ಕೋಕೋನಟ್ ಗ್ರೋವ್ ಹೋಟೆಲ್ನಲ್ಲೇ ಬಾಂಬ್ ಇಡಬೇಕಿತ್ತು
ಬೆಂಗಳೂರು, ಜನವರಿ 29 : ಬೆಂಗಳೂರಿನ ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಬಾಂಬ್ ಇಟ್ಟಿದ್ದ ರಫೀಕ್ನನ್ನು ಬಂಧಿಸಿದೆ. ಹೋಟೆಲ್ವೊಳಗೆ ಬಾಂಬ್ ಇಡಲು ರಫೀಕ್ ಪ್ರಯತ್ನ ನಡೆಸಿದ್ದ. ಆದರೆ, ಹೋಟೆಲ್ ಸಿಬ್ಬಂದಿಗಳಿಂದಾಗಿ ಅದು ಸಾಧ್ಯವಾಗಿರಲಿಲ್ಲ ಎಂದು ತನಿಖೆ ವೇಳೆ ಆತ ಒಪ್ಪಿಕೊಂಡಿದ್ದಾನೆ.
2014ರ ಡಿಸೆಂಬರ್ 28ರಂದು ಚರ್ಚ್ಸ್ಟ್ರೀಟ್ನಲ್ಲಿನ ಕೋಕೋನಟ್ ಗ್ರೋವ್ ಹೋಟೆಲ್ ಬಳಿ ರಾತ್ರಿ 8.30ರ ಸುಮಾರಿಗೆ ಬಾಂಬ್ ಸ್ಫೋಟಗೊಂಡಿತ್ತು. ಬೆಂಗಳೂರು ಪೊಲೀಸರು ಮೊದಲು ಸ್ಫೋಟದ ತನಿಖೆ ಕೈಗೊಂಡರು. ಕೆಲವು ದಿನಗಳ ನಂತರ ಎನ್ಐಎಗೆ ತನಿಖೆಯನ್ನು ಹಸ್ತಾಂತರ ಮಾಡಲಾಗಿತ್ತು. [Church Street ಸ್ಫೋಟಕ್ಕೆ ಒಂದು ವರ್ಷ]

ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬೆಂಗಳೂರಿನ ಪರಪ್ಪನ ಅಗ್ರಹಾರ ಬಳಿ ರಫೀಕ್ ಅಲಿಯಾಸ್ ಅಫ್ರಿದಿಯನ್ನು ಕಳೆದ ವಾರ ಬಂಧಿಸಿದೆ. ಚರ್ಚ್ಸ್ಟ್ರೀಟ್ನಲ್ಲಿ ತಾನು ಬಾಂಬ್ ಇಟ್ಟಿದ್ದೆ ಎಂದು ಆತ ತಪ್ಪೊಪ್ಪಿಕೊಂಡಿದ್ದಾನೆ. [ಬೆಂಗಳೂರು : ಬಾಂಬ್ ಇಟ್ಟವನ ಗುರುತು ಪತ್ತೆ?]
5 ವರ್ಷದಿಂದ ನಾಪತ್ತೆಯಾಗಿದ್ದ : ರಫೀಕ್ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ರಾಷ್ಟ್ರೀಯ ತನಿಖಾ ದಳ ರಫೀಕ್ ಬಗ್ಗೆ ಮಾಹಿತಿ ನೀಡಿದವರಿಗೆ 3 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು. ಕಳೆದ ಮೂರು ವರ್ಷಗಳಿಂದ ಬೆಂಗಳೂರು ನಗರದ ಹೊರವಲಯದಲ್ಲಿ ವಾಸವಾಗಿದ್ದ ರಫೀಕ್ ಎಸಿ ರಿಪೇರಿ ಮಾಡಿಕೊಂಡು ಜೀವನ ನಡೆಸುತ್ತಿದ್ದ.
ಹೋಟೆಲ್ನಲ್ಲೇ ಬಾಂಬ್ ಇಡಬೇಕೆಂದಿದ್ದ : ರಫೀಕ್ ಕೋಕೋನಟ್ ಗ್ರೋವ್ ಹೋಟೆಲ್ನಲ್ಲಿಯೇ ಬಾಂಬ್ ಇಡಲು ನಿರ್ಧರಿಸಿದ್ದ. ಆದರೆ, ಹೋಟೆಲ್ ಸಿಬ್ಬಂದಿಗಳು ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆ ನಡೆಸುತ್ತಿದ್ದರಿಂದ ಹೋಟೆಲ್ ಗೇಟ್ಬಳಿ ಬಾಂಬ್ ಇಟ್ಟು ಪರಾರಿಯಾಗಿದ್ದ.
2013ರಲ್ಲಿ ಬಿಹಾರದ ಗಾಂಧಿ ಮೈದಾನದಲ್ಲಿ ನಡೆದ ಸ್ಫೋಟ, ಬೆಂಗಳೂರು ಗೌಹಾತಿ ರೈಲಿನಲ್ಲಿ ನಡೆ ಸ್ಫೋಟಕ್ಕೆ ಬಳಸಿದ ಮಾದರಿಯ ವಸ್ತುಗಳನ್ನು ಚರ್ಚ್ಸ್ಟ್ರೀಟ್ ಸ್ಫೋಟಕ್ಕೂ ಬಳಸಲಾಗಿತ್ತು. ರಫೀಕ್ 2008ರ ಅಹಮದಾಬಾದ್ ಬಾಂಬ್ ಸ್ಫೋಟದಲ್ಲಿಯೂ ಪಾಲ್ಗೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ.
ರಫೀಕ್ ಚರ್ಚ್ಸ್ಟ್ರೀಟ್ ಬಳಿ ಓಡಾಡುತ್ತಿರುವ ವಿಡಿಯೋ
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications