ಬೆಂಗಳೂರಿನಲ್ಲಿ 'ಮದ್ಯ'ರಾತ್ರಿ ಅವಧಿ ಒಂದು ವರ್ಷ ವಿಸ್ತರಣೆ
ಬೆಂಗಳೂರು, ಜೂ. 7 : ಬೆಂಗಳೂರಿಗರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಉದ್ಯಾನನಗರಿಯಲ್ಲಿ ಮೂರು ತಿಂಗಳ ಅವಧಿಗೆ ಪ್ರಾಯೋಗಿಕವಾಗಿ ಜಾರಿಗೆ ತಂದಿದ್ದ 'ನೈಟ್ಲೈಫ್ ಅನ್ನು ಒಂದು ವರ್ಷದ ಮಟ್ಟಿಗೆ ವಿಸ್ತರಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತ ಅಧಿಕೃತ ಆದೇಶ ಮಾತ್ರ ಹೊರಬೀಳಬೇಕಾಗಿದೆ.
ಶುಕ್ರವಾರ ವಿಧಾನಸೌಧದಲ್ಲಿ ನೈಟ್ ಲೈಫ್ ಅವಧಿ ವಿಸ್ತರಣೆ ಮಾಡುವ ಕುರಿತು ಸರ್ಕಾರದ ಮುಖ್ಯಕಾರ್ಯಸದರ್ಶಿ ಕೌಶಿಕ್ ಮುಖರ್ಜಿ ಅಧ್ಯಕ್ಷತೆಯಲ್ಲಿ ಸಭೆಯ ನಡೆಯಿತು. ಸಭೆಯಲ್ಲಿ ಅಬಕಾರಿ, ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಭಾಗವಹಿಸಿದ್ದರು. [ಬೆಂಗಳೂರಿನಲ್ಲಿ ಬಾರ್ 1 ಗಂಟೆವರಗೆ ಓಪನ್!]

ನೈಟ್ ಲೈಫ್ ಅವಧಿ ವಿಸ್ತರಣೆ ಮಾಡುವ ಕುರಿತು ಸಭೆಯಲ್ಲಿ ಪೊಲೀಸ್, ಅಬಕಾರಿ ಇಲಾಖೆಗಳ ಅಭಿಪ್ರಾಯ ಸಂಗ್ರಹಿಸಲಾಯಿತು. ಪ್ರಸ್ತುತ ಬೆಂಗಳೂರು ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಈ ವ್ಯವಸ್ಥೆಯನ್ನು ಒಂದು ವರ್ಷದ ಮಟ್ಟಿಗೆ ಅಂದರೆ 2014ರ ಜೂನ್ 6ರಿಂದ 2015ರ ಜೂನ್ 6ವರೆಗೆ ವಿಸ್ತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ['ಮದ್ಯ'ರಾತ್ರಿ ಅವಧಿ ವಿಸ್ತರಣೆಗೆ ಬಿಜೆಪಿ ಅಸಮಾಧಾನ]
ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಗುರುವಾರ ಸರ್ಕಾರಕ್ಕೆ ನೈಟ್ ಲೈಫ್ ಅವಧಿ ವಿಸ್ತರಣೆ ಮಾಡಿದರೆ, ಕಾನೂನು, ಸುವ್ಯವಸ್ಥೆಗೆ ತೊಂದರೆ ಇಲ್ಲ ಎಂದು ವರದಿ ನೀಡಿದ್ದರು. ಶುಕ್ರವಾರ ನಡೆದ ಸಭೆಯಲ್ಲಿ ನೈಟ್ ಲೈಫ್ ವಿಸ್ತರಣೆ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರ ಈ ಕುರಿತು ಸೋಮವಾರದ ನಂತರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಏನಿದು ನೈಟ್ ಲೈಫ್ : ಉದ್ಯಾನ ನಗರಿಯಲ್ಲಿ ಮಧ್ಯರಾತ್ರಿ 1 ಗಂಟೆಯ ವರೆಗೆ ಪಬ್, ಬಾರ್, ರೆಸ್ಟೋರೆಂಟ್ ಕಾರ್ಯನಿರ್ವಹಿಸಲು ಸರ್ಕಾರ ಮಾರ್ಚ್ ನಲ್ಲಿ ಒಪ್ಪಿಗೆ ನೀಡಿತ್ತು. ಆದರೆ, ಶನಿವಾರ ಮತ್ತು ಭಾನುವಾರ ಮಾತ್ರ ಈ ಸೇವೆ ಲಭ್ಯವಿರುತ್ತದೆ ಎಂದು ಸ್ಪಷ್ಟಪಡಿಸಿತ್ತು. [ಬೆಂಗಳೂರಿನ ರಾತ್ರಿ 'ಬಾರ್' ಅವಧಿ ಹೆಚ್ಚಾಗಲಿದೆ]
ಬೆಂಗಳೂರಿನಲ್ಲಿ ನೈಟ್ ಲೈಫ್ ಅವಧಿ ವಿಸ್ತರಣೆ ಮಾಡಬೇಕೆಂಬುದು ಕಾರ್ಪೋರೆಟ್ ಸಂಸ್ಥೆಗಳ ಬಹುದಿನಗಳ ಬೇಡಿಕೆಯಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಒಪ್ಪಿಗೆ ನೀಡಿದ್ದರು. ಇದು ಕಾಂಗ್ರೆಸ್ ಮತ್ತು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಎಂ.ವಿ.ರಾಜಶೇಖರ್ ರಂತಹ ಕಾಂಗ್ರೆಸ್ ಹಿರಿಯ ಮುಖಂಡರು ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.
ಮೂರು ತಿಂಗಳ ತನಕ ಪ್ರಾಯೋಗಿಕವಾಗಿ ಈ ಸೇವೆ ಲಭ್ಯವಿರುತ್ತದೆ. ಈ ಹಂತದಲ್ಲಿ ಪರಿಣಾಮಗಳನ್ನು ಪರಿಶೀಲಿಸಿದ ನಂತರ ವಾರದ ಏಳು ದಿನವೂ ತಡರಾತ್ರಿವರೆಗೆ ಸೇವೆಯನ್ನು ವಿಸ್ತರಿಸುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದರು. ಸದ್ಯ ಸರ್ಕಾರ ವಾರದ ಏಳುದಿನಗಳಿಗೂ ಇದನ್ನು ವಿಸ್ತರಿಸಲಿದೆಯೇ ಕಾದು ನೋಡಬೇಕು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications