪಿಸಲು ಯೋಜನೆ ಹಾಕಿಕೊಂಡಿದ್ದೆವು. ಸಿರಿಯಾದಲ್ಲಿ ಗಾಯಗೊಂಡ ಉಗ್ರರ ನೆರವಿಗೆ ಮೆಡಿಕಲ್ ಅಪ್ಲಿಕೇಷನ್ ರೂಪಿಸುತ್ತಿದ್ದೆ. ಐಸೀಸ್ ಯೋಧರಿಗೆ ತಾಂತ್ರಿಕ, ವೈದ್ಯಕೀಯ ನೆರವು ನೀಡಿದ್ದೆ ಎಂದು ಅಬ್ದುರ್ ರೆಹಮಾನ್ ಹೇಳಿದ್ದಾನೆ.
ಬಸವನಗುಡಿಯಲ್ಲಿ ಅಬ್ದುರ್ ರೆಹಮಾನ್ ಮನೆಯಿಂದ ಲ್ಯಾಪ್ ಟಾಪ್, ಪುಸ್ತಕ, ಪೆನ್ ಡ್ರೈವ್, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಇನ್ನು ಎರಡು ಕಡೆ ದಾಳಿ ನಡೆಸಲಾಗಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications