ನೇರವಾಗಿ ವೇದಿಕೆ ಏರಿ ಕುಮಾರಸ್ವಾಮಿ ಕಾಲಿಗೆ ಬಿದ್ದ 9ರ ಬಾಲಕ: ಔದಾರ್ಯ ಮೆರೆದಿದ್ದ ಎಚ್ಡಿಕೆ
ಬೆಂಗಳೂರು, ಜೂನ್ 20: ನಾನೊಬ್ಬ ಭಾವನಾತ್ಮಕ ಜೀವಿ ಎಂದು ಹಲವು ವೇದಿಕೆಯಲ್ಲಿ ಹೇಳಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರಿಗೆ, ನಗರದ ಕಾರ್ಯಕ್ರಮವೊಂದರಲ್ಲಿ ಭಾವನಾತ್ಮಕ ಸನ್ನಿವೇಶ ಎದುರಿಸಬೇಕಾಗಿ ಬಂತು.
ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ನಿರ್ಮಿಸಿರುವ ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಉದ್ಘಾಟಿಸಿದ ನಂತರ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿಗಳು, ಇನ್ಫೋಸಿಸ್ ಫೌಂಡೇಶನ್ ನ ಸುಧಾಮೂರ್ತಿ, ಮೇಯರ್, ಡಾ. ಸಿ ಎನ್ ಮಂಜುನಾಥ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಆಗ, ನೇರ ವೇದಿಕೆಗೆ ಆಗಮಿಸಿದ ಸೃಜನ್ ಎನ್ನುವ ಒಂಬತ್ತು ವರ್ಷದ ಬಾಲಕ, ಮುಖ್ಯಮಂತ್ರಿಗಳ ಮತ್ತು ಸುಧಾಮೂರ್ತಿಯವರ ಕಾಲಿಗೆ ಬಿದ್ದು ನಮಸ್ಕರಿಸಿ, ನಂತರ ಸಿಎಂಗೆ 'ಥ್ಯಾಂಕ್ಸ್ ಅಂಕಲ್' ಎಂದು ಹೇಳಿದ್ದಾನೆ.

ಹುಡುಗನಲ್ಲಿ ಮಾಹಿತಿ ಪಡೆದುಕೊಂಡು, ನಂತರ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ, ದೇವರು ಒಳ್ಳೆದು ಮಾಡ್ಲಪ್ಪಾ.. ಎಂದು ಬೆನ್ನು ತಟ್ಟಿ, ಸೆಲ್ಫಿ ತೆಗೆಸಿಕೊಂಡು ಕಳುಹಿಸಿಕೊಟ್ಟ ಘಟನೆ ನಡೆದಿದೆ.
ಸೃಜನ್ ಹದಿನಾರು ತಿಂಗಳ ಮಗುವಾಗಿದ್ದಾಗ ರಕ್ತದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ. ಹುಡುಗನ ತಂದೆ ಕುಮಾರಸ್ವಾಮಿಯವರನ್ನು ಭೇಟಿಯಾಗಿ, ಚಿಕಿತ್ಸೆ ಕೊಡಿಸಿ, ನನ್ನ ಮಗನನ್ನು ಉಳಿಸಿಕೊಡಿ ಎಂದು ಮನವಿ ಮಾಡಿದ್ದರು.
ಅಲ್ಲಿಂದ, ಸುಮಾರು ಆರು ವರ್ಷಗಳ ಕಾಲ ಹುಡುಗನಿಗೆ ಸಿಎಂ ಕುಮಾರಸ್ವಾಮಿ ಚಿಕಿತ್ಸೆ ಕೊಡಿಸಿ ಔದಾರ್ಯ ಮೆರೆದಿದ್ದರು. ಹುಡುಗ ಮತ್ತು ಆತನ ತಂದೆ, ಇಬ್ಬರೂ ಕುಮಾರಸ್ವಾಮಿ ಕಾಲಿಗೆ ಬಿದ್ದು, ಧನ್ಯವಾದ ಸಲ್ಲಿಸಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications