Get Updates
Get notified of breaking news, exclusive insights, and must-see stories!

ಮಡೆಸ್ನಾನ ವಿರೋಧಿಸಿ ನಿಡುಮಾಮಿಡಿ ಶ್ರೀ ಉಪವಾಸ

ಬೆಂಗಳೂರು, ಡಿ. 5 : ಮಡೆಸ್ನಾನ ವಿವಾದ ಮತ್ತೊಮ್ಮೆ ಆರಂಭವಾಗಿದೆ. ಶುಕ್ರವಾರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆರಂಭವಾಗಲಿದ್ದು, ಈ ಬಾರಿ ಮಡೆಸ್ನಾನಕ್ಕೆ ಅವಕಾಶ ನೀಡಬಾರದು ನಿಡುಮಾಮಿಡಿ ಮಠದ ವೀರಭದ್ರಚನ್ನಮಲ್ಲ ಸ್ವಾಮೀಜಿ ಬೆಂಗಳೂರಿನಲ್ಲಿ ಪತಿಭಟನೆ ಆರಂಭಿಸಿದ್ದಾರೆ.

ಬೆಂಗಳೂರಿನ ಬಸನವಗುಡಿಯಲ್ಲಿರುವ ನಿಡುಮಾಮಿಡಿ ಮಠದಲ್ಲಿ ಸುಮಾರು 20 ಕ್ಕೂ ಅಧಿಕ ಮಠಾಧೀಶರೊಂದಿಗೆ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಗುರುವಾರ ಮಠದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗುರುವಾರ ಸೂರ್ಯೋದಯವಾದಾಗ ಆರಂಭವಾದ ಉಪವಾಸ ಸತ್ಯಾಗ್ರಹ ಸೂರ್ಯಾಸ್ತವಾಗುವ ತನಕ ನಡೆಯಲಿದೆ.

Nidumamidi Sri

ಶುಕ್ರವಾರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆರಂಭವಾಗಲಿದ್ದು ವಾರ್ಷಿಕ ಮಡೆಸ್ನಾನ ನಡೆಸಲು ದೇವಾಲಯ ಸಜ್ಜಾಗಿದೆ. ಆದ್ದರಿಂದ ಸ್ವಾಮೀಜಿಗಳು ಪ್ರತಿಭಟನೆ ಆರಂಭಿಸಿದ್ದು, ಈ ಬಾರಿ ಮಡೆಸ್ನಾನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸುತ್ತಿದ್ದಾರೆ. (ಮಡೆಸ್ನಾನದಲ್ಲಿ ಬ್ರಾಹ್ಮಣರು ಕೂಡಾ ಇದ್ರು ಕಣ್ರೀ)

ಉಪವಾಸ ಆರಂಭಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಮಡೆಸ್ನಾನ ಅಹಸ್ಯಕರ, ಅಮಾನವೀಯ ಮತ್ತು ಹೇಯ ಕೃತ್ಯವಾಗಿದೆ. ದೇವರ ಹೆಸರಿನಲ್ಲಿ ಇಂತಹ ಕೃತ್ಯ ನಡೆಯಬಾರದು. ಆದ್ದರಿಂದ ಇಂತಹ ಹೀನ ಸಂಪ್ರದಾಯ ನಡೆಯುವುದನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದಾಗಿ ಹೇಳಿದರು. (ಕುಕ್ಕೆ ಮಡೆಸ್ನಾನ ನಿಷೇಧಕ್ಕೆ ದಸಂಸ ಆಗ್ರಹ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+