ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು, ಜನವರಿ 22: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬದಂದು ತಮಗೆ ರಾಜಕೀಯ ಪ್ರವೇಶದ ಬಗ್ಗೆ ಆಸಕ್ತಿಯಿರುವುದಾಗಿ ಸುಳಿವು ನೀಡಿದ್ದಾರೆ.
ಹುಟ್ಟಹಬ್ಬದ ಸಂಭ್ರಮದಲ್ಲಿರುವ ನಿಖಿಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ 'ನನ್ನ ಅಧಿಕೃತ ರಾಜಕೀಯ ಪ್ರವೇಶದ ಬಗ್ಗೆ ಈಗಲೇ ಹೇಳಲಾರೆ, ಅದು ನನ್ನ ಕೈಯಲ್ಲಿಲ್ಲ' ಎಂದು ಹೇಳುವ ಮೂಲಕ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ನಿರ್ಣಯಕ್ಕೆ ಕಾಯುತ್ತಿರುವುದಾಗಿ ಸುಳಿವು ನೀಡಿದ್ದಾರೆ.
'ತಂದೆ ಕುಮಾರಸ್ವಾಮಿ ಅವರ ರಾಜಕೀಯಕ್ಕೆ ಸಹಾಯಕನಾಗಿ ದುಡಿಯುತ್ತೇನೆ' ಎಂದಿರುವ ನಿಖಿಲ್ ಪರೋಕ್ಷವಾಗಿ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ, ಹಾಗೂ ರಾಜ್ಯ ರಾಜಕಾರಣವನ್ನು ಹತ್ತಿರದಿಂದ ಗಮನಿಸುತ್ತಿದ್ದೇನೆ ಎಂದಿದ್ದಾರೆ.

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸ್ಥಾನ ಅಲಂಕರಿಸಿರುವ ಸಹೋದರ, ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ರಾಜ್ಯ ಜೆಡಿಎಸ್ನಲ್ಲಿ ಛಾಪು ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ, ಹಾಗಾಗಿ ನಿಖಿಲ್ ಕುಮಾರಸ್ವಾಮಿ ಅವರೂ ಕೂಡ ರಾಜಕೀಯ ಪ್ರವೇಶಿಸುತ್ತಾರೆಂಬ ಊಹಾಪೋಹ ಹರಿದಾಡುತ್ತಿದೆ.
ಈಗಾಗಲೇ ನಿಖಿಲ್ ಅವರು ತಂದೆಯವರೊಟ್ಟಿಗೆ ಕೆಲವು ಬಹಿರಂಗ ಸಮಾವೇಶಗಳಲ್ಲಿ ಕಾಣಿಸಿಕೊಂಡಿದ್ದು, ಜೆಡಿಎಸ್ ಸ್ಟಾರ್ ಪ್ರಚಾರಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಉದಯೋನ್ಮುಖ ತಾರೆಯಾಗಿ ಗುರುತಿಸಿಕೊಂಡಿರುವ ನಿಖಿಲ್ ಅವರು ರಾಜಕಾರಣದಲ್ಲಿ ಯಾವ ರೀತಿಯ ಮೋಡಿ ಮಾಡುತ್ತಾರೊ ನೋಡಬೇಕಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications