ಬೆಂಗಳೂರು ಗಲಭೆ: ಪಿಎಫ್ಐ, ಎಸ್ಡಿಪಿಐ ಕಚೇರಿ ಸೇರಿ 43 ಕಡೆ ಎನ್ಐಎ ದಾಳಿ
ಬೆಂಗಳೂರು, ನವೆಂಬರ್ 18: ರಾಷ್ಟ್ರ ಮಟ್ಟದಲ್ಲಿ ಬೆಚ್ಚಿ ಬೀಳಿಸಿದ್ದ ರಾಜಧಾನಿಯ ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಎನ್ಐಎ ಎಂಟ್ರಿ ಕೊಟ್ಟಿದೆ. ಡಿ.ಹೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರಿನ ಸೋಸಿಯಲ್ ಡೆಮಾಟ್ರಿಕ್ ಪಾರ್ಟಿ ಆಫ್ ಇಂಡಿಯಾ ಎಸ್ಡಿಪಿಐ ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಸೇರಿದಂತೆ 43 ಕಡೆ ಶೋಧ ನಡೆಸಿದ್ದಾರೆ.
ಎನ್ಐಎ ಅಧಿಕಾರಿಗಳ ದಾಳಿ ವೇಳೆ ಎಸ್ಡಿಪಿಐಎಗೆ ಸಂಬಂಧಿಸಿದ ಹಲವು ದಾಖಲೆಗಳು ಪಿಎಫ್ಐ ಕಚೇರಿಗಳಲ್ಲಿ ಕತ್ತಿ, ಚಾಕು ಮತ್ತಿತರ ಮಾರಕಾಸ್ತ್ರಗಳ ಪತ್ತೆಯಾಗಿದ್ದು, ಅವನ್ನು ವಶಪಡಿಸಿಕೊಂಡಿದ್ದಾರೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 124 ಆರೋ ಆರೋಪಿಗಳನ್ನು ಬಂಧಿಸಲಾಗಿದೆ. ಕೆ.ಜಿ. ಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 169 ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಸೆಪ್ಟೆಂಬರ್ ನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಸಯ್ಯದ್ ಸಾಧಿಕ್ ಆಲಿ ಎಂಬಾತನನ್ನು ಬಂಧಿಸಿತ್ತು.
ಗಲಭೆಗೆ ಸಂಬಂಧಿಸಿದಂತೆ ಡಿಜೆಹಳ್ಳಿ ಹಾಗೂ ಕೆ.ಜಿ. ಹಳ್ಳಿಯಲ್ಲಿ ಬೆಂಗಳೂರು ಪೊಲೀಸರು ಎರಡು ಪ್ರಕರಣ ದಾಖಲಿಸಿದ್ದರು. ಆ ಎರಡು ಪ್ರಕರಣಗಳನ್ನು ಎನ್ಐಎ ದೆಹಲಿ ಘಟಕದ ಅಧಿಕಾರಿಗಳು ಎರಡು ಪ್ರಕರಣ ದಾಖಲಿಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸಿ ದೊಡ್ಡ ಗಲಭೆ ಸೃಷ್ಟಿಸಿದ್ದಲ್ಲದೇ ಪೊಲೀಸರ ಮೇಲೂ ಸಹ ದಾಳಿ ನಡೆದಿತ್ತು. ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಗೂ ನಷ್ಟವುಂಟು ಮಡಲಾಗಿತ್ತು. ಪೊಲೀಸ್ ಠಾಣೆ ಹಾಗೂ ಸಾರ್ವಜನಿಕ ವಾಹನಗಳಿಗೆ ಬೆಂಕಿ ಇಟ್ಟು ಸುಟ್ಟು ಭಸ್ಮ ಮಾಡಲಾಗಿತ್ತು. ಸಮಾಜದಲ್ಲಿ ಭೀತಿ ಹುಟ್ಟಿಸುವುದು ಭಯೋತ್ಪಾದನೆಯ ಒಂದು ಭಾಗವಾಗಿದ್ದು, ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಎನ್ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಈಶಾನ್ಯ ಮತ್ತು ಉತ್ತರ ಹಾಗೂ ಪೂರ್ವ ವಿಭಾಗದಿಂದಲೂ ದುಷ್ಕರ್ಮಿಗಳು ಬಂದಿದ್ದರು. ಬಂಧಿತರಲ್ಲಿ 30ಕ್ಕೂ ಹೆಚ್ಚು ಮಂಧಿಗೆ ಉಗ್ರರೊಂದಿಗೆ ನಂಟು ಹೊಂದಿರುವುದು ಎನ್ಐಎ ವಿಚಾರಣೆ ವೇಳೆ ಬೆಳಕಗೆ ಬಂದಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಇದಕ್ಕೂ ಮೊದಲು ನಡೆದ ದಾಳಿಯಲ್ಲಿ ಶಾರ್ಪ್ ವೆಪನ್ಸ್ , ಏರ್ ಗನ್, ಕಬ್ಬಿಣದ ರಾಡ್ ಮತ್ತಿತರ ವಸ್ತುಗಳನ್ನು ವಶಫಡಿಸಿಕೊಂಡಿದ್ದರು.
-
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications