ಕೆ.ಆರ್ ಪೇಟೆ ಉಪ ಚುನಾವಣೆ ಬಗ್ಗೆ ನಿಖಿಲ್ ಮಹತ್ವದ ಪ್ರತಿಕ್ರಿಯೆ
Recommended Video
ಬೆಂಗಳೂರು, ಆಗಸ್ಟ್ 05: ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮೈತ್ರಿ ಮುರಿದುಕೊಂಡಿದ್ದು, ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಜೆಡಿಎಸ್ ಸ್ಪರ್ಧಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಘೋಷಿಸಿದ ಬಳಿಕ ಜೆಡಿಎಸ್ ಯುವಘಟಕದ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರು ಉಪಚುನಾವಣೆ ಬಗ್ಗೆ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
ಮುಂಬರುವ 17 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಕಣಕ್ಕಿಳಿಸಬೇಕಿದೆ. ಆದರೆ, ಕಾಂಗ್ರೆಸ್ ನಾಯಕರು ಮಾತ್ರ ಇನ್ನೂ ಮೈತ್ರಿ ಜೀವಂತವಾಗಿದೆ ಎಂದು ಹೇಳುತ್ತಿದ್ದಾರೆ.
"ಜೆಡಿಎಸ್ ಕಾರ್ಯಕರ್ತರು ಮೈತ್ರಿ ಬೇಡವೆಂದು ಹೇಳಿದ್ದಾರೆ, 17 ಕ್ಷೇತ್ರದ ಉಪ ಚುನಾವಣೆಯಾಗಲಿ, 224 ಕ್ಷೇತ್ರಕ್ಕೂ ಚುನಾವಣೆ ನಡೆಯಲಿ ನಾವು ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧ, ಅಧಿಕಾರ ಎಂದಿಗೂ ಶಾಶ್ವತವಲ್ಲ, ಜನರ ಪ್ರೀತಿ ಮುಖ್ಯ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈಗೆ ವಲಸೆ ಹೋಗಿದ್ದರು. ನಂತರ ಮೈತ್ರಿ ಸರ್ಕಾರ ಪತನವಾಗಿ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ನಡುವೆ ರಾಜೀನಾಮೆ ನೀಡಿದ್ದ 17 ಮಂದಿ ಶಾಸಕರನ್ನು ಈ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ.
ಹೀಗಾಗಿ, 17 ಕ್ಷೇತ್ರಗಳಿಗೆ ಮತ್ತೊಮ್ಮೆ ಚುನಾವಣೆ ನಡೆಯಬೇಕಿದೆ. ಕೆ.ಆರ್ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಅನರ್ಹಗೊಂಡ ಬಳಿಕ ಉಪ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸುವ ಬಗ್ಗೆ ಸುದ್ದಿ ಹಬ್ಬಿದೆ. ಆದರೆ, ನಿಖಿಲ್ ಸುದ್ದಿಯನ್ನು ಅಲ್ಲಗೆಳೆದು ಪ್ರತಿಕ್ರಿಯೆ ನೀಡಿದ್ದಾರೆ.

ಆಕಾಂಕ್ಷಿಗಳ ಪಟ್ಟಿ ತಯಾರಿಸುವೆ ಎಂದ ನಿಖಿಲ್
"ಕೆ. ಆರ್ ಪೇಟೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನನ್ನ ಹೆಸರು ಕೇಳಿ ಬರುತ್ತಿದೆ, ಆದರೆ, ನಾನು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ, ಕಾರ್ಯಕರ್ತರ ಸಭೆಯನ್ನು ಕರೆದು ಆಕಾಂಕ್ಷಿಗಳ ಪಟ್ಟಿ ತಯಾರಿಸಿ ಪಕ್ಷದ ವರಿಷ್ಠರಿಗೆ ನೀಡುತ್ತೇನೆ" ಎಂದು ಜೆಡಿಎಸ್ ಯುವಘಟಕದ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರು ಯುವಘಟಕದ ಮುಖಂಡರು ಮತ್ತು ಕಾರ್ಯಕರ್ತರ ಸಭೆಗೂ ಮುನ್ನ ಹೇಳಿದರು.

