ಹಂತಕರಿಗೆ ಗಲ್ಲು: ನ್ಯಾಯಾಲಯಕ್ಕೆ ಅಭಿನಂದನೆ ಸಲ್ಲಿಸಿದ ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು, ಮಾರ್ಚ್ 20: ನಿರ್ಭಯ ಹಂತಕರಿಗೆ ಕೊನೆಗೂ ಗಲ್ಲು ಶಿಕ್ಷೆಯಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದು, ನ್ಯಾಯಾಲಯಕ್ಕೆ ನಾವು ಅಭಿನಂದನೆ ಸಲ್ಲಿಸಬೇಕು ಎಂದಿದ್ದಾರೆ.
''ನಿನ್ನೆ ರಾತ್ರಿ ಏನ್ ಏನೋ ಪ್ರಶ್ನಾವಳಿಗಳೆಲ್ಲ ಬಂದಿತ್ತು ಕೊನೆಗೆ ಇವತ್ತು ಅವರಿಗೆ ಗಲ್ಲಾಗಿದೆ ಇದರಿಂದ ಒಂದು ಸಂದೇಶ ಕೊಟ್ಟಂತಾಗಿದೆ. ಆ ಹೆಣ್ಣು ಮಗಳಿಗೆ ನ್ಯಾಯ ಕೊಡಿಸಲು 7 ವರ್ಷ ಬೇಕಾಯ್ತು. ಆ ತಾಯಿ ಎಷ್ಟು ನೋವು ಅನುಭವಿಸರಬೇಕು?'' ಎಂದು ಶಶಿಕಲಾ ಜೊಲ್ಲೆ ಪ್ರಶ್ನೆ ಮಾಡಿದರು.
''ಇದೀಗ ಅವರ ನೋವಿಗೆ ನ್ಯಾಯ ಸಿಕ್ಕಿದೆ ಇಂಥ ಪ್ರಕರಣಗಳಲ್ಲಿ ಆದಷ್ಟು ಬೇಗ ತೀರ್ಪು ಬರವಂತಾಗಬೇಕು ಇದಕ್ಕಾಗಿ ನಾನು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಳ್ಳುತ್ತೇನೆ. ಇಂಥ ಪ್ರಕರಣಗಳನ್ನ ಆದಷ್ಟು ಬೇಗ ತ್ವರಿತಗತಿಯಲ್ಲಿ ತೀರ್ಪು ಪ್ರಕಟಿಸಿ ಶಿಕ್ಷಿಸಬೇಕು.'' ಎಂದರು.

''ನಿರ್ಭಯ ಕುಟುಂಬದ ಜೊತೆ ಇಡೀ ದೇಶದ ಹೆಣ್ಣು ಮಕ್ಕಳು ಇರುತ್ತೇವೆ. ಎಲ್ಲಾ ಹೆಣ್ಣುಮಕ್ಕಳು ಧೈರ್ಯವಾಗಿರಬೇಕು. ನನಗೆ ನಿರ್ಭಯ ತಾಯಿ ಮಾತು ಕೇಳಿ ಖುಷಿ ಆಯ್ತು. ಇಂಥ ನೋವಿನಲ್ಲೂ ಎಲ್ಲಾ ಹೆಣ್ಣು ಮಕ್ಕಳ ಪರವಾಗಿ ನಾನು ನಿಲ್ಲುತ್ತೇನೆ ಎಂದಿದ್ದಾರೆ.'' ಎಂದು ಶಶಿಕಲಾ ಮಾತನಾಡಿದರು.
2012 ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣಕ್ಕೆ ಈಗ ನ್ಯಾಯ ಸಿಕ್ಕಿದೆ. ಇಂದು (ಮಾರ್ಚ್ 20) ಬೆಳಗ್ಗೆ 5.30ಕ್ಕೆ ಅತ್ಯಾಚಾರಿಗಳನ್ನು ಗಲ್ಲಿಗೇರಿಸಲಾಯಿತು. ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಎಲ್ಲಾ ಅರ್ಜಿಗಳು ತಿರಸ್ಕಾರಗೊಂಡಿದ್ದವು. ಪಟಿಯಾಲ ಹೌಸ್ ಕೋರ್ಟ್ ನ್ಯಾಯಾಲಯದ ಡೆತ್ ವಾರೆಂಟ್ನಂತೆ ಶುಕ್ರವಾರ ಮುಂಜಾನೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications