ನಕಲಿ ನೋಟಿನ ಜಾಲಕ್ಕೆ ಬೆಂಗಳೂರು ಕೇಂದ್ರ ಸ್ಥಾನ!
ಬೆಂಗಳೂರು, ಫೆಬ್ರವರಿ 15 : ದಕ್ಷಿಣ ಭಾರತದ ತುಂಬಾ ಹಬ್ಬಿರುವ ನಕಲಿ ನೋಟಿನ ಜಾಲಕ್ಕೆ ಉದ್ಯಾನ ನಗರಿ ಬೆಂಗಳೂರು ಕೇಂದ್ರ ಸ್ಥಾನವಾಗಬೇಕಿತ್ತು. ನಕಲಿ ನೋಟಿನ ಬೃಹತ್ ಜಾಲವನ್ನು ಪತ್ತೆ ಹಚ್ಚಿರುವ ಎನ್ಐಎ ಅಧಿಕಾರಿಗಳು ಬೆಂಗಳೂರನ್ನು ಕೇಂದ್ರ ಸ್ಥಾನವಾಗಿ ಮಾಡಲು ಹೊರಟಿದ್ದರು ಎಂಬ ಮಾಹಿತಿಯನ್ನು ತನಿಖೆ ವೇಳೆ ಸಂಗ್ರಹಿಸಿದ್ದಾರೆ.
2015ರ ಸೆಪ್ಟೆಂಬರ್ 9ರಂದು ವಿಶಾಖಪಟ್ಟಣಂನಲ್ಲಿ 5 ಲಕ್ಷ ಮೌಲ್ಯದ ನಕಲಿ ನೋಟುಗಳೊಂದಿಗೆ ಸಿಕ್ಕಿಬಿದ್ದಿರುವ ಸದ್ದಾಂ ಹುಸೈನ್ ಈ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾನೆ. ಬಂಗ್ಲಾದೇಶ ಗಡಿ ಭಾಗದಿಂದ ನಕಲಿ ನೋಟುಗಳನ್ನು ತರುತ್ತಿದ್ದ ಈ ಜಾಲ, ನಂತರ ಅದನ್ನು ದಕ್ಷಿಣ ಭಾರತದಲ್ಲಿ ಹಂಚಿಕೆ ಮಾಡುತ್ತಿತ್ತು. ಇದಕ್ಕಾಗಿ ಬೆಂಗಳೂರನ್ನು ಕೇಂದ್ರ ಸ್ಥಾನ ಮಾಡಿಕೊಳ್ಳಲು ಸಿದ್ಧತೆ ನಡೆಸಿತ್ತು. [ಭಾರತಕ್ಕೆ ಖೋಟಾ ನೋಟು ಬರುವುದು ಎಲ್ಲಿಂದ?]

ಹೈದರಾಬಾದ್ನ ಎನ್ಐಎ ಅಧಿಕಾರಿಗಳ ತಂಡ ನಕಲಿ ನೋಟಿನ ಜಾಲದ ಬಗ್ಗೆ ತನಿಖೆ ನಡೆಸುತ್ತಿದೆ. ಹುಸೈನ್ ವಿಚಾರಣೆ ವೇಳೆ ದಕ್ಷಿಣ ಭಾರತದಲ್ಲಿ ಕೇಂದ್ರ ಸ್ಥಾನ ಸ್ಥಾಪಿಸಿಕೊಂಡು, ಕಾರ್ಯಾಚರಣೆ ನಡೆಸಲು ಈ ಜಾಲ ನಿರ್ಧರಿಸಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. [ನೋಟು ನೋಡದೆ ಕಿಸೆಗೆ ಹಾಕಿದ್ರೆ ಕಥೆ ಮುಗೀತು!]
ಎನ್ಐಎ ಅಧಿಕಾರಿಗಳ ತಂಡ ಅಸ್ಸಾಂ ಮೂಲದ ಅಮಿರುಲ್ ಹಖ್ (22) ಅನ್ನು ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಬಂಧಿಸಿದೆ. ಹಖ್ ಬೆಂಗಳೂರಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಬಗ್ಗೆ ಹುಸೈನ್ ವಿಚಾರಣೆ ವೇಳೆ ಮಾಹಿತಿ ನೀಡಿದ್ದ.
ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ನಕಲಿ ನೋಟನ್ನು ಹಂಚಿಕೆ ಮಾಡುವ ಜಾಲದಲ್ಲಿ ಹಖ್ ಭಾಗಿಯಾಗಿದ್ದಾನೆ. ಬಾಂಗ್ಲಾ ಗಡಿಯಿಂದ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ನಕಲಿ ನೋಟುಗಳನ್ನು ತರುತ್ತಿದ್ದ ಈ ಜಾಲ ಅಲ್ಲಿಂದ ಬೆಂಗಳೂರಿಗೆ ಅವುಗಳನ್ನು ತಂದು, ಅಲ್ಲಿಂದ ಬೇರೆ ರಾಜ್ಯಗಳಿಗೆ ಸರಬರಾಜು ಮಾಡುತ್ತಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications