ಹೆಣ್ಣೇ ನೀ ಅಬಲೆಯಲ್ಲ.. ನಿರ್ಭಯಾಳಿಗೆ ಸಂಗೀತ ನಮನ
ಅತ್ಯಾಚಾರದ ಬಗ್ಗೆ ದೇಶಾದ್ಯಂತ ಜಾಗೃತಿ ಮೂಡುವ 'ಸಿಡಿದೇಳಿ... ಭಯ ಬಿಡಿ' ಟ್ಯಾಗ್ಲೈನ್ ಇರುವ ಡಾಕ್ಯುಮೆಂಟರಿ ಚಿತ್ರದ ನಂತರ ಈಗ ನಿರ್ಭಯಾಳಂಥ ಅನೇಕಾನೇಕ ಸ್ತ್ರೀಶಕ್ತಿಗಳಿಗೆ ಹಾಡಿನ ಮೂಲಕ ಗಾಯಕ ಮನೋಜ್ ವಶಿಷ್ಠ ನಮನ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಡಿಸೆಂಬರ್ 16, 2012ರಂದು ಚಲಿಸುತ್ತಿದ್ದ ಬಸ್ಸಿನಲ್ಲಿ 23 ವರ್ಷದ ಅರೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಆರು ಜನ ದುಷ್ಕರ್ಮಿಗಳು ಅತ್ಯಾಚಾರವೆಸಗಿ, ಆಕೆ ಹೊಟ್ಟೆ ಮತ್ತು ಮರ್ಮಾಂಗವನ್ನು ಬಗೆದುಹಾಕಿದ್ದರು. ನಂತರ ಆಕೆ ಮತ್ತು ಆಕೆಯ ಜೊತೆಗಿದ್ದ ಸ್ನೇಹಿತನನ್ನು ಚಲಿಸುತ್ತಿದ್ದ ಬಸ್ಸಿನಿಂದಲೇ ಬೆತ್ತಲು ಸ್ಥಿತಿಯಲ್ಲಿ ಬಿಸಾಕಿದ್ದರು. ಈ ಘಟನೆ ರಾಷ್ಟ್ರದಾದ್ಯಂತ ಭಾರೀ ಆಕ್ರೋಶಕ್ಕೆ ಗುರಿಯಾಗಿತ್ತು. ದೇಶದ ಯುವಜನತೆಯೇ ಸಿಡಿದುನಿಂತಿತ್ತು.

ಈ ದಾರುಣ ಘಟನೆ ನಡೆದು ಎರಡು ವರ್ಷಗಳು ಕಳೆದರೂ ದೇಶದ ಇತರೆಡೆಯಂತೆ ದೆಹಲಿಯಲ್ಲೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ. ತೀರಾ ಇತ್ತೀಚೆಗೆ ಕ್ಯಾಬ್ ಚಾಲಕನೊಬ್ಬ ಅತ್ಯಾಚಾರ ಮಾಡಿದ ಘಟನೆಯಿಂದ ದೆಹಲಿ ಮತ್ತೊಮ್ಮೆ ತಲೆ ತಗ್ಗಿಸುವಂತಾಗಿದೆ. [ಚಲಿಸುತ್ತಿರುವ ವಾಹನದಲ್ಲಿ ನಡೆದ ಅತ್ಯಾಚಾರಗಳು]
ಅದರೆ, ಎಂಥಾ ಪ್ರತಿಕೂಲ ಪರಿಸ್ಥಿತಿ ಎದುರಾದರೂ ಎಷ್ಟೇ ಕಷ್ಟ ನಷ್ಟ ನೋವು ಇದ್ದರೂ ಮಹಿಳೆಯರು ಎಂದಿಗೂ ಅಬಲೆಯರಲ್ಲ, ಸಬಲೆಯರು. ಎಲ್ಲರಲ್ಲೂ ಶಕ್ತಿ ಸ್ವರೂಪಿಣಿ ಎಂಬ ಚೈತನ್ಯ ತುಂಬುವ ಹಾಡನ್ನು ಗಾಯಕ ಮನೋಜ್ ವಶಿಷ್ಠ ಅವರು ನಿರ್ಭಯಾಳಿಗೆ ಅರ್ಪಿಸಿದ್ದಾರೆ. ನಟಿ ಕಮ್ ರಾಜಕಾರಣಿಗಳಾದ ಮಾಳವಿಕ ಅವಿನಾಶ್, ಬಿ.ಜಯಶ್ರೀ ಅವರು ಹಾಡಿನ ನಡುವೆ ನಾಲ್ಕು ಮಾತಾಡಿ ಸ್ಪೂರ್ತಿ ತುಂಬಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications