ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ ನಿಖಿಲ್ ಕುಮಾರಸ್ವಾಮಿ

By Manjunatha
|
Google Oneindia Kannada News

ಬೆಂಗಳೂರು, ಜನವರಿ 22: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದಂದು ತಮಗೆ ರಾಜಕೀಯ ಪ್ರವೇಶದ ಬಗ್ಗೆ ಆಸಕ್ತಿಯಿರುವುದಾಗಿ ಸುಳಿವು ನೀಡಿದ್ದಾರೆ.

ಹುಟ್ಟಹಬ್ಬದ ಸಂಭ್ರಮದಲ್ಲಿರುವ ನಿಖಿಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ 'ನನ್ನ ಅಧಿಕೃತ ರಾಜಕೀಯ ಪ್ರವೇಶದ ಬಗ್ಗೆ ಈಗಲೇ ಹೇಳಲಾರೆ, ಅದು ನನ್ನ ಕೈಯಲ್ಲಿಲ್ಲ' ಎಂದು ಹೇಳುವ ಮೂಲಕ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ನಿರ್ಣಯಕ್ಕೆ ಕಾಯುತ್ತಿರುವುದಾಗಿ ಸುಳಿವು ನೀಡಿದ್ದಾರೆ.

ನಾನು ಅಭ್ಯರ್ಥಿಯಾಗಲ್ಲ, ಚುನಾವಣೆ ಪ್ರಚಾರ ಮಾಡುವೆ: ನಿಖಿಲ್ನಾನು ಅಭ್ಯರ್ಥಿಯಾಗಲ್ಲ, ಚುನಾವಣೆ ಪ್ರಚಾರ ಮಾಡುವೆ: ನಿಖಿಲ್

'ತಂದೆ ಕುಮಾರಸ್ವಾಮಿ ಅವರ ರಾಜಕೀಯಕ್ಕೆ ಸಹಾಯಕನಾಗಿ ದುಡಿಯುತ್ತೇನೆ' ಎಂದಿರುವ ನಿಖಿಲ್ ಪರೋಕ್ಷವಾಗಿ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ, ಹಾಗೂ ರಾಜ್ಯ ರಾಜಕಾರಣವನ್ನು ಹತ್ತಿರದಿಂದ ಗಮನಿಸುತ್ತಿದ್ದೇನೆ ಎಂದಿದ್ದಾರೆ.

Nikhil Kumaraswamy gives hint of entering to politics

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸ್ಥಾನ ಅಲಂಕರಿಸಿರುವ ಸಹೋದರ, ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ರಾಜ್ಯ ಜೆಡಿಎಸ್‌ನಲ್ಲಿ ಛಾಪು ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ, ಹಾಗಾಗಿ ನಿಖಿಲ್ ಕುಮಾರಸ್ವಾಮಿ ಅವರೂ ಕೂಡ ರಾಜಕೀಯ ಪ್ರವೇಶಿಸುತ್ತಾರೆಂಬ ಊಹಾಪೋಹ ಹರಿದಾಡುತ್ತಿದೆ.

ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದು ಹೀಗೆ..ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದು ಹೀಗೆ..

ಈಗಾಗಲೇ ನಿಖಿಲ್ ಅವರು ತಂದೆಯವರೊಟ್ಟಿಗೆ ಕೆಲವು ಬಹಿರಂಗ ಸಮಾವೇಶಗಳಲ್ಲಿ ಕಾಣಿಸಿಕೊಂಡಿದ್ದು, ಜೆಡಿಎಸ್ ಸ್ಟಾರ್ ಪ್ರಚಾರಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಉದಯೋನ್ಮುಖ ತಾರೆಯಾಗಿ ಗುರುತಿಸಿಕೊಂಡಿರುವ ನಿಖಿಲ್ ಅವರು ರಾಜಕಾರಣದಲ್ಲಿ ಯಾವ ರೀತಿಯ ಮೋಡಿ ಮಾಡುತ್ತಾರೊ ನೋಡಬೇಕಿದೆ.

English summary
JDS state President Kumaraswamy's son Nikhil Kumaraswamy said my political entry decision is not my hand, its in party seniors hand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X