ಚುನಾವಣೆಯಲ್ಲಿ ಈಗಾಗಲೇ ಸೋತಿದ್ದೇನೆ
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಾನು ಸೋತಿದ್ದೇನೆ. ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇನೆ. ಕೆ.ಆರ್.ಪೇಟೆ ಉಪ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ. ಕಾರ್ಯಕರ್ತರು ಒತ್ತಾಯ ಮಾಡುತ್ತಾರೆ. ಆದರೆ, ದೇವೇಗೌಡರ ಕುಟುಂಬದವರೇ ಸ್ಪರ್ಧೆ ಮಾಡಬೇಕೆಂಬ ಬಗ್ಗೆ ಒತ್ತಾಯ ಮಾಡುವುದು ಸರಿಯಲ್ಲ ಎಂದರು.

ಜೆಡಿಎಸ್ ಭದ್ರಕೋಟೆ ಉಳಿಸಿಕೊಳ್ಳಬೇಕಿದೆ.
ಜೆಡಿಎಸ್ ಭದ್ರಕೋಟೆಯಾಗಿರುವ ಕೆ. ಆರ್ ಪೇಟೆ ಉಳಿಸಿಕೊಳ್ಳಬೇಕಿದೆ. ನಮ್ಮಲ್ಲಿ ಸ್ಪರ್ಧಿಗಳಾಗಲು ಕಾರ್ಯಕರ್ತರು, ಆಕಾಂಕ್ಷಿಗಳು ತುಂಬಾ ಜನ ಇದ್ದಾರೆ. ಯುವಕರನ್ನು ಸಂಘಟಿಸುವುದು. ಸದಸ್ಯತ್ವ ಅಭಿಯಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. 17 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನಾನು ಪಾದಯಾತ್ರೆ ಮಾಡುತ್ತೇನೆ ಎಂಬುದು ಊಹಾಪೋಹ. ಯಾವ ವಿಚಾರವಾಗಿ ಪಾದಯಾತ್ರೆ ಮಾಡುತ್ತೇವೆ ಎಂಬುದು ಮುಖ್ಯ ಎಂದರು.

ದೇವೇಗೌಡ್ರು ಪಕ್ಷ ಸಂಘಟನೆಗೆ ಸಾಕಷ್ಟು ದುಡಿಯುತ್ತಿದ್ದಾರೆ
ದೇವೇಗೌಡರು ಈ ವಯಸ್ಸಿನಲ್ಲೂ ಪಕ್ಷ ಸಂಘಟನೆಗೆ ಸಾಕಷ್ಟು ದುಡಿಯುತ್ತಿದ್ದಾರೆ. ಅವರು ನಮಗೆಲ್ಲಾ ಆದರ್ಶ ವ್ಯಕ್ತಿ. 7ನೇ ತಾರೀಖು ಅರಮನೆ ಮೈದಾನದಲ್ಲಿ ಪ್ರಾಮಾಣಿಕ ಕಾರ್ಯಕರ್ತರ ಸಭೆ ಇದೆ. ನಮ್ಮ ತಂದೆ ಭಾವನಾತ್ಮಕ ಜೀವಿ. 14 ತಿಂಗಳ ತಮ್ಮ ಆಡಳಿತದಲ್ಲಿ ಭ್ರಷ್ಟಾಚಾರ ರಹಿತವಾಗಿ ಸರ್ಕಾರ ನಡೆಸಿದ್ದಾರೆ. ರಾಜಕೀಯ ಘಟನೆಗಳು ಮುಗಿದ ಅಧ್ಯಾಯ. ಆ ಬಗ್ಗೆ ಮತ್ತೆ ಚರ್ಚೆ ಮಾಡುವುದು ಸರಿಯಲ್ಲ ಎಂದರು
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications