Channapatna BY Election: ಚನ್ನಪಟ್ಟಣದಲ್ಲಿ ಡಿಕೆ ಬ್ರದರ್ಸ್ ಭರ್ಜರಿ ಗೆಲುವು, ನಿಖಿಲ್ ಕುಮಾರಸ್ವಾಮಿ ಸೋಲು...
ಚನ್ನಪಟ್ಟಣ ಉಪಚುನಾವಣೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಭೀಕರ ಆಘಾತ ನೀಡಿದ್ದು ಜೆಡಿಎಸ್ ನಾಯಕರು ಫಲಿತಾಂಶದ ತೀವ್ರತೆ ನೋಡಿ ಬೆಚ್ಚಿಬಿದ್ದಿದ್ದಾರೆ. ಅಂದಹಾಗೆ ಸಿಪಿವೈ ಅಂದ್ರೆ ಸಿಪಿ ಯೋಗೇಶ್ವರ್ & ನಿಖಿಲ್ ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ತೊಡೆತಟ್ಟಿ, ಗೆಲುವಿಗಾಗಿ ಮುಂದೆ ನುಗ್ಗಿದ್ದರು.
ಚನ್ನಪಟ್ಟಣ ಗೆಲ್ಲಬೇಕು ಎಂಬುದು ಕಾಂಗ್ರೆಸ್ & ಜೆಡಿಎಸ್ ಪಕ್ಷಗಳಿಗೆ ಬಿಗ್ ಚಾಲೆಂಜ್ ಆಗಿತ್ತು. ಅದರಲ್ಲೂ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಗೆದ್ದು, ಶಾಸಕರಾಗಿ ವಿಧಾನಸಭೆಯ ಪ್ರವೇಶ ಮಾಡುವುದು ಗ್ಯಾರಂಟಿ ಎನ್ನಲಾಗಿತ್ತು. ಆದ್ರೆ ಈಗ ಎಲ್ಲಾ ಉಲ್ಟಾ ಹೊಡೆಯುತ್ತಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಿ ಡಿಕೆ ಬ್ರದರ್ಸ್ ಭರ್ಜರಿ ಗೆಲುವು & ನಿಖಿಲ್ ಕುಮಾರಸ್ವಾಮಿ ಸೋಲು ಅಂತಾ...

ಡಿಕೆ ಬ್ರದರ್ಸ್ ಭರ್ಜರಿ ಗೆಲುವು?
ಚನ್ನಪಟ್ಟಣ ಉಪಚುನಾವಣೆ ಕದನ ಹೇಗೆ ಆಗಿತ್ತು ಅಂದ್ರೆ ಇಲ್ಲಿ ಗೆದ್ದೇ ಗೆಲ್ಲಬೇಕು ಎಂಬುದು ಕಾಂಗ್ರೆಸ್ ನಾಯಕರ ಹಠವಾಗಿತ್ತು. ಇನ್ನೊಂದು ಕಡೆ ತಮ್ಮ ಮಗನ ರಾಜಕೀಯ ಭವಿಷ್ಯಕ್ಕೆ ಚನ್ನಪಟ್ಟಣ ಉಪಚುನಾವಣೆ ಬಹುಮುಖ್ಯ ಎಂಬುದು ಕುಮಾರಸ್ವಾಮಿ ಅವರ ಲೆಕ್ಕಾಚಾರ ಆಗಿತ್ತು. ಹೀಗೆ ಕಾಂಗ್ರೆಸ್ & ಜೆಡಿಎಸ್ ನಡುವೆ ನೇರವಾದ ಯುದ್ಧವೂ ಆರಂಭವಾಗಿ, ಗೆದ್ದೇ ಗೆಲ್ಲಬೇಕು ಎಂಬ ಹುಮ್ಮಸ್ಸಿನಲ್ಲಿ ಎರಡೂ ಪಕ್ಷಗಳು ಮುಂದೆ ನುಗ್ಗಿದ್ದವು.
ಸೇಡು ತೀರಿಸಿಕೊಂಡ ಡಿಕೆ ಬ್ರದರ್ಸ್?
ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಅಖಾಡದಲ್ಲಿ, ಡಿ.ಕೆ. ಸುರೇಶ್ ಅವರ ವಿರುದ್ಧ, ಎಚ್.ಡಿ. ಕುಮಾರಸ್ವಾಮಿ ಅವರ ಸಂಬಂಧಿಯೂ ಆಗಿರುವ ಜಯದೇವ ಆಸ್ಪತ್ರೆಯ ಮಾಜಿ ಮುಖ್ಯಸ್ಥ ಮಂಜುನಾಥ್ ಅವರನ್ನ ಕಣಕ್ಕೆ ಇಳಿಸಲಾಗಿತ್ತು. ಈ ಯುದ್ಧದಲ್ಲಿ ಭಾರಿ ದೊಡ್ಡ ಹಿನ್ನಡೆ ಅನುಭವಿಸಿ ಸೋಲು ಕಂಡಿದ್ದರು ಡಿ.ಕೆ. ಸುರೇಶ್. ಹೀಗೆ ಡಿ.ಕೆ. ಸುರೇಶ್ ಅವರ ಸೋಲಿನಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ಪಾತ್ರ ದೊಡ್ಡದಾಗಿತ್ತು. ಇದೀಗ ಅದೇ ಸೇಡಿಗೆ ಸೇಡು ತೀರಿಸಿಕೊಂಡಿದ್ದಾರೆ ಡಿಕೆ ಬ್ರದರ್ಸ್ ಎಂದು ಚರ್ಚೆ ಮಾಡಲಾಗುತ್ತಿದೆ.
3ಕ್ಕೆ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್...
ಚನ್ನಪಟ್ಟಣ, ಸಂಡೂರು & ಶಿಗ್ಗಾವಿ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿತ್ತು. ಹೀಗಾಗಿ ಇಡೀ ದೇಶದ ಗಮನ ಈ ಕ್ಷೇತ್ರಗಳ ಮೇಲೆ ನೆಟ್ಟಿತ್ತು. ಈಗಾಗಲೇ ಗೆಲುವಿಗಾಗಿ ದೊಡ್ಡ ಹೋರಾಟ ನಡೆಸಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಗೆದ್ದು ಬೀಗಲು ಏನೇನು ಬೇಕೋ ಅದೆಲ್ಲವನ್ನೂ ಮಾಡಿದ್ದರು.
ಆದರೆ ಅಂತಿಮವಾಗಿ 3ಕ್ಕೆ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದು ಬೀಗುವ ಲಕ್ಷಣ ಕಾಣಿಸುತ್ತಿದ್ದು, ಈಗಾಗಲೇ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಇದೇ ಸಮಯದಲ್ಲಿ, ಚನ್ನಪಟ್ಟಣ & ಶಿಗ್ಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸದ್ಯಕ್ಕೆ ಭಾರಿ ಮುನ್ನಡೆಯನ್ನ ಕಾಯ್ದುಕೊಂಡಿದ್ದು ಗೆಲ್ಲುವುದು ಬಹುತೇಕ ಫೈನಲ್ ಆಗುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications